AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ ಕಪೂರ್ ಆಸ್ತಿ ವಿವಾದ; ದೆಹಲಿ ಹೈಕೋರ್ಟ್​ನಿಂದ ಕರಿಷ್ಮಾ ಕಪೂರ್ ಮಕ್ಕಳಿಗೆ ಬಿಗ್ ರಿಲೀಫ್

ಕೈಗಾರಿಕೋದ್ಯಮಿಯಾಗಿದ್ದ ಸಂಜಯ್ ಕಪೂರ್ ಅವರ ಎಸ್ಟೇಟ್ ಕುರಿತು ನಡೆಯುತ್ತಿರುವ ವಿವಾದದಲ್ಲಿ ಕರಿಷ್ಮಾ ಕಪೂರ್ ಅವರ ಮಕ್ಕಳಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಿದೆ. ಅವರ ಮಲತಾಯಿ ಪ್ರಿಯಾ ಕಪೂರ್​ಗೆ ಅವರ ಆಸ್ತಿಗಳ ಮೇಲೆ ನಿರ್ಬಂಧ ಹೇರಲಾಗಿದೆ. ಈ ವಿಷಯ ಇತ್ಯರ್ಥವಾಗುವವರೆಗೆ ಆಸ್ತಿಗಳನ್ನು ಸಂರಕ್ಷಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. ಕರಿಷ್ಮಾ ಕಪೂರ್ ಅವರ ಮಕ್ಕಳು ದಿವಂಗತ ಉದ್ಯಮಿ ಸಂಜಯ್ ಕಪೂರ್ ಅವರ ಎಸ್ಟೇಟ್‌ನಲ್ಲಿ ಪಾಲು ಕೋರಿದ್ದಾರೆ. ಇದು ಕುಟುಂಬದೊಳಗೆ ವಿವಾದ ಸೃಷ್ಟಿಸಿತ್ತು.

ಸಂಜಯ್ ಕಪೂರ್ ಆಸ್ತಿ ವಿವಾದ; ದೆಹಲಿ ಹೈಕೋರ್ಟ್​ನಿಂದ ಕರಿಷ್ಮಾ ಕಪೂರ್ ಮಕ್ಕಳಿಗೆ ಬಿಗ್ ರಿಲೀಫ್
Karishma Kapoor FamilyImage Credit source: TV9
ಸುಷ್ಮಾ ಚಕ್ರೆ
|

Updated on:Apr 30, 2026 | 4:12 PM

Share

ನವದೆಹಲಿ, ಏಪ್ರಿಲ್ 30: ಕಳೆದ ವರ್ಷ ಜೂನ್‌ನಲ್ಲಿ ಲಂಡನ್‌ನಲ್ಲಿ ನಿಧನರಾದ ಉದ್ಯಮಿ ಸಂಜಯ್ ಕಪೂರ್ ಅವರ ಆಸ್ತಿಗಳನ್ನು ಫ್ರೀಜ್ ಮಾಡಲಾಗಿದೆ. ಅವರು 30,000 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ. ಅವರ ಮೂರನೇ ಪತ್ನಿ ಪ್ರಿಯಾ ಸಚ್‌ದೇವ ಕಪೂರ್ ಮತ್ತು ನಟಿ ಕರಿಷ್ಮಾ ಕಪೂರ್ (Karisma Kapoor) ಅವರ ಎರಡನೇ ಮದುವೆಯಿಂದ ಪಡೆದ ಮಕ್ಕಳಾದ ಕಿಯಾನ್ ಕಪೂರ್ ಮತ್ತು ಸಮೈರಾ ಕಪೂರ್ ನಡುವಿನ ಗಲಾಟೆ ತಾರಕಕ್ಕೇರಿತ್ತು. ಇದೀಗ ಕುಟುಂಬ ವಿವಾದದ ನಡುವೆ ಅವರ ಆಸ್ತಿಗಳನ್ನು ಸಂರಕ್ಷಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ. ಇದರಿಂದ ಕರಿಷ್ಮಾ ಕಪೂರ್​ ಮಕ್ಕಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಕಿಯಾನ್ ಮತ್ತು ಸಮೈರಾ ಇಬ್ಬರೂ ಪ್ರಿಯಾ ಕಪೂರ್ ಅವರು ಸಂಜಯ್ ಕಪೂರ್ ಅವರ ವಿಲ್ ಅನ್ನು ನಕಲಿ ಮಾಡಿದ್ದಾರೆ ಮತ್ತು ಆಸ್ತಿಗಳ ಅಪೂರ್ಣ ಪಟ್ಟಿಯನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಿಯಾ ಕಪೂರ್ ನ್ಯಾಯಾಲಯಕ್ಕೆ ಸಲ್ಲಿಸಿದ ಪಟ್ಟಿಯಲ್ಲಿ ಸಂಜಯ್ ಕಪೂರ್ ಒಡೆತನದ ಹಲವಾರು ಸ್ಥಿರ ಆಸ್ತಿಗಳು ಮತ್ತು ಹೆಚ್ಚಿನ ಮೌಲ್ಯದ ವರ್ಣಚಿತ್ರಗಳನ್ನು ಸೇರಿಸಲಾಗಿಲ್ಲ ಎಂದು ಮಕ್ಕಳು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸಂಜಯ್ ಕಪೂರ್ ಸತ್ತ ಮೇಲೆ ಆಸ್ತಿ ವಿವಾದ; ನಮಗೂ ಪಾಲು ಕೊಡಿ ಎಂದು ಕೋರ್ಟ್​ಗೆ ಹೋದ ಕರೀಶ್ಮಾ ಮಕ್ಕಳು

ಪ್ರಿಯಾ ಕಪೂರ್ ಯಾವುದೇ ಆಸ್ತಿಗಳನ್ನು ಮಾರಾಟ ಮಾಡದಂತೆ ಅಥವಾ ವರ್ಗಾಯಿಸದಂತೆ ದೆಹಲಿ ಹೈಕೋರ್ಟ್ ನಿರ್ಬಂಧಿಸಿದೆ. ಈ ಪ್ರಕರಣವು ಇತ್ಯರ್ಥವಾಗುವವರೆಗೆ ಎಲ್ಲಾ ಆಸ್ತಿಗಳನ್ನು ಸಂರಕ್ಷಿಸುವಂತೆ ಆದೇಶಿಸಿದೆ. ಕರಿಷ್ಮಾ ಕಪೂರ್ ಮತ್ತು ಸಂಜಯ್ ಕಪೂರ್ ಅವರ ತಾಯಿ ವಿಲ್‌ನ ಸತ್ಯಾಸತ್ಯತೆ ಮತ್ತು ಸಿಂಧುತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಹೇಳಿರುವ ಕೋರ್ಟ್ ಈ ಆದೇಶ ನೀಡಿದೆ.

ಇದನ್ನೂ ಓದಿ: ‘ದೇವರು ಅಷ್ಟೊಂದು ಐಶ್ವರ್ಯ ಕೊಟ್ಟಿದಾನಲ್ಲ’; ಸಂಜಯ್ ಕಪೂರ್ ಆಸ್ತಿ ವಿವಾದದಲ್ಲಿ ಕೋರ್ಟ್ ಅಭಿಪ್ರಾಯ

ಸಂಜಯ್ ಕಪೂರ್ ಅವರ ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಕ್ರಿಪ್ಟೋಕರೆನ್ಸಿ ಹೋಲ್ಡಿಂಗ್‌ಗಳ ಕಾರ್ಯಾಚರಣೆಯನ್ನು ನ್ಯಾಯಾಲಯವು ತಕ್ಷಣ ನಿಲ್ಲಿಸಿದೆ. ಇದರೊಂದಿಗೆ, ಬ್ಯಾಂಕ್ ಖಾತೆ ವಿವರಗಳು ಮತ್ತು ಖಾತೆಯ ಹೇಳಿಕೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಲು ಪ್ರತಿವಾದಿಗಳಿಗೆ ನಿರ್ದೇಶಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Thu, 30 April 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು