Big News: ಸ್ಟಾರ್‌ಬಕ್ಸ್ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ

ಲಕ್ಷ್ಮಣ್ ನರಸಿಂಹನ್ ಸ್ಟಾರ್​ಬಕ್ಸ್​ ಕಂಪನಿಯ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಟಾರ್‌ಬಕ್ಸ್ ನಿರ್ದೇಶಕರ ಮಂಡಳಿಯ ಸದಸ್ಯರಾಗಲಿದ್ದಾರೆ ಎಂದು ಸ್ಟಾರ್‌ಬಕ್ಸ್ ಗುರುವಾರ ಘೋಷಿಸಿದೆ.

Big News: ಸ್ಟಾರ್‌ಬಕ್ಸ್ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ
ಲಕ್ಷ್ಮಣ್ ನರಸಿಂಹನ್
Follow us
| Updated By: ಸುಷ್ಮಾ ಚಕ್ರೆ

Updated on: Sep 02, 2022 | 11:11 AM

ನವದೆಹಲಿ: ಭಾರತ ಮೂಲದ ಲಕ್ಷ್ಮಣ್ ನರಸಿಂಹನ್ (Laxman Narasimhan) ಅವರನ್ನು ಪ್ರಸಿದ್ಧ ಕಾಫಿ ಕಂಪನಿಯಾಗಿರುವ ಸ್ಟಾರ್‌ಬಕ್ಸ್‌ನ (Starbucks) ಹೊಸ ಸಿಇಒ ಆಗಿ ನೇಮಕ ಮಾಡಲಾಗಿದೆ. ಈ ಮೂಲಕ 55 ವರ್ಷದ ಲಕ್ಷ್ಮಣ್ ನರಸಿಂಹನ್ ಜಾಗತಿಕ ನಿಗಮಗಳ ಚುಕ್ಕಾಣಿ ಹಿಡಿದಿರುವ ಭಾರತೀಯ ಮೂಲದ ಉದ್ಯಮಿಗಳ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಲಕ್ಷ್ಮಣ್ ನರಸಿಂಹನ್ ಈ ಹಿಂದೆ ಬಹುರಾಷ್ಟ್ರೀಯ ಗ್ರಾಹಕ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕಾಂಶ ಕಂಪನಿಯಾದ ಇಂಗ್ಲೆಂಡ್ ಮೂಲದ ರೆಕಿಟ್ ಬೆನ್‌ಕೈಸರ್‌ನ ಸಿಇಒ ಆಗಿದ್ದರು.

ಲಕ್ಷ್ಮಣ್ ನರಸಿಂಹನ್ ಸ್ಟಾರ್​ಬಕ್ಸ್​ ಕಂಪನಿಯ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸ್ಟಾರ್‌ಬಕ್ಸ್ ನಿರ್ದೇಶಕರ ಮಂಡಳಿಯ ಸದಸ್ಯರಾಗಲಿದ್ದಾರೆ ಎಂದು ಸ್ಟಾರ್‌ಬಕ್ಸ್ ಗುರುವಾರ ಘೋಷಿಸಿದೆ. ಲಕ್ಷ್ಮಣ್ ನರಸಿಂಹನ್ ಅವರು ಲಂಡನ್‌ನಿಂದ ಸಿಯಾಟಲ್ ಪ್ರದೇಶಕ್ಕೆ ಸ್ಥಳಾಂತರಗೊಂಡ ನಂತರ 2022ರ ಅಕ್ಟೋಬರ್ 1ರಂದು ಸ್ಟಾರ್‌ಬಕ್ಸ್‌ನ CEO ಆಗಿ ಸೇರಿಕೊಳ್ಳಲಿದ್ದಾರೆ.

ಲಕ್ಷ್ಮಣ್ ನರಸಿಂಹನ್ ಅವರು ಸೆಪ್ಟೆಂಬರ್ 30ರಂದು ತಮ್ಮ ಕಂಪನಿಯ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ರೆಕಿಟ್ ಬೆಂಕಿಸರ್ ತಿಳಿಸಿದೆ. ಲಕ್ಷ್ಮಣ್ ನರಸಿಂಹನ್ ವೈಯಕ್ತಿಕ ಮತ್ತು ಕೌಟುಂಬಿಕ ಕಾರಣಗಳಿಂದ ಇಂಗ್ಲೆಂಡ್​​ಗೆ ಮರಳಲು ನಿರ್ಧರಿಸಿದ್ದಾರೆ ಎಂದು ಖಚಿತಪಡಿಸಿದೆ.

ಇದನ್ನೂ ಓದಿ: NSE Phone Tapping: ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಜಾಮೀನು ಅರ್ಜಿ ವಜಾ ಮಾಡಿದ ದೆಹಲಿ ನ್ಯಾಯಾಲಯ

ಈ ಮೂಲಕ ಮೈಕ್ರೋಸಾಫ್ಟ್ ಸಿಇಒ ಸತ್ಯ ನಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್, ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಮತ್ತು ಟ್ವಿಟರ್ ಮುಖ್ಯಸ್ಥ ಪರಾಗ್ ಅಗರವಾಲ್ ಸೇರಿದಂತೆ ಅಮೆರಿಕ ಮೂಲದ ಜಾಗತಿಕ ದೈತ್ಯ ಕಂಪನಿಗಳ ಚುಕ್ಕಾಣಿ ಹಿಡಿದಿರುವ ಭಾರತೀಯ ಮೂಲದ ಸಿಇಒಗಳ ಪಟ್ಟಿಗೆ ಲಕ್ಷ್ಮಣ್ ನರಸಿಂಹನ್ ಕೂಡ ಸೇರಿದ್ದಾರೆ.

ಲಕ್ಷ್ಮಣ್ ನರಸಿಂಹನ್ ಭಾರತದ ಪುಣೆ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಇಂಜಿನಿಯರಿಂಗ್‌ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅವರು ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ಲಾಡರ್ ಇನ್ಸ್ಟಿಟ್ಯೂಟ್‌ನಿಂದ ಜರ್ಮನ್ ಮತ್ತು ಅಂತಾರಾಷ್ಟ್ರೀಯ ಅಧ್ಯಯನಗಳಲ್ಲಿ ಎಂಎ ಮತ್ತು ವಾರ್ಟನ್ ಸ್ಕೂಲ್ ಆಫ್ ದಿ ಯೂನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದಿಂದ ಹಣಕಾಸು ವಿಷಯದಲ್ಲಿ ಎಂಬಿಎ ಪದವಿ ಹೊಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್