AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಸಹಾಯಕಿ ಅರ್ಪಿತಾ ಮುಖರ್ಜಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

BIG NEWS: ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಸಹಾಯಕಿ ಅರ್ಪಿತಾ ಮುಖರ್ಜಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ
Partha Chatterjee and aide Arpita Mukherjee
TV9 Web
| Edited By: |

Updated on:Aug 18, 2022 | 4:05 PM

Share

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆಗಸ್ಟ್ 31 ರಂದು ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

TMCಯ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರ ವಕೀಲರು ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಕೋರಿದರು. ಅವರನ್ನು ಮತ್ತಷ್ಟು ಕಸ್ಟಡಿಯಲ್ಲಿ ಇರಿಸಿದರೆ ಅವರಿಗೆ ವೈದ್ಯಕೀಯ ನೆರವು ಸಿಗುವುದಿಲ್ಲ. ಅವರ ಜೀವಕ್ಕೆ ಅಪಾಯವಿದೆ. ಪಾರ್ಥನ ಸ್ವಾಧೀನದಿಂದ ಏನನ್ನೂ ಪಡೆಯಲಾಗಿಲ್ಲ ಎಂದು ಅವರ ವಕೀಲರು ಹೇಳಿದರು.

ನ್ಯಾಯಾಂಗ ಬಂಧನದ ಕೊನೆಯ ದಿನದಂದು ಜಾರಿ ನಿರ್ದೇಶನಾಲಯವು ವಿಚಾರಣೆಗೆ ಮಾಡಲಿದೆ. 14 ದಿನಗಳ ಕಾಲಾವಕಾಶ ದೊರೆತ ನಂತರ ತನಿಖೆ ನಡೆಸುವುದು ಒಂದು ಮಾರ್ಗವೇ? ಎಂದು ಅವರು ಪ್ರಶ್ನಿಸಿದರು. ಪಾರ್ಥ ಅವರು ಈ ಹಿಂದೆ ಬಂಗಾಳದ ಶಿಕ್ಷಣ ಸಚಿವರಾಗಿದ್ದಾಗ ಶಾಲಾ ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ
Image
ಹೈದರಾಬಾದ್ ಮಾಲ್​​ನ ಎಸ್ಕಲೇಟರ್​​ನಿಂದ ಜಾರಿ ಬಿದ್ದ 10 ಮಕ್ಕಳಿಗೆ ಗಾಯ
Image
Shocking News: ತಪಾಸಣೆ ಮಾಡಲು ಪೊಲೀಸರು ಹಾಲಿನ ಟ್ಯಾಂಕರ್ ತಡೆದರು.. ಒಳಗಿನದನ್ನು ಕಂಡು ಮನಸು ಬೇಸರಗೊಂಡಿತು, ಅಂಥದ್ದೇನಿತ್ತು?
Image
DOLO-650ಯನ್ನು ವೈದ್ಯರು ರೋಗಿಗಳಿಗೆ ಶಿಫಾರಸು ಮಾಡುವುದಕ್ಕಾಗಿ ₹1,000 ಕೋಟಿ ವ್ಯಯಿಸಿದ ಡೊಲೊ ಕಂಪನಿ
Image
BIG NEWS: ಮಹಾರಾಷ್ಟ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಅನುಮಾನಾಸ್ಪದ ದೋಣಿ ಪತ್ತೆ

ಶಿಕ್ಷಕರ ನೇಮಕಾತಿ (SSC) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ನ್ಯಾಯಾಲಯವು ಪಾರ್ಥ ಚಟರ್ಜಿ (Partha Chatterjee) ಮತ್ತು ಅರ್ಪಿತಾ ಮುಖರ್ಜಿಗೆ ಆಗಸ್ಟ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ಆರೋಪಿಗಳಾದ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಜುಲೈ 23ರಂದು ಇಡಿ ಬಂಧಿಸಿದ್ದು ಅವರು ಇಲ್ಲಿಯವರೆಗೆ ಇಡಿ ವಶದಲ್ಲೇ ಇದ್ದಾರೆ. ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಚಟರ್ಜಿ ಅವರನ್ನು ಮಮತಾ ಬ್ಯಾನರ್ಜಿ ಟಿಎಂಸಿ ನೇತೃತ್ವದ ತಮ್ಮ ಸಚಿವ ಸಂಪುಟದಿಂದ ತೆಗೆದು ಹಾಕಿದ್ದಾರೆ. ಚಟರ್ಜಿ ಅವರು 15 ದಿನ ನಮ್ಮ ವಶದಲ್ಲಿದ್ದರು. ಅದರಲ್ಲಿ ಎರಡು ದಿನ ಸರ್ಕಾರಿ ಎಸ್ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗುವ ಮೂಲಕ ಎರಡು ದಿನಗಳನ್ನು ಅವರು ವ್ಯರ್ಥ ಮಾಡಿದ್ದಾರೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಚಟರ್ಜಿ ಅವರನ್ನು ಭುವನೇಶ್ವರದಲ್ಲಿರುವ ಏಮ್ಸ್ ಗೆ ಕರದೊಯ್ದು ಅಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಚಟರ್ಜಿ ಅವರಿಗೆ ಆರೋಗ್ಯ ಸಮಸ್ಯೆಯೇನೂ ಇಲ್ಲ ಎಂದು ಅಲ್ಲಿನ ವೈದ್ಯರು ಹೇಳಿದ್ದರು. ಮುಖರ್ಜಿ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಹಲವು ದಾಖಲೆ ಪತ್ರಗಳ ಜತೆ 49.8 ಕೋಟಿ ನಗದು, ದೊಡ್ಡ ಪ್ರಮಾಣದ ಚಿನ್ನಾಭರಣ, ಚಿನ್ನದ ಗಟ್ಟಿಯನ್ನು ಇಡಿ ವಶ ಪಡಿಸಿದೆ.

Published On - 4:04 pm, Thu, 18 August 22

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ