AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ಗೆ ಭಾರೀ ಹಿನ್ನಡೆ; 199 ಕೋಟಿ ರೂ. ದೇಣಿಗೆಗೆ ತೆರಿಗೆ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

199 ಕೋಟಿ ರೂ. ದೇಣಿಗೆಗೆ ತೆರಿಗೆ ವಿನಾಯಿತಿಯ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. 2018-19ರ ಹಣಕಾಸು ವರ್ಷದಲ್ಲಿ 199.15 ಕೋಟಿ ರೂ. ಆದಾಯಕ್ಕೆ ತೆರಿಗೆ ವಿನಾಯಿತಿ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT) ವಜಾಗೊಳಿಸಿದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13ಎಯಲ್ಲಿರುವ ಷರತ್ತುಗಳ ಉಲ್ಲಂಘನೆಯಾಗಿದೆ ಎಂಬ ಕಾರಣ ನೀಡಿ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಕಾಂಗ್ರೆಸ್​​ಗೆ ಭಾರೀ ಹಿನ್ನಡೆ; 199 ಕೋಟಿ ರೂ. ದೇಣಿಗೆಗೆ ತೆರಿಗೆ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Mallikarjun Kharge - Rahul Gandhi
ಸುಷ್ಮಾ ಚಕ್ರೆ
|

Updated on: Jul 22, 2025 | 7:44 PM

Share

ನವದೆಹಲಿ, ಜುಲೈ 22: ದೇಣಿಗೆ ನೀಡಿದ್ದರಿಂದ 199 ಕೋಟಿ ರೂ. ಆದಾಯ ತೆರಿಗೆ ವಿನಾಯಿತಿಯ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ (Congress Party) ಭಾರೀ ಹಿನ್ನಡೆಯಾಗಿದೆ. 2018-19ನೇ ವರ್ಷದಲ್ಲಿ 199.15 ಕೋಟಿ ರೂ. ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT) ವಜಾಗೊಳಿಸಿದೆ. ಐಟಿ ರಿಟರ್ನ್ಸ್‌ಗಳನ್ನು ತಡವಾಗಿ ಸಲ್ಲಿಸಿದ ಕಾರಣ ಮತ್ತು ನಗದು ದೇಣಿಗೆ ಮಿತಿಗಳ ಉಲ್ಲಂಘನೆಯಿಂದಾಗಿ ವಿನಾಯಿತಿಗಾಗಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ವಜಾಗೊಳಿಸಿದೆ.

2018-19ರಿಂದ ಬಾಕಿ ಇರುವ ಕಾಂಗ್ರೆಸ್ ಪಕ್ಷದ ನಿಧಿಯ 199 ಕೋಟಿ ರೂ.ಗಳವರೆಗಿನ ಆದಾಯ ತೆರಿಗೆಗೆ ಕಾಂಗ್ರೆಸ್‌ಗೆ ಯಾವುದೇ ಪರಿಹಾರ ಸಿಗುವುದಿಲ್ಲ. ದೇಣಿಗೆ ಪಡೆದ ಹಣಕ್ಕೆ ರಾಜಕೀಯ ಪಕ್ಷ ಆದಾಯ ತೆರಿಗೆ ವಿನಾಯಿತಿ ಪಡೆಯಲು ಅವಕಾಶವಿದೆ. ಆದರೆ, ಕಾಂಗ್ರೆಸ್ ತಡವಾಗಿ ಐಟಿ ರಿಟರ್ನ್ ಸಲ್ಲಿಸಿರುವುದರಿಂದ ಹಾಗೂ ನಗದು ರೂಪದಲ್ಲಿ ದೇಣಿಗೆ ಪಡೆಯುವ ಮಿತಿಯನ್ನು ಉಲ್ಲಂಘಿಸಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ತೆರಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮಂಡಳಿ ತಿಳಿಸಿದೆ.

ಇದನ್ನೂ ಓದಿ: ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ; ಆರ್​ಎಸ್​ಎಸ್​ ಮುಖ್ಯಸ್ಥರ ಹೇಳಿಕೆ ಬೆನ್ನಲ್ಲೇ ಮೋದಿ ಕಾಲೆಳೆದ ಕಾಂಗ್ರೆಸ್

ಕಾಂಗ್ರೆಸ್ ಫೆಬ್ರವರಿ 2, 2019ರಂದು ತನ್ನ ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸಿತ್ತು. ಆದರೆ, 2018ರ ಡಿಸೆಂಬರ್ 31ರಂದೇ ಗಡುವು ಮೀರಿತ್ತು. ಕಾಂಗ್ರೆಸ್ 199.15 ಕೋಟಿ ರೂ.ಗಳ ತೆರಿಗೆ ವಿನಾಯಿತಿಯನ್ನು ಸಹ ಕೋರಿತ್ತು. ಸೆಪ್ಟೆಂಬರ್ 2019ರಲ್ಲಿ, ಮೌಲ್ಯಮಾಪನ ಅಧಿಕಾರಿ ಪರಿಶೀಲನೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷವು 14.49 ಲಕ್ಷ ರೂ.ಗಳನ್ನು ನಗದು ರೂಪದಲ್ಲಿ ಸ್ವೀಕರಿಸಿದೆ ಎಂದು ಕಂಡುಹಿಡಿದರು. ಪ್ರತಿ ದಾನಿಯ ಮಿತಿಯಾದ ರೂ. 2,000 ಕ್ಕಿಂತ ಹೆಚ್ಚಿನ ದೇಣಿಗೆಗಳನ್ನು ಚೆಕ್‌ಗಳು ಅಥವಾ ಬ್ಯಾಂಕ್ ವರ್ಗಾವಣೆಯಂತಹ ಬ್ಯಾಂಕಿಂಗ್ ಮಾರ್ಗಗಳ ಮೂಲಕ ಪಾವತಿಸಬೇಕು ಎಂಬ ಕಾನೂನು ಇದೆ. ಹೀಗಾಗಿ, ಅದಕ್ಕೆ ಅನುಗುಣವಾಗಿ ಇಡೀ ಮೊತ್ತದ ಮೇಲೆ ತೆರಿಗೆ ವಿಧಿಸಲಾಗಿತ್ತು.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ 50 ಕೋಟಿ, ವಿಪಕ್ಷ ಶಾಸಕರಿಗೆ 25 ಕೋಟಿ ರೂ. ಅನುದಾನ: ಸಿಎಂ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಕಾಂಗ್ರೆಸ್ ವಿನಾಯಿತಿ ಕೋರಿದಾಗ, ಐಟಿ ಇಲಾಖೆ 2021ರಲ್ಲಿ ಅದಕ್ಕೆ ನಿರಾಕರಿಸಿತು. ಮಾರ್ಚ್ 2023ರಲ್ಲಿ ಆದಾಯ ತೆರಿಗೆ ಆಯುಕ್ತರು ಮೇಲ್ಮನವಿ ನಿರ್ಧಾರವನ್ನು ಎತ್ತಿಹಿಡಿದರು. ಅದಾದ ನಂತರ ಕಾಂಗ್ರೆಸ್ ಸಂಪರ್ಕಿಸಿದ್ದ ಮೇಲ್ಮನವಿ ನ್ಯಾಯಮಂಡಳಿ ಕೂಡ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಲು ನಿರಾಕರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!