AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಸೆ.21 ರವರೆಗೆ ಸಿಬಿಐ ವಶಕ್ಕೆ

ಎಸ್‌ಎಸ್‌ಸಿ ಹಗರಣ ಪ್ರಕರಣ ಸಂಬಂಧಿಸಿದಂತೆ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಸೆಪ್ಟೆಂಬರ್ 21 ರವರೆಗೆ ಸಿಬಿಐಗೆ ಅಲಿಪೋರ್ ನ್ಯಾಯಾಲಯವು ವಶಕ್ಕೆ ನೀಡಿದೆ.

BIG NEWS: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಸೆ.21 ರವರೆಗೆ ಸಿಬಿಐ ವಶಕ್ಕೆ
Former minister Partha Chatterjee
TV9 Web
| Edited By: |

Updated on:Sep 16, 2022 | 6:20 PM

Share

ಪಶ್ಚಿಮ ಬಂಗಾಳ: ಕೇಂದ್ರೀಯ ತನಿಖಾ ದಳ (CBI) ಶುಕ್ರವಾರ ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿಯ (WBBSE) ಮಾಜಿ ಅಧ್ಯಕ್ಷ ಕಲ್ಯಾಣ್‌ಮೋಯ್ ಗಂಗೂಲಿ (Kalyanmoy Ganguly) ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರನ್ನು ಶುಕ್ರವಾರ ಅಲಿಪೋರ್ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಸರ್ಕಾರಿ ಶಾಲೆಗಳಲ್ಲಿನ ಗ್ರೂಪ್-ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಗಂಗೂಲಿ ಮತ್ತು ಚಟರ್ಜಿ ಅವರನ್ನು ಸೆಪ್ಟೆಂಬರ್ 21 ರವರೆಗೆ ಅಲಿಪೋರ್ ನ್ಯಾಯಾಲಯವು ಸಿಬಿಐ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಮೇ 20 ರಂದು ಕಲ್ಯಾಣ್‌ಮೋಯ್ ಗಂಗೂಲಿ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಸೆ.21ರವರೆಗೆ ಕಲ್ಯಾಣಮೋಯ್ ಗಂಗೂಲಿ ಸಿಬಿಐ ಕಸ್ಟಡಿಗೆ

ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಕಲ್ಯಾಣ್‌ಮೋಯ್ ಗಂಗೂಲಿ ಅವರನ್ನು ಶುಕ್ರವಾರ ಕೋಲ್ಕತ್ತಾದ ಅಲಿಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಗುರುವಾರ ಅವರನ್ನು ಸಿಬಿಐನ ಕೋಲ್ಕತ್ತಾ ಕಚೇರಿಗೆ ಕರೆಸಿಕೊಳ್ಳಲಾಗಿದ್ದು, ಅಲ್ಲಿ ಅವರು ಸಹಕರಿಸಿಲ್ಲ ಇದಾದ ನಂತರ ಅವರನ್ನು ಬಂಧಿಸಲಾಯಿತು.

ಪಶ್ಚಿಮ ಬಂಗಾಳದ ವಿವಿಧ ಶಾಲೆಗಳಲ್ಲಿ ಗ್ರೂಪ್-ಸಿ ಸಿಬ್ಬಂದಿ ಹುದ್ದೆಗಳಿಗೆ ಅನರ್ಹ ಮತ್ತು ಪಟ್ಟಿ ಮಾಡದ ಅಭ್ಯರ್ಥಿಗಳಿಗೆ ಅನಗತ್ಯ ಲಾಭವನ್ನು ನೀಡಿದ್ದಾರೆ ಎಂದು ಇವರ ಮೇಲೆ ಆರೋಪವಿದೆ.

ಪಾರ್ಥ ಚಟರ್ಜಿ ಅವರ ಸಿಬಿಐ ಕಸ್ಟಡಿ ಅವಧಿ ಸೆ.21ರವರೆಗೆ ವಿಸ್ತರಣೆ ಅಲಿಪೋರ್ ನ್ಯಾಯಾಲಯವು ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿಯ ಬಂಧನವನ್ನು ಸೆಪ್ಟೆಂಬರ್ 21 ರವರೆಗೆ ತನಿಖಾ ಸಂಸ್ಥೆಗೆ ನೀಡಿದೆ. ಮಾಜಿ ಸಚಿವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಕಸ್ಟಡಿಗೆ ಕೋರಿ ಸಿಬಿಐ ನ್ಯಾಯಾಲಯದ ಮೊರೆ ಹೋಗಿತ್ತು. ಬೇಡಿಕೆಯ ನಂತರ, ನ್ಯಾಯಾಲಯವು ಚಟರ್ಜಿಯನ್ನು ನ್ಯಾಯಾಲಯದ ಮುಂದೆ ಭೌತಿಕವಾಗಿ ಹಾಜರುಪಡಿಸುವಂತೆ ಜೈಲು ಪ್ರಾಧಿಕಾರಕ್ಕೆ ಆದೇಶಿಸಿತು. ಈ  ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಚಟರ್ಜಿ ಮತ್ತು ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಜುಲೈ 23 ರಂದು ಬಂಧಿಸಿದ್ದು, ಕೊಲ್ಕತ್ತಾದ ಫ್ಲಾಟ್ ನಿಂದ ಚಿನ್ನಾಭರಣ, ಅಪಾರ ನಗದು ಮತ್ತು ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದೆ.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವರನ್ನು ಶುಕ್ರವಾರ ಕೋಲ್ಕತ್ತಾದ ಅಲಿಪುರ ಜಿಲ್ಲಾ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Published On - 5:30 pm, Fri, 16 September 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್