AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: 6 ತಿಂಗಳಲ್ಲಿ ಭಾರತಕ್ಕೆ ಬರಲಿದೆ ಒಮಿಕ್ರಾನ್ ವಿರುದ್ಧದ ಲಸಿಕೆ: ಪೂನಾವಾಲ

ವರ್ಷಾಂತ್ಯದ ವೇಳೆಗೆ ಒಮಿಕ್ರಾನ್ ವಿರುದ್ಧದ ಲಸಿಕೆ ಬರಲಿದೆ ಎಂದು ಪೂನಾವಾಲ  ಹೇಳಿದರು. ಲಸಿಕೆಯು ಒಮಿಕ್ರಾನ್‌ನ BA5 ಉಪ-ವೇರಿಯಂಟ್‌ಗೆ ನಿರ್ದಿಷ್ಟವಾಗಿರುತ್ತದೆ, ಇದಕ್ಕಾಗಿ UK ನವೀಕರಿಸಿದ ಮಾಡರ್ನಾ ಲಸಿಕೆಯನ್ನು ಅನುಮೋದಿಸಿದೆ.

BIG NEWS: 6 ತಿಂಗಳಲ್ಲಿ ಭಾರತಕ್ಕೆ ಬರಲಿದೆ ಒಮಿಕ್ರಾನ್ ವಿರುದ್ಧದ ಲಸಿಕೆ: ಪೂನಾವಾಲ
PoonawalaImage Credit source: NDTV
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 15, 2022 | 7:06 PM

Share

ಒಮಿಕ್ರಾನ್ (Omicron)  ವೈರಸ್ ವಿರುದ್ಧ ಹೋರಾಡುವ ನಿರ್ದಿಷ್ಟ ಲಸಿಕೆ ತಯಾರಿಸಲು ನೋವಾವ್ಯಾಕ್ಸ್ (Novavax) ನೊಂದಿಗೆ ಸೆರಮ್ ಇನ್ಸಿಟ್ಯೂಟ್ ಕೆಲಸ ಮಾಡುತ್ತಿದೆ ಎಂದು ಸೋಮವಾರ ಎನ್ ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಆದಾರ್ ಪೂನಾವಾಲಾ (Adar Poonawalla) ಹೇಳಿದ್ದಾರೆ. ಈ ಲಸಿಕೆ ಬಿಎ 5 ಉಪ ತಳಿ ವಿರುದ್ಧ ಹೋರಾಡುವ ಲಸಿಕೆಯಾಗಿದ್ದು 6 ತಿಂಗಳಲ್ಲಿ  ಬರುವ ನಿರೀಕ್ಷೆ ಇದೆ ಎಂದಿದ್ದಾರೆ. ಇದಕ್ಕಿಂತ ಮುನ್ನ ಒಮಿಕ್ರಾನ್ ವೈರಸ್ ವಿರುದ್ಧ ಪರಿಣಾಮಕಾರಿಯಾಗಿರುವ ನವೀಕರಿಸಿದ ಮಾಡೆರ್ನಾ ಲಸಿಕೆಗೆ ಯುಕೆ ಅನುಮೋದನೆ ನೀಡಿತ್ತು. ಈ ಲಸಿಕೆ ಒಮಿಕ್ರಾನ್ ತಳಿ ಮತ್ತು ಮೂಲ ರೂಪದ ವಿರುದ್ಧ ಪರಿಣಾಮಕಾರಿಯಾಗಿದೆ. ಈ ಲಸಿಕೆ ಬೂಸ್ಟರ್ ನಂತೆಯೇ ಮುಖ್ಯವಾಗಿದೆ ಎಂದಿದ್ದಾರೆ  ಪೂನಾವಾಲಾ. ಒಮಿಕ್ರಾನ್ ವಿರುದ್ಧದ ನಿರ್ದಿಷ್ಟ ಲಸಿಕೆ ಭಾರತಕ್ಕೆ ಮುಖ್ಯವಾಗಿದೆ ಎಂದು ಹೇಳಿದ ಪೂನಾವಾಲಾ, ಒಮಿಕ್ರಾನ್ ಸೌಮ್ಯ ಸ್ವಭಾವದಲ್ಲ. ಇದು ಗಂಭೀರ ಫ್ಲೂನಂತೆ ಕಾಣಿಸುತ್ತದೆ ಎಂದಿದ್ದಾರೆ.

ಭಾರತದ ನಿಯಂತ್ರಕರಿಂದ ಅನುಮೋದನೆ ಯಾವಾಗ ಸಿಗುತ್ತದೆ ಎಂಬ ಆಧಾರದ ಮೇಲೆ ಲಸಿಕೆ ಮಾರುಕಟ್ಟೆಗೆ ಬರಲಿದೆ. ಭಾರತದಲ್ಲಿ ಪ್ರತ್ಯೇಕವಾಗಿ ಕ್ಲಿನಿಕಲ್ ಪ್ರಯೋಗದ ಅಗತ್ಯವಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ ಎಂದಿದ್ದಾರೆ ಅವರು.  ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ನೋವಾವ್ಯಾಕ್ಸ್ ಪ್ರಯೋಗ ನಡೆಯುತ್ತಿದೆ. ನವೆಂಬರ್- ಡಿಸೆಂಬರ್ ತಿಂಗಳಲ್ಲಿ   ಇದು ಅಮೆರಿಕದ ಔಷಧ ನಿಯಂತ್ರಕವನ್ನು ಸಮೀಪಿಸುವ ಸಾಧ್ಯತೆ ಇದೆ ಪೂನಾವಾಲಾ ಹೇಳಿದ್ದಾರೆ. ದೆಹಲಿ ಸೇರಿದಂತೆ ದೇಶದ ಇತರ ರಾಜ್ಯಗಳಲ್ಲಿ ಒಮಿಕ್ರಾನ್ ನಿಂದ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ ಎಂದು ಅವರು ಹೇಳಿದ್ದಾರೆ .

ಇದನ್ನೂ ಓದಿ
Image
Independence Day 2022: 75 ಅಡಿ ಉದ್ದದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ ರಚಿಸಿದ ವಿಕಲಚೇತನ ಯುವಕರು
Image
Independence Day 2022: ಭಾರತ ಪ್ರಜಾಪ್ರಭುತ್ವದ ತಾಯಿ, ವೈವಿಧ್ಯತೆಯೇ ಅದರ ಶಕ್ತಿ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
Image
Independence Day 2022: ಆಗಸ್ಟ್ 15ರಂದೇ ಭಾರತ ಸ್ವತಂತ್ರ್ಯದಿನವನ್ನು ಆಚರಿಸುವುದೇಕೆ? ಈ ದಿನದ ಇತಿಹಾಸ, ಮಹತ್ವವೇನು?

ಕಳೆದ ವಾರ ಎನ್ ಡಿಟಿವಿ ಜತೆ ಮಾತನಾಡಿದ  ಕೊವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ಎನ್ ಕೆ ಅರೋರಾ, ದೆಹಲಿಯಲ್ಲಿ ಪ್ರಸರಣವಾಗುತ್ತಿರುವ ಒಮಿಕ್ರಾನ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಎಂದು ಹೇಳಿದ್ದಾರೆ.

Published On - 6:30 pm, Mon, 15 August 22

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ