AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಕೇಜ್ರಿವಾಲ್ ಸರ್ಕಾರದ ಮದ್ಯ ನೀತಿ ಬಗ್ಗೆ ಸಿಬಿಐ ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗ್ರಹ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ವಿವಾದಾತ್ಮಕ ಹೊಸ ಮದ್ಯ ನೀತಿಯ ಕುರಿತು ತನಿಖಾ ಸಂಸ್ಥೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಇಂದು ಶಿಫಾರಸು ಮಾಡಿದ್ದಾರೆ.

BIG NEWS: ಕೇಜ್ರಿವಾಲ್ ಸರ್ಕಾರದ ಮದ್ಯ ನೀತಿ ಬಗ್ಗೆ ಸಿಬಿಐ ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗ್ರಹ
KejriwalImage Credit source: NDTV
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 22, 2022 | 1:19 PM

Share

ನವದೆಹಲಿ:  ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ (Arvind Kejriwal) ನೇತೃತ್ವದ ಸರ್ಕಾರದ ವಿವಾದಾತ್ಮಕ ಹೊಸ ಮದ್ಯ ನೀತಿಯ (excise policy) ಕುರಿತು ತನಿಖಾ ಸಂಸ್ಥೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Lieutenant Governor Vinai Kumar Saxena) ಇಂದು ಶಿಫಾರಸು ಮಾಡಿದ್ದಾರೆ.  ಮದ್ಯ ಪರವಾನಗಿದಾರರಿಗೆ ಟೆಂಡರ್ ನಂತರದ ಅನಗತ್ಯ ಪ್ರಯೋಜನಗಳನ್ನು ಒದಗಿಸಲು ಉದ್ದೇಶ ಪೂರ್ವಕ ಮತ್ತು ಸಮಗ್ರ ಕಾರ್ಯವಿಧಾನಗಳ ಲೋಪ ನಡೆದಿದೆ ಎಂದು ಪ್ರಧಾನ ಕಾರ್ಯದರ್ಶಿಯವರು ಜುಲೈ 8ರಂದು ಸಲ್ಲಿಸಿದ ವರದಿಯಲ್ಲಿ ಹೇಳಲಾಗಿದೆ ಎಂದು ಸಕ್ಸೇನಾ ಅವರ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಹೆಸರನ್ನು ನೇರವಾಗಿ  ಉಲ್ಲೇಖಿಸಿದ  ಗವರ್ನರ್, ಉನ್ನತ ರಾಜಕೀಯ ನಾಯಕರಿಗೆ ಹಣಕಾಸಿನ ಅನುಕೂಲಗಳನ್ನು ನೀಡಿದೆ ಎಂಬುದನ್ನು ಈವರದಿ ತೋರಿಸುತ್ತದೆ.  ನೂತನ ಮದ್ಯ ನೀತಿಯು ಖಾಸಗಿ ಮದ್ಯ ದೊರೆಗಳಿಗೆ ಆರ್ಥಿಕ ಲಾಭ ನೀಡುವ ಉದ್ದೇಶದಿಂದ ಮಾಡಿದ್ದು ಇದು ವ್ಯಕ್ತಿಗಳಿಂದ ಹಿಡಿದು ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ ಅವರಿಗೆ ಆರ್ಥಿಕ ಲಾಭ ನೀಡುವ ಉದ್ದೇಶ ಹೊಂದಿದೆ ಎಂದು ಗವರ್ನರ್ ಆರೋಪಿಸಿದ್ದಾರೆ.

ಅಬಕಾರಿ ಇಲಾಖೆಯ ಉಸ್ತುವಾರಿ ಸಚಿವರಾದ ಮನೀಶ್ ಸಿಸೋಡಿಯಾ ಅವರು ಈ ಮದ್ಯನೀತಿಯನ್ನು ಜಾರಿಗೆ ತಂದಿದ್ದು, ಇದು ಶಾಸನಬದ್ಧ ನಿಬಂಧನೆಗಳು ಮತ್ತು ಅಧಿಸೂಚಿತ ಅಬಕಾರಿ ನೀತಿಯ ಉಲ್ಲಂಘನೆಯು ಭಾರಿ ಆರ್ಥಿಕ ಪರಿಣಾಮಗಳನ್ನು ಹೊಂದಿದೆ ಎಂದು ಸಕ್ಸೇನಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ! ಟೆಂಪೋ, ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಜಖಂ
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಚುನಾವಣೆ: ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Image
Chicago Shootings: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಚಿಕಾಗೊದಲ್ಲಿ ಐವರು ಸಾವು, 16 ಮಂದಿಗೆ ಗಾಯ

ಸಿಸೋಡಿಯಾ ಅವರು ಮದ್ಯ ಪರವಾನಗಿದಾರರಿಗೆ ಆರ್ಥಿಕ ಲಾಭವನ್ನುಂಟು ಮಾಡಲು ಸಹಾಯ ಮಾಡಿದ್ದಾರೆ ಎಂದು ಸಕ್ಸೇನಾ ಆರೋಪಿಸಿದ್ದಾರೆ.

Published On - 11:13 am, Fri, 22 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ