Big News: ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣ: ಬಿಟ್ಟಾ ಕರಾಟೆ ಪತ್ನಿ ಸೇರಿ ನಾಲ್ವರು ಸರ್ಕಾರಿ ಅಧಿಕಾರಿಗಳ ವಜಾ

ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದನಾ ಆರೋಪ ಎದುರಿಸುತ್ತಿರುವ ಬಿಟ್ಟಾ ಕರಾಟೆ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಜಮ್ಮು ಕಾಶ್ಮೀರ ಸರ್ಕಾರ ವಜಾ ಮಾಡಿದೆ.

Big News: ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣ: ಬಿಟ್ಟಾ ಕರಾಟೆ ಪತ್ನಿ ಸೇರಿ ನಾಲ್ವರು ಸರ್ಕಾರಿ ಅಧಿಕಾರಿಗಳ ವಜಾ
Bitta Karate
Updated By: ಅಕ್ಷಯ್​ ಪಲ್ಲಮಜಲು​​

Updated on: Aug 13, 2022 | 12:46 PM

ಜಮ್ಮು ಕಾಶ್ಮೀರ: ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದನಾ ಆರೋಪ ಎದುರಿಸುತ್ತಿರುವ ಬಿಟ್ಟಾ ಕರಾಟೆ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಜಮ್ಮು ಕಾಶ್ಮೀರ ಸರ್ಕಾರ ವಜಾ ಮಾಡಿದೆ. ಭಯೋತ್ಪಾದಕ ಸಂಪರ್ಕದಲ್ಲಿದ್ದರೆ ಎಂದು ನಾಲ್ವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಭಯೋತ್ಪಾದಕ ಬಿಟ್ಟಾ ಕರಾಟೆಯ ಪತ್ನಿ ಸೇರಿದಂತೆ ನಾಲ್ವರು ಸರಕಾರಿ ನೌಕರರನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತ ವಜಾಗೊಳಿಸಿದೆ. ಭಯೋತ್ಪಾದಕ ಸಂಪರ್ಕಕ್ಕಾಗಿ ನಾಲ್ವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಇದನ್ನೂ ಓದಿ
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

ವಜಾಗೊಂಡ ನಾಲ್ವರು ಉದ್ಯೋಗಿಗಳಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಅವರ ಪುತ್ರ ಸೈಯದ್ ಅಬ್ದುಲ್ ಮುಯೀದ್ ಕೂಡ ಸೇರಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಭಯೋತ್ಪಾದಕ ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ ಆಘಾತಕಾರಿ ವಿಡಿಯೋ ತಪ್ಪೊಪ್ಪಿಗೆಯಲ್ಲಿ ತಾನು ಹತ್ಯೆ ಮಾಡಿದ ಮೊದಲ ಕಾಶ್ಮೀರಿ ಪಂಡಿತ್ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆಯ ಮೊದಲ ಬಲಿಪಶುಗಳಲ್ಲಿ ಒಬ್ಬನಾದ ಸತೀಶ್ ಟಿಕೂ ಎಂದು ಒಪ್ಪಿಕೊಂಡಿದ್ದಾನೆ.

ಈ ವರ್ಷದ ಮೇ ತಿಂಗಳಲ್ಲಿ, ಸತೀಶ್ ಟಿಕೂನ ಕುಟುಂಬವು ಬಿಟ್ಟಾ ಕರಾಟೆ ವೀಡಿಯೊ ತಪ್ಪೊಪ್ಪಿಗೆಯನ್ನು ದಾಖಲೆಯಲ್ಲಿ ಇರಿಸಲು ಅರ್ಜಿ ಸಲ್ಲಿಸಿತು. ಈ ಅರ್ಜಿಯನ್ನು ವಕೀಲ ಉತ್ಸವ್ ಬೈನ್ಸ್ ಮೂಲಕ ಸಲ್ಲಿಸಲಾಯಿತು ಮತ್ತು ಕಾರ್ಯಕರ್ತ ವಿಕಾಸ್ ರೈನಾ ಬೆಂಬಲಿಸಿದರು.

ಬಿಟ್ಟಾ ಕರಾಟೆ 1990 ರ ದಶಕದಲ್ಲಿ ಅನೇಕ ಕಾಶ್ಮೀರಿ ಪಂಡಿತರನ್ನು ಕೊಂದ ಆರೋಪ ಹೊತ್ತಿದ್ದಾರೆ. ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್‌ನ ಉನ್ನತ ಕಮಾಂಡರ್, ಅವರನ್ನು ಜೂನ್ 1990 ರಲ್ಲಿ ಬಂಧಿಸಲಾಯಿತು ಮತ್ತು ಕೊಲೆ, ಸುಲಿಗೆ ಆರೋಪಗಳ ಮೇಲೆ ವಿಚಾರಣೆಯನ್ನು ಎದುರಿಸುತ್ತಾರೆ.

ಮಾಜಿ ಕಮಾಂಡರ್ 16 ವರ್ಷಗಳ ಕಾಲ ಸೆರೆವಾಸ ಅನುಭವಿಸಿದ ನಂತರ ಅಕ್ಟೋಬರ್ 24, 2006 ರಂದು ಜಮ್ಮುವಿನ ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡರು. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ 2019ರಲ್ಲಿ ಅವರನ್ನು ಮತ್ತೆ ಬಂಧಿಸಲಾಯಿತು.

 

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 10:44 am, Sat, 13 August 22