AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ವೇದಿಕೆಯಲ್ಲೇ ಅನಾರೋಗ್ಯಕ್ಕೆ ಒಳಗಾದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಅರ್ಧಕ್ಕೇ ನಿಂತ ಕಾರ್ಯಕ್ರಮ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗಿದೆ. ವೈದ್ಯರ ಸಲಹೆಯಂತೆ ಸಲೈನ್ ಆರಂಭಿಸಲಾಗಿದೆ.

Big News: ವೇದಿಕೆಯಲ್ಲೇ ಅನಾರೋಗ್ಯಕ್ಕೆ ಒಳಗಾದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಅರ್ಧಕ್ಕೇ ನಿಂತ ಕಾರ್ಯಕ್ರಮ
ನಿತಿನ್ ಗಡ್ಕರಿ
TV9 Web
| Edited By: |

Updated on: Nov 17, 2022 | 3:29 PM

Share

ಕೊಲ್ಕತ್ತಾ: ಉತ್ತರ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಇಂದು ಸಿಲಿಗುರಿಯಲ್ಲಿ 1,206 ಕೋಟಿ ರೂ. ಮೌಲ್ಯದ 3 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ವೇದಿಕೆಯಲ್ಲೇ ತೀವ್ರ ಅಸ್ವಸ್ಥರಾದ ಸಚಿವ ನಿತಿನ್ ಗಡ್ಕರಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಯಿತು. ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಚಿಕಿತ್ಸೆ ಕೊಡಿಸಲು ಗ್ರೀನ್ ಕಾರಿಡಾರ್ ಮೂಲಕ ತಕ್ಷಣ ವೈದ್ಯರನ್ನು ಕರೆತರಲಾಯಿತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ.

ಇಂದು ನಿತಿನ್ ಗಡ್ಕರಿ ಉತ್ತರ ಬಂಗಾಳದ ಸಿಲಿಗುರಿಯ ಶಿವ ಮಂದಿರದಿಂದ ಸೇವಕ್ ಕಂಟೋನ್ಮೆಂಟ್ ವರೆಗಿನ ಉದ್ದದ ರಸ್ತೆಯ ಶಂಕುಸ್ಥಾಪನೆ ನೆರವೇರಿಸಿದ್ದರು. ಡಾರ್ಜಿಲಿಂಗ್ ಜಂಕ್ಷನ್ ಬಳಿಯ ದಗಾಪುರ್ ಮೈದಾನದಲ್ಲಿ ಕಾರ್ಯಕ್ರಮ ನಡೆದಿತ್ತು. ಆ ವೇಳೆ ವೇದಿಕೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಸ್ವಸ್ಥರಾಗಿದ್ದರಿಂದ ಕಾರ್ಯಕ್ರಮವನ್ನು ಅರ್ಧಕ್ಕೇ ನಿಲ್ಲಿಸಲಾಯಿತು. ತಕ್ಷಣ ಅವರನ್ನು ಗ್ರೀನ್ ರೂಂಗೆ ಕರೆದುಕೊಂಡು ಹೋದ ಸಿಬ್ಬಂದಿ ತುರ್ತು ಚಿಕಿತ್ಸೆ ಕೊಡಿಸಿದರು. ಅಲ್ಲಿ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿದ್ದರಿಂದ ತಕ್ಷಣ ವೈದ್ಯರನ್ನು ಕರೆಸಲಾಯಿತು.

ಇದನ್ನೂ ಓದಿ: Nitin Gadkari: ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?

ಬಿಜೆಪಿ ಪಕ್ಷದ ಮೂಲಗಳ ಪ್ರಕಾರ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗಿದೆ. ವೈದ್ಯರ ಸಲಹೆಯಂತೆ ಸಲೈನ್ ಆರಂಭಿಸಲಾಗಿದೆ. ಗ್ರೀನ್ ರೂಂನಲ್ಲಿ ಸಚಿವರು ಪ್ರಥಮ ಚಿಕಿತ್ಸೆ ಪಡೆದರು. ಅದರ ನಂತರ ಹಸಿರು ಕಾರಿಡಾರ್ ಮೂಲಕ ಅವರನ್ನು ನೋಡಲು ಸಿಲಿಗುರಿಯ ವೈದ್ಯರನ್ನು ಕರೆಸಲಾಯಿತು. ಅವರು ನಿತಿನ್ ಚಿಕಿತ್ಸೆ ಪ್ರಾರಂಭಿಸಿದರು. ನಂತರ ಡಾರ್ಜಲಿಂಗ್‌ನ ಬಿಜೆಪಿ ಸಂಸದ ರಾಜು ಬಿಸ್ತಾ ಅವರು ನಿತಿನ್ ಗಡ್ಕರಿ ಅವರೊಂದಿಗೆ ಕಾರಿನಲ್ಲಿ ತಮ್ಮ ಮನೆಗೆ ತೆರಳಿದರು. ಕೇಂದ್ರ ಸಚಿವರ ಚಿಕಿತ್ಸೆಗೆ ಮತ್ತಿಗಾರದಲ್ಲಿರುವ ಅವರ ಮನೆಯಲ್ಲಿಯೇ ವ್ಯವಸ್ಥೆ ಮಾಡಲಾಯಿತು.

ಸಿಲಿಗುರಿಯಲ್ಲಿ ನಡೆದ ಸಮಾರಂಭದ ನಂತರ ನಿತಿನ್ ಗಡ್ಕರಿ ದಲ್ಖೋಲಾಗೆ ಹೋಗಬೇಕಿತ್ತು. ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ರದ್ದಾಗುವ ಸಾಧ್ಯತೆಯಿದೆ. ಇಂದು ಸಂಜೆ ಅವರು ನೇರವಾಗಿ ದೆಹಲಿಗೆ ಪ್ರಯಾಣ ಮಾಡುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್