AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಸ್ಟಾರ್‌ಬಕ್ಸ್ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ

ಲಕ್ಷ್ಮಣ್ ನರಸಿಂಹನ್ ಸ್ಟಾರ್​ಬಕ್ಸ್​ ಕಂಪನಿಯ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಟಾರ್‌ಬಕ್ಸ್ ನಿರ್ದೇಶಕರ ಮಂಡಳಿಯ ಸದಸ್ಯರಾಗಲಿದ್ದಾರೆ ಎಂದು ಸ್ಟಾರ್‌ಬಕ್ಸ್ ಗುರುವಾರ ಘೋಷಿಸಿದೆ.

Big News: ಸ್ಟಾರ್‌ಬಕ್ಸ್ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ
ಲಕ್ಷ್ಮಣ್ ನರಸಿಂಹನ್
TV9 Web
| Updated By: ಸುಷ್ಮಾ ಚಕ್ರೆ|

Updated on: Sep 02, 2022 | 11:11 AM

Share

ನವದೆಹಲಿ: ಭಾರತ ಮೂಲದ ಲಕ್ಷ್ಮಣ್ ನರಸಿಂಹನ್ (Laxman Narasimhan) ಅವರನ್ನು ಪ್ರಸಿದ್ಧ ಕಾಫಿ ಕಂಪನಿಯಾಗಿರುವ ಸ್ಟಾರ್‌ಬಕ್ಸ್‌ನ (Starbucks) ಹೊಸ ಸಿಇಒ ಆಗಿ ನೇಮಕ ಮಾಡಲಾಗಿದೆ. ಈ ಮೂಲಕ 55 ವರ್ಷದ ಲಕ್ಷ್ಮಣ್ ನರಸಿಂಹನ್ ಜಾಗತಿಕ ನಿಗಮಗಳ ಚುಕ್ಕಾಣಿ ಹಿಡಿದಿರುವ ಭಾರತೀಯ ಮೂಲದ ಉದ್ಯಮಿಗಳ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಲಕ್ಷ್ಮಣ್ ನರಸಿಂಹನ್ ಈ ಹಿಂದೆ ಬಹುರಾಷ್ಟ್ರೀಯ ಗ್ರಾಹಕ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕಾಂಶ ಕಂಪನಿಯಾದ ಇಂಗ್ಲೆಂಡ್ ಮೂಲದ ರೆಕಿಟ್ ಬೆನ್‌ಕೈಸರ್‌ನ ಸಿಇಒ ಆಗಿದ್ದರು.

ಲಕ್ಷ್ಮಣ್ ನರಸಿಂಹನ್ ಸ್ಟಾರ್​ಬಕ್ಸ್​ ಕಂಪನಿಯ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಟಾರ್‌ಬಕ್ಸ್ ನಿರ್ದೇಶಕರ ಮಂಡಳಿಯ ಸದಸ್ಯರಾಗಲಿದ್ದಾರೆ ಎಂದು ಸ್ಟಾರ್‌ಬಕ್ಸ್ ಗುರುವಾರ ಘೋಷಿಸಿದೆ. ಲಕ್ಷ್ಮಣ್ ನರಸಿಂಹನ್ ಅವರು ಲಂಡನ್‌ನಿಂದ ಸಿಯಾಟಲ್ ಪ್ರದೇಶಕ್ಕೆ ಸ್ಥಳಾಂತರಗೊಂಡ ನಂತರ 2022ರ ಅಕ್ಟೋಬರ್ 1ರಂದು ಸ್ಟಾರ್‌ಬಕ್ಸ್‌ನ CEO ಆಗಿ ಸೇರಿಕೊಳ್ಳಲಿದ್ದಾರೆ.

ಲಕ್ಷ್ಮಣ್ ನರಸಿಂಹನ್ ಅವರು ಸೆಪ್ಟೆಂಬರ್ 30ರಂದು ತಮ್ಮ ಕಂಪನಿಯ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ರೆಕಿಟ್ ಬೆಂಕಿಸರ್ ತಿಳಿಸಿದೆ. ಲಕ್ಷ್ಮಣ್ ನರಸಿಂಹನ್ ವೈಯಕ್ತಿಕ ಮತ್ತು ಕೌಟುಂಬಿಕ ಕಾರಣಗಳಿಂದ ಇಂಗ್ಲೆಂಡ್​​ಗೆ ಮರಳಲು ನಿರ್ಧರಿಸಿದ್ದಾರೆ ಎಂದು ಖಚಿತಪಡಿಸಿದೆ.

ಇದನ್ನೂ ಓದಿ: NSE Phone Tapping: ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಜಾಮೀನು ಅರ್ಜಿ ವಜಾ ಮಾಡಿದ ದೆಹಲಿ ನ್ಯಾಯಾಲಯ

ಈ ಮೂಲಕ ಮೈಕ್ರೋಸಾಫ್ಟ್ ಸಿಇಒ ಸತ್ಯ ನಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್, ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಮತ್ತು ಟ್ವಿಟರ್ ಮುಖ್ಯಸ್ಥ ಪರಾಗ್ ಅಗರವಾಲ್ ಸೇರಿದಂತೆ ಅಮೆರಿಕ ಮೂಲದ ಜಾಗತಿಕ ದೈತ್ಯ ಕಂಪನಿಗಳ ಚುಕ್ಕಾಣಿ ಹಿಡಿದಿರುವ ಭಾರತೀಯ ಮೂಲದ ಸಿಇಒಗಳ ಪಟ್ಟಿಗೆ ಲಕ್ಷ್ಮಣ್ ನರಸಿಂಹನ್ ಕೂಡ ಸೇರಿದ್ದಾರೆ.

ಲಕ್ಷ್ಮಣ್ ನರಸಿಂಹನ್ ಭಾರತದ ಪುಣೆ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಇಂಜಿನಿಯರಿಂಗ್‌ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅವರು ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ಲಾಡರ್ ಇನ್ಸ್ಟಿಟ್ಯೂಟ್‌ನಿಂದ ಜರ್ಮನ್ ಮತ್ತು ಅಂತಾರಾಷ್ಟ್ರೀಯ ಅಧ್ಯಯನಗಳಲ್ಲಿ ಎಂಎ ಮತ್ತು ವಾರ್ಟನ್ ಸ್ಕೂಲ್ ಆಫ್ ದಿ ಯೂನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದಿಂದ ಹಣಕಾಸು ವಿಷಯದಲ್ಲಿ ಎಂಬಿಎ ಪದವಿ ಹೊಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್