Big News: ವಿಪಕ್ಷಗಳ ವಿರೋಧದ ನಡುವೆಯೇ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ; ರಾಜ್ಯಸಭೆಯಲ್ಲಿ ಕೋಲಾಹಲ

Uniform Civil Code Bill: ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಲು ಮುಂದಾದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರಿಗೆ ವಿರೋಧ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

Big News: ವಿಪಕ್ಷಗಳ ವಿರೋಧದ ನಡುವೆಯೇ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ; ರಾಜ್ಯಸಭೆಯಲ್ಲಿ ಕೋಲಾಹಲ
ರಾಜ್ಯಸಭಾ ಅಧಿವೇಶನ
Follow us
| Updated By: ಸುಷ್ಮಾ ಚಕ್ರೆ

Updated on:Dec 09, 2022 | 4:54 PM

ನವದೆಹಲಿ: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ (Rajya Sabha Session) ಬಿಜೆಪಿಯ ಕಿರೋಡಿ ಲಾಲ್ ಮೀನಾ (Kirodi Lal Meena) ಏಕರೂಪ ನಾಗರಿಕ ಸಂಹಿತೆ ಮಸೂದೆ, 2020 ಅನ್ನು ಖಾಸಗಿ ಸದಸ್ಯ ವಿಧೇಯಕವಾಗಿ ಮಂಡಿಸಿದ್ದರಿಂದ ಇಂದು ರಾಜ್ಯಸಭೆಯಲ್ಲಿ ಭಾರೀ ಕೋಲಾಹಲ ಉಂಟಾಯಿತು. ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು (Uniform Civil Code Bill) ಮಂಡಿಸಲು ಮುಂದಾದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರಿಗೆ ವಿರೋಧ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಆದರೂ ಸುಮ್ಮನಾಗದ ಕಿರೋಡಿ ಲಾಲ್ ಮೀನಾ ಏಕರೂಪ ನಾಗರಿಕ ಸಂಹಿತೆಯನ್ನು ಸಿದ್ಧಪಡಿಸಲು ಸಮಿತಿಗೆ ಅವಕಾಶ ನೀಡುವ ವಿವಾದಾತ್ಮಕ ಖಾಸಗಿ ಸದಸ್ಯರ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದರು.

ಇದನ್ನು ಕಾಂಗ್ರೆಸ್, ಸಿಪಿಐ, ಸಿಪಿಐಎಂ, ಟಿಎಂಸಿ ಪಕ್ಷಗಳ ಸದಸ್ಯರು ವಿರೋಧಿಸಿ, ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಮಸೂದೆ ಭಾರತದಲ್ಲಿ ಜಾರಿಯಲ್ಲಿರುವ ಸಾಮಾಜಿಕ ರಚನೆ ಮತ್ತು ವಿವಿಧತೆಯಲ್ಲಿ ಏಕತೆಯನ್ನು ನಾಶ ಪಡಿಸುತ್ತದೆ ಎಂದು ಅವರು ಹೇಳಿದರು. ಈ ಮಸೂದೆಯ ಪರವಾಗಿ 63 ಮತಗಳು ಹಾಗೂ ಈ ಮಸೂದೆಯ ವಿರುದ್ಧ 23 ಮತಗಳನ್ನು ಚಲಾಯಿಸಲಾಯಿತು.

ಇದನ್ನೂ ಓದಿ: ಇದು ನಮ್ಮ ಹೆಮ್ಮೆ! ರಾಜ್ಯಸಭೆಯಲ್ಲಿ ವೆಂಕಯ್ಯನಾಯ್ಡುಗೆ ಬೀಳ್ಕೊಡುಗೆ : ಕನ್ನಡದಲ್ಲಿ ಭಾಷಣ ಮಾಡಿ, ಶುಭ ಹಾರೈಸಿದ ಸಚಿವ ಪ್ರಲ್ಹಾದ ಜೋಶಿ

ಈ ಮಸೂದೆಯನ್ನು ವಿರೋಧಿಸಲು ಮೂರು ನಿರ್ಣಯಗಳನ್ನು ಮಂಡಿಸಲಾಯಿತು. ಇದು ದೇಶವನ್ನು ವಿಘಟಿಸುತ್ತದೆ ಮತ್ತು ಅದರ ವೈವಿಧ್ಯಮಯ ಸಂಸ್ಕೃತಿಯನ್ನು ಘಾಸಿಗೊಳಿಸುತ್ತದೆ ಎಂದು ವಿಪಕ್ಷಗಳು ಹೇಳಿದವು. ಹಲವಾರು ಪಕ್ಷಗಳ ತೀವ್ರ ವಿರೋಧದ ನಂತರ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಸಂವಿಧಾನದ ನಿರ್ದೇಶನ ತತ್ವಗಳ ಅಡಿಯಲ್ಲಿ ಸಮಸ್ಯೆಯನ್ನು ಎತ್ತುವುದು ಸದಸ್ಯರ ಕಾನೂನುಬದ್ಧ ಹಕ್ಕು ಎಂದು ವಾದಿಸಿದರು. ಸದನದಲ್ಲಿ ಈ ವಿಷಯ ಚರ್ಚೆಯಾಗಲಿ. ಈ ಹಂತದಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವುದು, ಮಸೂದೆಯನ್ನು ಟೀಕಿಸಲು ಪ್ರಯತ್ನಿಸುವುದು ಅನಪೇಕ್ಷಿತವಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Fri, 9 December 22

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ