AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಸಿದ್ದಿಕಿ ಕೊಲೆಯ ಪ್ರಮುಖ ಆರೋಪಿ ಶಿವಕುಮಾರ್​ ಬಂಧನದಿಂದ ಬಯಲಾಯ್ತು ಮತ್ತಷ್ಟು ಭಯಾನಕ ವಿಚಾರ

ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಶೂಟರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಟಿಎಫ್ ಉತ್ತರ ಪ್ರದೇಶ ಮತ್ತು ಮುಂಬೈ ಕ್ರೈಂ ಬ್ರಾಂಚ್ ಜಂಟಿ ಕಾರ್ಯಾಚರಣೆಯಲ್ಲಿ ಶೂಟರ್ ಶಿವಕುಮಾರ್‌ನನ್ನು ಭಾನುವಾರ ನನ್ಪಾರಾ ಬಹ್ರೈಚ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಬಾಬಾ ಸಿದ್ದಿಕಿ ಕೊಲೆಯ ಪ್ರಮುಖ ಆರೋಪಿ ಶಿವಕುಮಾರ್​ ಬಂಧನದಿಂದ ಬಯಲಾಯ್ತು ಮತ್ತಷ್ಟು ಭಯಾನಕ ವಿಚಾರ
ಶಿವಕುಮಾರ್ Image Credit source: The tribune
ನಯನಾ ರಾಜೀವ್
|

Updated on:Nov 12, 2024 | 8:15 AM

Share

ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಶೂಟರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಟಿಎಫ್ ಉತ್ತರ ಪ್ರದೇಶ ಮತ್ತು ಮುಂಬೈ ಕ್ರೈಂ ಬ್ರಾಂಚ್ ಜಂಟಿ ಕಾರ್ಯಾಚರಣೆಯಲ್ಲಿ ಶೂಟರ್ ಶಿವಕುಮಾರ್‌ನನ್ನು ಭಾನುವಾರ ನನ್ಪಾರಾ ಬಹ್ರೈಚ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಅವರ ಬಂಧನದ ಬಳಿಕ ಹಲವು ವಿಚಾರಗಳು ಬಹಿರಂಗಗೊಂಡಿದೆ. ನಮಗೆ ಬಾಬಾ ಸಿದ್ದಿಕಿ ಅಥವಾ ಅವರ ಮಗ ಜೀಶಾನ್ ಸಿದ್ದಿಕಿಯನ್ನು ಕೊಲ್ಲುವಂತೆ ತಿಳಿಸಲಾಗಿತ್ತು ಎಂದು ಶಿವಕುಮಾರ್ ಹೇಳಿದ್ದಾರೆ. ಶಿವಕುಮಾರ್ ನೇಪಾಳಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ತನ್ನ ನಾಲ್ವರು ಸಹಾಯಕರೊಂದಿಗೆ ಭಾನುವಾರ ಬಂಧಿಸಲಾಯಿತು. ಅಕ್ಟೋಬರ್ 12ರಂದು ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಬಾಬಾ ಸಿದ್ದಿಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು, ಪ್ರಮುಖ ಆರೋಪಿಗಳಲ್ಲಿ ಈ ಶಿವಕುಮಾರ್ ಕೂಡ ಒಬ್ಬ.

ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ ಅವರ ಸಹೋದರ ಅಲ್ಮೋಲ್ ಬಿಷ್ಣೋಯ್ ಅವರು ಮೊದಲು ಯಾರನ್ನು ಕಂಡರೂ ಶೂಟ್ ಮಾಡುವಂತೆ ನಮಗೆ ಸೂಚನೆ ನೀಡಿದ್ದರು ಎಂದು ಹೇಳಿಕೆ ಕೊಟ್ಟಿರುವುದಾಗಿ ಪೊಲೀಸ್ ಮೂಲಗಳು ಎನ್​ಡಿಟಿವಿಗೆ ತಿಳಿಸಿವೆ.

ಮತ್ತಷ್ಟು ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ, ಪ್ರಮುಖ ಆರೋಪಿಯ ಬಂಧನ

ಗುಂಡು ಹಾರಿಸಿದ್ದ ಮೂವರಲ್ಲಿ ಒಬ್ಬನಿಂದ ವಶಪಡಿಸಿಕೊಂಡ ಮೊಬೈಲ್​ನಲ್ಲಿ ಜಿಶಾನ್ ಸಿದ್ದಿಕಿ ಫೋಟೊ ಪತ್ತೆಯಾಗಿದೆ. ಬಾಬಾ ಸಿದ್ದಿಕಿ ಕೊಂದ ತಕ್ಷಣ, ಶಿವಕುಮಾರ್ ಗೌತಮ್ ತಕ್ಷಣ ತನ್ನ ಅಂಗಿಯನ್ನು ಬದಲಾಯಿಸಿ ಜನಸಂದಣಿಯಲ್ಲಿ ಕಣ್ಮರೆಯಾಗಿದ್ದರು. ಬಳಿಕ ಅಪರಾಧದ ಸ್ಥಳದಲ್ಲಿಯೇ ಇದ್ದರು.

ಅಪರಾಧ ಸ್ಥಳದಿಂದ ಕುರ್ಲಾಗೆ ಆಟೋದಲ್ಲಿ ಪ್ರಯಾಣಿಸಿ ನಂತರ ಥಾಣೆಗೆ ಸ್ಥಳೀಯ ರೈಲನ್ನು ಹತ್ತಿದ್ದರು. ಥಾಣೆಯಿಂದ ಪುಣೆಗೆ ರೈಲಿನಲ್ಲಿ ಹೋಗಿ ಪ್ರಯಾಣದ ವೇಳೆ ತನ್ನ ಮೊಬೈಲ್ ಫೋನ್ ಅನ್ನು ಎಸೆದಿದ್ದರು. ಸುಮಾರು ಏಳು ದಿನಗಳ ಕಾಲ ಪುಣೆಯಲ್ಲಿ ತಂಗಿದ್ದ ಶಿವಕುಮಾರ್ ನಂತರ ರೈಲಿನಲ್ಲಿ ಉತ್ತರ ಪ್ರದೇಶದ ಝಾನ್ಸಿಗೆ ತೆರಳಿದ್ದರು. ನಂತರ ಅವರು ಐದು ದಿನಗಳ ಕಾಲ ಅಲ್ಲಿಯೇ ಇದ್ದು ರಾಜ್ಯದ ರಾಜಧಾನಿ ಲಕ್ನೋಗೆ ತೆರಳಿದ್ದ.

ದೇಶದಿಂದ ಪಲಾಯನ ಮಾಡುವ ಮೊದಲು ಆತ ಮೊದಲು ಮಧ್ಯಪ್ರದೇಶದ ಉಜ್ಜಯಿನಿಗೆ ಮತ್ತು ನಂತರ ಜಮ್ಮುವಿನ ವೈಷ್ಣೋ ದೇವಿಗೆ ಹೋಗಲು ಯೋಜಿಸಿದ್ದನು ಎಂದು ಶಿವಕುಮಾರ್ ಹೇಳಿದ್ದಾರೆ . ಶಿವಕುಮಾರ್ ಗೌತಮ್ ಅವರ ಕುಟುಂಬ ಸದಸ್ಯರು ಮತ್ತು ಅವರ ಆಪ್ತ ಸಹಾಯಕರು ಸೇರಿದಂತೆ ಸುಮಾರು 45 ಜನರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ ಮತ್ತು ಬಾಬಾ ಸಿದ್ದಿಕಿ ಹತ್ಯೆಯ ನಂತರ ಅವರ ಚಲನವಲನಗಳನ್ನು ಪತ್ತೆಹಚ್ಚಿದ್ದಾರೆ. ಉತ್ತರ ಪ್ರದೇಶ ಮತ್ತು ಮುಂಬೈ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:14 am, Tue, 12 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್