AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಓರ್ವ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಚಂಬಾ ಜಿಲ್ಲೆಯಲ್ಲಿ ಇಂದು ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

BIG NEWS: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಓರ್ವ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
Himachal PradeshImage Credit source: NDTV
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 08, 2022 | 3:12 PM

Share

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಚಂಬಾ ಜಿಲ್ಲೆಯಲ್ಲಿನ ಕಂದಾವರ ಗ್ರಾಮ ಪಂಚಾಯತ್​​ನಲ್ಲಿ ಮೇಘಸ್ಫೋಟದಿಂದಾಗಿ (Cloudburst) ಭಾರೀ ನಾಶನಷ್ಟವುಂಟಾಗಿದೆ. 15ರ ಹರೆಯದ ಬಾಲಕನೊಬ್ಬ ಮೃತಪಟ್ಟಿದ್ದು, ಐದಾರು ಮನೆಗಳ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಶಾಲೈ- ಕಂದಾವರ್ ಒಳಚರಂಡಿ ಮೇಲಿನ ಸೇತುವೆಗೆ ಹಾನಿ ಸಂಭವಿಸಿದ್ದು, ಕೃಷಿಭೂಮಿ ಮುಳುಗಿದೆ. ಮೇಘಸ್ಫೋಟದಿಂದಾಗಿ ಗುಳೆಲ್ ಗ್ರಾಮಕ್ಕೂ ಹಾನಿಯಾಗಿದೆ. ಚಂಬಾ-ಟೆಸ್ಸಾ ರಸ್ತೆಯನ್ನು ನಿರ್ಬಂಧಿಸಲಾಗಿದೆ. ಘಟನೆಯ ನಂತರ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ರಕ್ಷಣಾ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳನ್ನು ಸಹ ಜಿಲ್ಲೆಯಲ್ಲಿ ನಿಯೋಜಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಹಲವೆಡೆ ಭೂಕುಸಿತ ವರದಿಯಾಗಿವೆ. ಮಳೆಯಿಂದಾಗಿ ರಾಜ್ಯದೆಲ್ಲೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮೇಘಸ್ಫೋಟದಿಂದಾಗಿ ಎರಡು ಗ್ರಾಮಗಳು ಮುಳುಗಿದ್ದು ಭದೋಗ ಗ್ರಾಮದಲ್ಲಿ ವಿಜಯ್ ಕುಮಾರ್ ಎಂಬ 15ರ ಹರೆಯದ ಬಾಲಕ ಮೃತಪಟ್ಟಿದ್ದು ಇಬ್ಬರಿಗೆ ಗಾಯಗಳಾಗಿವೆ. ಮೂರು ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಮೇಘಸ್ಫೋಟ ಮತ್ತು ಪ್ರವಾಹದಿಂದಾಗಿ ನೂರರಷ್ಟು ಜನರ ಬದುಕು ಅಸ್ತವ್ಯಸ್ತವಾಗಿದೆ.

Published On - 1:49 pm, Mon, 8 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ