AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: 6 ತಿಂಗಳಲ್ಲಿ ಭಾರತಕ್ಕೆ ಬರಲಿದೆ ಒಮಿಕ್ರಾನ್ ವಿರುದ್ಧದ ಲಸಿಕೆ: ಪೂನಾವಾಲ

ವರ್ಷಾಂತ್ಯದ ವೇಳೆಗೆ ಒಮಿಕ್ರಾನ್ ವಿರುದ್ಧದ ಲಸಿಕೆ ಬರಲಿದೆ ಎಂದು ಪೂನಾವಾಲ  ಹೇಳಿದರು. ಲಸಿಕೆಯು ಒಮಿಕ್ರಾನ್‌ನ BA5 ಉಪ-ವೇರಿಯಂಟ್‌ಗೆ ನಿರ್ದಿಷ್ಟವಾಗಿರುತ್ತದೆ, ಇದಕ್ಕಾಗಿ UK ನವೀಕರಿಸಿದ ಮಾಡರ್ನಾ ಲಸಿಕೆಯನ್ನು ಅನುಮೋದಿಸಿದೆ.

BIG NEWS: 6 ತಿಂಗಳಲ್ಲಿ ಭಾರತಕ್ಕೆ ಬರಲಿದೆ ಒಮಿಕ್ರಾನ್ ವಿರುದ್ಧದ ಲಸಿಕೆ: ಪೂನಾವಾಲ
PoonawalaImage Credit source: NDTV
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 15, 2022 | 7:06 PM

Share

ಒಮಿಕ್ರಾನ್ (Omicron)  ವೈರಸ್ ವಿರುದ್ಧ ಹೋರಾಡುವ ನಿರ್ದಿಷ್ಟ ಲಸಿಕೆ ತಯಾರಿಸಲು ನೋವಾವ್ಯಾಕ್ಸ್ (Novavax) ನೊಂದಿಗೆ ಸೆರಮ್ ಇನ್ಸಿಟ್ಯೂಟ್ ಕೆಲಸ ಮಾಡುತ್ತಿದೆ ಎಂದು ಸೋಮವಾರ ಎನ್ ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಆದಾರ್ ಪೂನಾವಾಲಾ (Adar Poonawalla) ಹೇಳಿದ್ದಾರೆ. ಈ ಲಸಿಕೆ ಬಿಎ 5 ಉಪ ತಳಿ ವಿರುದ್ಧ ಹೋರಾಡುವ ಲಸಿಕೆಯಾಗಿದ್ದು 6 ತಿಂಗಳಲ್ಲಿ  ಬರುವ ನಿರೀಕ್ಷೆ ಇದೆ ಎಂದಿದ್ದಾರೆ. ಇದಕ್ಕಿಂತ ಮುನ್ನ ಒಮಿಕ್ರಾನ್ ವೈರಸ್ ವಿರುದ್ಧ ಪರಿಣಾಮಕಾರಿಯಾಗಿರುವ ನವೀಕರಿಸಿದ ಮಾಡೆರ್ನಾ ಲಸಿಕೆಗೆ ಯುಕೆ ಅನುಮೋದನೆ ನೀಡಿತ್ತು. ಈ ಲಸಿಕೆ ಒಮಿಕ್ರಾನ್ ತಳಿ ಮತ್ತು ಮೂಲ ರೂಪದ ವಿರುದ್ಧ ಪರಿಣಾಮಕಾರಿಯಾಗಿದೆ. ಈ ಲಸಿಕೆ ಬೂಸ್ಟರ್ ನಂತೆಯೇ ಮುಖ್ಯವಾಗಿದೆ ಎಂದಿದ್ದಾರೆ  ಪೂನಾವಾಲಾ. ಒಮಿಕ್ರಾನ್ ವಿರುದ್ಧದ ನಿರ್ದಿಷ್ಟ ಲಸಿಕೆ ಭಾರತಕ್ಕೆ ಮುಖ್ಯವಾಗಿದೆ ಎಂದು ಹೇಳಿದ ಪೂನಾವಾಲಾ, ಒಮಿಕ್ರಾನ್ ಸೌಮ್ಯ ಸ್ವಭಾವದಲ್ಲ. ಇದು ಗಂಭೀರ ಫ್ಲೂನಂತೆ ಕಾಣಿಸುತ್ತದೆ ಎಂದಿದ್ದಾರೆ.

ಭಾರತದ ನಿಯಂತ್ರಕರಿಂದ ಅನುಮೋದನೆ ಯಾವಾಗ ಸಿಗುತ್ತದೆ ಎಂಬ ಆಧಾರದ ಮೇಲೆ ಲಸಿಕೆ ಮಾರುಕಟ್ಟೆಗೆ ಬರಲಿದೆ. ಭಾರತದಲ್ಲಿ ಪ್ರತ್ಯೇಕವಾಗಿ ಕ್ಲಿನಿಕಲ್ ಪ್ರಯೋಗದ ಅಗತ್ಯವಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ ಎಂದಿದ್ದಾರೆ ಅವರು.  ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ನೋವಾವ್ಯಾಕ್ಸ್ ಪ್ರಯೋಗ ನಡೆಯುತ್ತಿದೆ. ನವೆಂಬರ್- ಡಿಸೆಂಬರ್ ತಿಂಗಳಲ್ಲಿ   ಇದು ಅಮೆರಿಕದ ಔಷಧ ನಿಯಂತ್ರಕವನ್ನು ಸಮೀಪಿಸುವ ಸಾಧ್ಯತೆ ಇದೆ ಪೂನಾವಾಲಾ ಹೇಳಿದ್ದಾರೆ. ದೆಹಲಿ ಸೇರಿದಂತೆ ದೇಶದ ಇತರ ರಾಜ್ಯಗಳಲ್ಲಿ ಒಮಿಕ್ರಾನ್ ನಿಂದ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ ಎಂದು ಅವರು ಹೇಳಿದ್ದಾರೆ .

ಇದನ್ನೂ ಓದಿ
Image
Independence Day 2022: 75 ಅಡಿ ಉದ್ದದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ ರಚಿಸಿದ ವಿಕಲಚೇತನ ಯುವಕರು
Image
Independence Day 2022: ಭಾರತ ಪ್ರಜಾಪ್ರಭುತ್ವದ ತಾಯಿ, ವೈವಿಧ್ಯತೆಯೇ ಅದರ ಶಕ್ತಿ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
Image
Independence Day 2022: ಆಗಸ್ಟ್ 15ರಂದೇ ಭಾರತ ಸ್ವತಂತ್ರ್ಯದಿನವನ್ನು ಆಚರಿಸುವುದೇಕೆ? ಈ ದಿನದ ಇತಿಹಾಸ, ಮಹತ್ವವೇನು?

ಕಳೆದ ವಾರ ಎನ್ ಡಿಟಿವಿ ಜತೆ ಮಾತನಾಡಿದ  ಕೊವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ಎನ್ ಕೆ ಅರೋರಾ, ದೆಹಲಿಯಲ್ಲಿ ಪ್ರಸರಣವಾಗುತ್ತಿರುವ ಒಮಿಕ್ರಾನ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಎಂದು ಹೇಳಿದ್ದಾರೆ.

Published On - 6:30 pm, Mon, 15 August 22

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ