AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ವಿಶ್ವಾಸ ಮತಯಾಚನೆಯಲ್ಲಿ ಗೆಲುವು ಸಾಧಿಸಿದ ಸಿಎಂ ಹೇಮಂತ್ ಸೊರೇನ್

ಇಂದು ಬಿಜೆಪಿ ಬಹಿಷ್ಕಾರದ ನಡುವೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಡಿಸಿದ ವಿಶ್ವಾಸ ನಿರ್ಣಯವನ್ನು ಜಾರ್ಖಂಡ್ ವಿಧಾನಸಭೆ ಅಂಗೀಕರಿಸಿತು. 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಸಿಎಂ ಹೇಮಂತ್ ಸೊರೇನ್ ಮಂಡಿಸಿದ ವಿಶ್ವಾಸಮತ ಯಾಚನೆಗೆ 48 ಶಾಸಕರು ಮತ ಹಾಕಿದ್ದಾರೆ.

BIG NEWS: ವಿಶ್ವಾಸ ಮತಯಾಚನೆಯಲ್ಲಿ ಗೆಲುವು ಸಾಧಿಸಿದ ಸಿಎಂ ಹೇಮಂತ್ ಸೊರೇನ್
CM Hemant Soren
TV9 Web
| Edited By: |

Updated on:Sep 05, 2022 | 2:45 PM

Share

ರಾಂಚಿ : ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿರುವ ಜಾರ್ಖಂಡ್ (Jharkhand) ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಅವರು ಇಂದು ವಿಧಾನಸಭೆಯಲ್ಲಿ ನಡೆಸಿದ ಬಹುಮತ ಪರೀಕ್ಷೆಯಲ್ಲಿ ಜಯಗಳಿಸಿದ್ದು, ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಒಕ್ಕೂಟವು ಬಿಜೆಪಿಯನ್ನು ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.. ಇಂದು ಬಿಜೆಪಿ ಬಹಿಷ್ಕಾರದ ನಡುವೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಡಿಸಿದ ವಿಶ್ವಾಸ ನಿರ್ಣಯವನ್ನು ಜಾರ್ಖಂಡ್ ವಿಧಾನಸಭೆ ಅಂಗೀಕರಿಸಿತು. 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಸಿಎಂ ಹೇಮಂತ್ ಸೊರೇನ್ ಮಂಡಿಸಿದ ವಿಶ್ವಾಸಮತ ಯಾಚನೆಗೆ 48 ಶಾಸಕರು ಮತ ಹಾಕಿದ್ದಾರೆ. ವಿಶೇಷ ಏಕದಿನ ಅಧಿವೇಶನದ ಕಲಾಪಗಳ ಉದ್ದಕ್ಕೂ ಪ್ರತಿಭಟಿಸಿದ ಪ್ರತಿಪಕ್ಷ ಬಿಜೆಪಿ, ಮತದಾನಕ್ಕೂ ಮುನ್ನವೇ ವಿಧಾನಸಭೆಯಿಂದ ಹೊರನಡೆದಿದೆ.

ಮತದಾನದ ಮೊದಲು ಮಾತನಾಡಿದ ಹೇಮಂತ್ ಸೊರೇನ್, ಚುನಾವಣೆಯಲ್ಲಿ ಗೆಲ್ಲಲು ಗಲಭೆಗಳನ್ನು ಉತ್ತೇಜಿಸುವ ಮೂಲಕ ಬಿಜೆಪಿ ದೇಶದಲ್ಲಿ ಅಂತರ್ಯುದ್ಧದಂತಹ ಪರಿಸ್ಥಿತಿ ಯನ್ನು ತರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸರ್ಕಾರವನ್ನು ಉರುಳಿಸುವ ಸಲುವಾಗಿ ಜಾರ್ಖಂಡ್ ಶಾಸಕರನ್ನು ಖರೀದಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ವಿರೋಧ ಪಕ್ಷ ಪ್ರಜಾಪ್ರಭುತ್ವವನ್ನು ನಾಶ ಮಾಡಿದೆ. ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ. ಸದನದಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೇಳಿದರು.

ಬಟ್ಟೆ, ಪಡಿತರ, ದಿನಸಿ ಖರೀದಿಸುವವರ ಬಗ್ಗೆ ಕೇಳಿದ್ದೇವೆ ಆದರೆ ಬಿಜೆಪಿ ಮಾತ್ರ ಶಾಸಕರನ್ನು ಖರೀದಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢದಿಂದ ವಿಶೇಷ ವಿಮಾನದಲ್ಲಿ ಆಡಳಿತಾರೂಢ ಒಕ್ಕೂಟದ ಶಾಸಕರು ನಿನ್ನೆ ರಾಜ್ಯ ರಾಜಧಾನಿ ರಾಂಚಿಗೆ ಹಿಂತಿರುಗಿದರು, ಅಲ್ಲಿ ಶಾಸಕರ ಖರೀದಿ ಪ್ರಯತ್ನಗಳನ್ನು ತಡೆಯಲು ಐಷಾರಾಮಿ ರೆಸಾರ್ಟ್‌ನಲ್ಲಿ ಅವರನ್ನು ಇರಿಸಲಾಗಿತ್ತು. ರಾಜ್ಯ ಅತಿಥಿ ಗೃಹದಲ್ಲಿ ರಾತ್ರಿಯನ್ನು ಒಟ್ಟಿಗೆ ಕಳೆದ ಶಾಸಕರನ್ನು ಇಂದು ನೇರವಾಗಿ ವಿಧಾನಸಭೆಗೆ ಕರೆದೊಯ್ಯಲಾಯಿತು.

ನನ್ನನ್ನು ಕೆಳಗಿಳಿಸಲು ಪ್ರತಿಪಕ್ಷಗಳು ಷಡ್ಯಂತ್ರಗಳ ಜಾಲ ಬೀಸಿದ್ದಾರೆ. ಆದರೆ ಅವರು ತಮ್ಮದೇ ಜಾಲದಲ್ಲಿ ಸಿಕ್ಕಿ ಹಾಕಿ ಕೊಳ್ಳುತ್ತಾರೆ ಎಂದು ಸಿಎಂ ಹೇಳಿದ್ದಾರೆ

ಗಣಿ ಗುತ್ತಿಗೆ ನೀಡುವ ಮೂಲಕ ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹೇಮಂತ್  ಸೊರೇನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಹೇಳಿದೆ. ಪಕ್ಷವು ಹೊಸ ಚುನಾವಣೆಗೆ ಕರೆ ನೀಡಿದ್ದು ಮುಖ್ಯಮಂತ್ರಿ “ನೈತಿಕ ಆಧಾರದ ಮೇಲೆ” ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿನ ಮಾದರಿಯನ್ನು ಅನುಸರಿಸಿ ಬಿಜೆಪಿಯು ಬಿಕ್ಕಟ್ಟಿನ ಲಾಭವನ್ನು ಪಡೆಯಲು ಮತ್ತು ಆಡಳಿತಾರೂಢ ಸಮ್ಮಿಶ್ರ ಶಾಸಕರನ್ನು ಖರೀದಿಸಲು ಮತ್ತು ಚುನಾಯಿತ ಸರ್ಕಾರವನ್ನು ಉರುಳಿಸಲು ಆಮಿಷ ಒಡ್ಡಲು ಪ್ರಯತ್ನಿಸುತ್ತಿದೆ ಎಂದು ಸೊರೆನ್ ಮತ್ತು ಅವರ ಪಕ್ಷ ಜೆಎಂಎಂ ಆರೋಪಿಸಿದೆ

ಚುನಾವಣಾ ಆಯೋಗವು ರಾಜ್ಯಪಾಲರಿಗೆ ತನ್ನ ಅಭಿಪ್ರಾಯವನ್ನು ಸಲ್ಲಿಸಿದ್ದು, ಅವರು ಯಾವುದೇ ದಿನ ಸೊರೆನ್ ಅವರ ನಿರ್ಧಾರವನ್ನು ಪ್ರಕಟಿಸುವ ನಿರೀಕ್ಷೆಯಿದೆ. 81 ಸದಸ್ಯರ ವಿಧಾನಸಭೆಯಲ್ಲಿ ಆಡಳಿತಾರೂಢ ಸಮ್ಮಿಶ್ರ 49 ಶಾಸಕರನ್ನು ಹೊಂದಿದ್ದು, ಇದರಲ್ಲಿ ಬಹುಮತದ ಗುರುತು 41. ಅತಿ ದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದೆ, ಕಾಂಗ್ರೆಸ್ 18 ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಬ್ಬರನ್ನು ಹೊಂದಿದೆ. ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿ 26 ಶಾಸಕರನ್ನು ಹೊಂದಿದೆ.

Published On - 1:47 pm, Mon, 5 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್