BIG NEWS: ಬಿಜೆಪಿಯಿಂದ ನನಗೆ ಆಫರ್ ಬಂದಿದೆ, ಗಂಭೀರ ಆರೋಪ ಮಾಡಿದ ಮನೀಶ್ ಸಿಸೋಡಿಯಾ

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 22, 2022 | 11:32 AM

ಆಮ್ ಆದ್ಮಿ ಪಕ್ಷವನ್ನು ತೊರೆದು ನಮ್ಮ ಪಕ್ಷಕ್ಕೆ ಬನ್ನಿ, ನಿಮ್ಮ ಎಲ್ಲಾ ಸಿಬಿಐ ತನಿಖೆ ಮತ್ತು ಎಲ್ಲ ಪ್ರಕರಣಗಳಿಂದ ಮುಕ್ತಿ ಸಿಗುವಂತೆ ಮಾಡುತ್ತೇವೆ ಎಂಬ ಸಂದೇಶ ಬಿಜೆಪಿಯಿಂದ ಬಂದಿದೆ ಎಂದು ಹೇಳಿದ್ದಾರೆ.

BIG NEWS: ಬಿಜೆಪಿಯಿಂದ ನನಗೆ ಆಫರ್ ಬಂದಿದೆ, ಗಂಭೀರ ಆರೋಪ ಮಾಡಿದ ಮನೀಶ್ ಸಿಸೋಡಿಯಾ
Manish Sisodia
Follow us on

ದೆಹಲಿ: ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮದ್ಯದ ನೀತಿ ಉಲ್ಲಂಘನೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಸಿಬಿಐ ತನಿಖೆಯನ್ನು ನಡೆಸುತ್ತಿರುವ ಹೊತ್ತಿನಲ್ಲಿ ಬಿಜೆಪಿ ನನಗೆ ಆಫರ್ ಮಾಡಿದೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ತೊರೆದು ನಮ್ಮ ಪಕ್ಷಕ್ಕೆ ಬನ್ನಿ, ನಿಮ್ಮ ಎಲ್ಲಾ ಸಿಬಿಐ ತನಿಖೆ ಮತ್ತು ಎಲ್ಲ ಪ್ರಕರಣಗಳಿಂದ ಮುಕ್ತಿ ನೀಡುವಂತೆ ಮಾಡುತ್ತೇವೆ ಎಂಬ ಸಂದೇಶ ಬಿಜೆಪಿಯಿಂದ ಬಂದಿದೆ ಎಂದು ಹೇಳಿದ್ದಾರೆ. ಇದೀಗ ಅವರ ವಿರುದ್ಧದ ನಿರ್ದೇಶನಾಲಯ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ. ನನಗೆ ಬಿಜೆಪಿಯಿಂದ ಸಂದೇಶ ಬಂದಿದೆ, ಆಪ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿಕೊಳ್ಳಿ, ಎಲ್ಲಾ ಸಿಬಿಐ, ಇಡಿ ಪ್ರಕರಣಗಳನ್ನು ಮುಚ್ಚಲಾಗುವುದು ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಸಿಸೋಡಿಯಾ ಹೇಳಿದ್ದಾರೆ. ಬಿಜೆಪಿಗೆ ನೀವು ಏನು ಬೇಕಾದರೂ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಗೆ ನನ್ನ ಪ್ರತ್ಯುತ್ತರ ನೀಡಿದ ಮನೀಶ್ ಸಿಸೋಡಿಯಾ: ನಾನು ರಜಪೂತ, ಮಹಾರಾಣಾ ಪ್ರತಾಪ್ ವಂಶಸ್ಥ. ನಾನು ನನ್ನ ತಲೆಯನ್ನು ಕತ್ತರಿಸುತ್ತೇನೆ ಆದರೆ ಭ್ರಷ್ಟ ಪಿತೂರಿಗಾರರ ಮುಂದೆ ಬಗ್ಗುವುದಿಲ್ಲ. ನನ್ನ ಮೇಲಿನ ಎಲ್ಲಾ ಪ್ರಕರಣಗಳು ಸುಳ್ಳು, ನೀವು ಏನು ಬೇಕಾದರೂ ಮಾಡಿ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಪರಿಚಯಿಸಲಾದ ದೆಹಲಿಯ ಮದ್ಯ ನೀತಿಯಲ್ಲಿನ ಅಕ್ರಮಗಳು ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಬಿಐ ಇತ್ತೀಚೆಗೆ ಮನೀಶ್ ಸಿಸೋಡಿಯಾ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು ಆದರೆ ಅದನ್ನು ಹಿಂದಕ್ಕೆ ತೆಗೆದುಕೊಂಡಿತು.

ಮನೀಶ್ ಸಿಸೋಡಿಯಾ ಬೆಂಬಲಿಸಿ, ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಇಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ನೇತೃತ್ವದ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವಲ್ಲಿ ನಿರತವಾಗಿದೆ ಮತ್ತು ಜನರು ಗಗನಕ್ಕೇರುತ್ತಿರುವ ಹಣದುಬ್ಬರ ಮತ್ತು ಡೈವಿಂಗ್ ರೂಪಾಯಿಯಿಂದ ಜನರು ಬಳಲುತ್ತಿರುವಾಗಲೂ ಚುನಾಯಿತ ಸರ್ಕಾರಗಳನ್ನು ಉರುಳಿಸಲು ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಎಎಪಿಯ ಜನಪ್ರಿಯತೆಗೆ ಬಿಜೆಪಿ ಭಯಪಡುವ ಕಾರಣದಿಂದ ತಮ್ಮ ವಿರುದ್ಧದ ಇಂತಹ ವಿತ್ತೂರಿಗಳನ್ನು ಮಾಡುತ್ತಿದೆ ಎಂದು ಸೋಡಿಯಾ ಆರೋಪಿಸಿದ್ದಾರೆ. 2024 ರ ಸಾರ್ವತ್ರಿಕ ಚುನಾವಣೆಯು ಶ್ರೀ ಕೇಜ್ರಿವಾಲ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಸ್ಪರ್ಧೆಯಾಗಿದೆ ಮತ್ತು ಎಎಪಿ ನಾಯಕನನ್ನು ತಡೆಯಲು ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

Published On - 11:32 am, Mon, 22 August 22