AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಗಂಡನ ಆಫೀಸಿಗೆ ಹೆಂಡತಿ ಹೋಗಿ ನಿಂದಿಸುವುದು ಕ್ರೌರ್ಯಕ್ಕೆ ಸಮಾನ; ಹೈಕೋರ್ಟ್​ ತೀರ್ಪು

ಧಮ್ತಾರಿ ಜಿಲ್ಲೆಯ ನಿವಾಸಿಯಾದ 32 ವರ್ಷದ ರಾಯ್‌ಪುರ ನಿವಾಸಿಯಾದ ವ್ಯಕ್ತಿ 2010ರಲ್ಲಿ 34 ವರ್ಷದ ಮಹಿಳೆಯನ್ನು ವಿವಾಹವಾಗಿದ್ದರು. ನಂತರ, ಆ ವ್ಯಕ್ತಿ ವಿವಿಧ ಕಾರಣಗಳನ್ನು ಉಲ್ಲೇಖಿಸಿ ವಿಚ್ಛೇದನ ಕೋರಿ ರಾಯ್‌ಪುರ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Big News: ಗಂಡನ ಆಫೀಸಿಗೆ ಹೆಂಡತಿ ಹೋಗಿ ನಿಂದಿಸುವುದು ಕ್ರೌರ್ಯಕ್ಕೆ ಸಮಾನ; ಹೈಕೋರ್ಟ್​ ತೀರ್ಪು
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 30, 2022 | 11:51 AM

Share

ಬಿಲಾಸ್‌ಪುರ: ಪತ್ನಿ ತನ್ನ ಗಂಡನ ಕಚೇರಿಗೆ ಭೇಟಿ ನೀಡಿ ನಿಂದಿಸುವುದು ಕ್ರೌರ್ಯಕ್ಕೆ ಸಮಾನ ಎಂದು ಛತ್ತೀಸ್‌ಗಢ ಹೈಕೋರ್ಟ್‌ (Chhattisgarh High Court) ಅಭಿಪ್ರಾಯಪಟ್ಟಿದೆ. ಅಲ್ಲದೆ, ಗಂಡನಿಗೆ ವಿಚ್ಛೇದನ ನೀಡಿದ್ದ ರಾಯ್‌ಪುರ ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹಿಳೆ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಗೌತಮ್ ಭಾದುರಿ ಮತ್ತು ರಾಧಾಕಿಶನ್ ಅಗರವಾಲ್ ಅವರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಬೇರೆ ಯಾರೋ ಮಹಿಳೆ ಅಥವಾ ಮಹಿಳಾ ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧ ಹೊಂದುವುದು ಕೂಡ ಕ್ರೌರ್ಯಕ್ಕೆ ಕಾರಣವಾಗುತ್ತದೆ. ಆಗಸ್ಟ್ 18ರಂದು ಹೈಕೋರ್ಟ್ ತೀರ್ಪು ನೀಡಿತ್ತು. ಧಮ್ತಾರಿ ಜಿಲ್ಲೆಯ ನಿವಾಸಿಯಾದ 32 ವರ್ಷದ ರಾಯ್‌ಪುರ ನಿವಾಸಿಯಾದ ವ್ಯಕ್ತಿ 2010ರಲ್ಲಿ 34 ವರ್ಷದ ಮಹಿಳೆಯನ್ನು ವಿವಾಹವಾಗಿದ್ದರು. ನಂತರ, ಆ ವ್ಯಕ್ತಿ ವಿವಿಧ ಕಾರಣಗಳನ್ನು ಉಲ್ಲೇಖಿಸಿ ವಿಚ್ಛೇದನ ಕೋರಿ ರಾಯ್‌ಪುರ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನನ್ನ ಹೆಂಡತಿ ನನ್ನನ್ನು ನಿಂದಿಸುತ್ತಾಳೆ, ನನ್ನ ಹೆತ್ತವರು ಮತ್ತು ಇತರ ಕುಟುಂಬದ ಸದಸ್ಯರನ್ನು ಭೇಟಿಯಾಗದಂತೆ ತಡೆಯುತ್ತಾಳೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

2019ರ ಡಿಸೆಂಬರ್​ನಲ್ಲಿ ಕೌಟುಂಬಿಕ ನ್ಯಾಯಾಲಯವು ಅವರಿಗೆ ವಿಚ್ಛೇದನದ ತೀರ್ಪು ನೀಡಿತ್ತು. ನಂತರ ಮಹಿಳೆ ಈ ನಿರ್ಧಾರವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತನ್ನ ಪತಿ ವಿಚ್ಛೇದನ ಪಡೆಯಲು ಸುಳ್ಳು ಪುರಾವೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಕೆಳ ನ್ಯಾಯಾಲಯದ ತೀರ್ಪಿನಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಬೇಕೆಂದು ಆಕೆ ಕೋರಿದ್ದರು. ಈ ವಿಚಾರಣೆ ವೇಳೆ ಆ ಪತ್ನಿಯು ತನ್ನ ಪತಿಯ ಕಚೇರಿಗೆ ಭೇಟಿ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು ಎಂದು ನ್ಯಾಯಪೀಠ ಹೇಳಿದೆ.

ವಿಚ್ಛೇದನದ ವಿಚಾರದಲ್ಲಿ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ನ್ಯಾಯಪೀಠ ಎತ್ತಿ ಹಿಡಿದಿದೆ. ಕೌಟುಂಬಿಕ ನ್ಯಾಯಾಲಯವು ಅಂಗೀಕರಿಸಿದ ತೀರ್ಪು ಮತ್ತು ತೀರ್ಪು ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ ಮತ್ತು ಕೌಟುಂಬಿಕ ನ್ಯಾಯಾಲಯದಿಂದ ಬಂದ ತೀರ್ಮಾನವನ್ನು ನಾವು ದೃಢೀಕರಿಸುತ್ತೇವೆ ಎಂದು ಅದು ತೀರ್ಪಿನಲ್ಲಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ