AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಇಡಿ ಅಧಿಕಾರವನ್ನು ಎತ್ತಿಹಿಡಿಯುವ ಆದೇಶವನ್ನು ಪರಿಶೀಲಿಸಬೇಕು: ಸುಪ್ರೀಂಕೋರ್ಟ್

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ವಿವಿಧ ನಿಬಂಧನೆಗಳನ್ನು ಎತ್ತಿಹಿಡಿಯುವ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಪ್ರಾರಂಭಿಸುತ್ತದೆ.

BIG NEWS: ಇಡಿ ಅಧಿಕಾರವನ್ನು ಎತ್ತಿಹಿಡಿಯುವ ಆದೇಶವನ್ನು ಪರಿಶೀಲಿಸಬೇಕು: ಸುಪ್ರೀಂಕೋರ್ಟ್
Suprem
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 25, 2022 | 12:56 PM

Share

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (Prevention of Money Laundering Act)ವಿವಿಧ ನಿಬಂಧನೆಗಳನ್ನು ಎತ್ತಿಹಿಡಿಯುವ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಪ್ರಾರಂಭಿಸಿದೆ. ಕೆಲವು ಸಮಸ್ಯೆಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ನಾವು ಭಾವಿಸುತ್ತೇವೆ ಮತ್ತು ಮನಿ ಲಾಂಡರಿಂಗ್ ತಡೆಗಟ್ಟುವಿಕೆಗೆ ನಾವು ಸಂಪೂರ್ಣವಾಗಿ ಬೆಂಬಲ ನೀಡುತ್ತೇವೆ ಎಂದು ಸಿಜೆಐ ಹೇಳಿದ್ದಾರೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ ವಿವಿಧ ನಿಬಂಧನೆಗಳನ್ನು ಎತ್ತಿಹಿಡಿಯುವ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿಯ ಮೇಲೆ ಕೇಂದ್ರಕ್ಕೆ ಸುಪ್ರೀಂ  ನೋಟಿಸ್ ನೀಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್ ಜುಲೈ 27ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯಲ್ಲಿ ಎರಡು ನಿರ್ದಿಷ್ಟ ವಿಷಯಗಳಿಗೆ ಸೀಮಿತವಾಗಿ ಗುರುವಾರ ನೋಟಿಸ್ ನೀಡಿದೆ. ಆರೋಪ ಮಾಡಿದರೆ ಆರೋಪಿಯಲ್ಲ ಎಂದು ಸಾಬೀತು ಪಡಿಸುವುದು ಆರೋಪಿಯ ಜವಾಬ್ದಾರಿ ಎಂಬ ಪ್ರತಿಪಾದನೆಯನ್ನೂ ನ್ಯಾಯಾಲಯ ಮರುಪರಿಶೀಲಿಸಲಿದೆ.

ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಅವರ ಪೀಠವು, ಪಿಎಂಎಲ್‌ಎ ಉದ್ದೇಶವು ಉದಾತ್ತವಾಗಿದೆ. ಆದರೆ ಅಕ್ರಮ ಹಣ ವರ್ಗಾವಣೆಯ ಅಪರಾಧವು ಗಂಭೀರವಾಗಿದೆ, ತೀರ್ಪಿನ ಕೆಲವು ಅಂಶಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.

ಆರೋಪಿಗಳಿಗೆ ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ವಿವರಗಳ ವರದಿಯನ್ನು ನೀಡುವುದು (ECIR) ಮತ್ತು ಆರೋಪಿಗಳು ಮುಗ್ಧರಿರಬಹುದು ಎಂದು ಭಾವಿಸುವ ಆಯಾಮಗಳ ಬಗ್ಗೆ ನ್ಯಾಯಾಲಯವು ಮುಖ್ಯವಾಗಿ ಪ್ರಸ್ತಾಪಿಸಿತು.

ಕಪ್ಪುಹಣ ಅಥವಾ ಮನಿ ಲಾಂಡರಿಂಗ್ ತಡೆಗೆ ನಾವು ಸಂಪೂರ್ಣವಾಗಿ ಬೆಂಬಲ ನೀಡುತ್ತೇವೆ. ಇಂತಹ ಅಪರಾಧವನ್ನು ದೇಶ ಭರಿಸಲಾರದು ಎಂದು ಸಿಜೆಐ ಹೇಳಿದ್ದಾರೆ.  ನೋಟಿಸ್ ಜಾರಿ ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರತಿಕ್ರಿಯೆ ನೀಡುತ್ತೇವೆ ಎಂದು ಕೋರ್ಟ್ ಹೇಳಿದೆ.

ಆದರೆ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು ಇದನ್ನು ವಿರೋಧಿಸಿದರು.

“ತೀರ್ಪಿನಲ್ಲಿನ ದೋಷವು ವಿಮರ್ಶೆಯ ಆಧಾರವಾಗಿರಲು ಸಾಧ್ಯವಿಲ್ಲ. ಇದು ಸ್ವತಂತ್ರ ನಿಬಂಧನೆ ಅಲ್ಲ ಮತ್ತು ನಾವು ದೊಡ್ಡ ಜಾಗತಿಕ ರಚನೆಯ ಭಾಗವಾಗಿದ್ದೇವೆ. ಇದು ಅಂತರರಾಷ್ಟ್ರೀಯ ಮತ್ತು ಸಾಂವಿಧಾನಿಕ ಯೋಜನೆಗೆ ಅನುಗುಣವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ” ಎಂದು ಅವರು ಹೇಳಿದರು. ಮನಿ ಲಾಂಡರಿಂಗ್ ಅನ್ನು ನಿಲ್ಲಿಸಲು ಅಥವಾ ಕಪ್ಪು ಹಣವನ್ನು ಮರಳಿ ತರಲು ನಾವು ಸರ್ಕಾರವನ್ನು ವಿರೋಧಿಸುವುದಿಲ್ಲ ಮತ್ತು ಇವುಗಳು ಗಂಭೀರ ಅಪರಾಧಗಳಾಗಿವೆ ಎಂದು ಸಿಜೆಐ ಹೇಳಿದರು.

“ಆದರೆ ಇದು ಜಾಗತಿಕ ಪರಿಣಾಮಗಳನ್ನು ಬೀರುತ್ತದೆ” ಎಂದು ಎಸ್‌ಜಿ ಉತ್ತರಿಸಿದರು. “ಇದು ಗಂಭೀರ ವಿಷಯ, ನಾವು ಸರ್ಕಾರದ ಉದ್ದೇಶವನ್ನು ಅನುಮಾನಿಸುವುದಿಲ್ಲ. ಆದರೆ ಮೇಲ್ನೋಟಕ್ಕೆ ಸಮಸ್ಯೆಗಳಿವೆ. ನಾವು ನೋಟಿಸ್ ನೀಡುತ್ತೇವೆ. ರಿಟ್ ಅರ್ಜಿಗಳನ್ನು ಪರಿಶೀಲನೆಯೊಂದಿಗೆ ವಿಚಾರಣೆ ಮಾಡೋಣ” ಎಂದು ಸಿಜೆಐ ಹೇಳಿದರು.

ನಂತರ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ಆರೋಪಿ-ಅರ್ಜಿದಾರರಿಗೆ ನೀಡಲಾದ ಮಧ್ಯಂತರ ರಕ್ಷಣೆಯನ್ನು 4 ವಾರಗಳವರೆಗೆ ವಿಸ್ತರಿಸಲು ಆದೇಶಿಸಿತು. “4 ವಾರಗಳ ನಂತರ ವಿಚಾರಣೆ ಮಾಡಿ ಮತ್ತು ಸಿಜೆಐ ಮುಂದೆ ಇರಿಸಿ” ಎಂದು ಕೋರ್ಟ್ ಆದೇಶಿಸಿದೆ.

Published On - 11:43 am, Thu, 25 August 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ