AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗನ್ ರೆಡ್ಡಿಗೆ ದೊಡ್ಡ ಆಘಾತ; ವೈಎಸ್‌ಆರ್‌ಸಿಪಿಯ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ, ಟಿಡಿಪಿ ಸೇರ್ಪಡೆ ಸಾಧ್ಯತೆ

ವೈಎಸ್‌ಆರ್‌ಸಿಪಿ ಸಂಸದರಾದ ಡಾ. ಬೀಡಾ ಮಸ್ತಾನ್ ರಾವ್ ಜಾಧವ್ ಮತ್ತು ವೆಂಕಟರಮಣ ರಾವ್ ಮೋಪಿದೇವಿ ಇಂದು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಇವರಿಬ್ಬರೂ ತೆಲುಗು ದೇಶಂ ಪಕ್ಷ ಸೇರುವ ವದಂತಿಗಳು ಹಬ್ಬಿವೆ. ಇದರಿಂದ ಜಗನ್ ರೆಡ್ಡಿಗೆ ಭಾರೀ ಹಿನ್ನಡೆಯಾಗಿದೆ.

ಜಗನ್ ರೆಡ್ಡಿಗೆ ದೊಡ್ಡ ಆಘಾತ; ವೈಎಸ್‌ಆರ್‌ಸಿಪಿಯ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ, ಟಿಡಿಪಿ ಸೇರ್ಪಡೆ ಸಾಧ್ಯತೆ
ಜಗನ್ ರೆಡ್ಡಿ
ಸುಷ್ಮಾ ಚಕ್ರೆ
|

Updated on: Aug 29, 2024 | 10:38 PM

Share

ಹೈದರಾಬಾದ್: ಇಬ್ಬರು YSRCP ರಾಜ್ಯಸಭೆ ಸದಸ್ಯರಾದ ಡಾ. ಬೀಡಾ ಮಸ್ತಾನ್ ರಾವ್ ಜಾಧವ್ ಮತ್ತು ವೆಂಕಟರಮಣ ರಾವ್ ಮೋಪಿದೇವಿ ರಾಜ್ಯಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮಸ್ತಾನ್ ರಾವ್ ಅವರ ಅವಧಿ ಜೂನ್ 2028ರಲ್ಲಿ ಕೊನೆಗೊಳ್ಳಲಿದೆ. ಈ ಮೊದಲು ಟಿಡಿಪಿಯಲ್ಲಿದ್ದ ಅವರು ಮತ್ತೆ ಟಿಡಿಪಿಗೆ ಮರಳುವ ಸಾಧ್ಯತೆಯಿದೆ. ಜೂನ್ 2026ರವರೆಗೆ ಅಧಿಕಾರಾವಧಿ ಇದ್ದ ಮೋಪಿದೇವಿ ಅವರು ಕೂಡ ಟಿಡಿಪಿಗೆ ಸೇರಬಹುದು ಎನ್ನಲಾಗಿದೆ.

ಈ ಎರಡು ರಾಜೀನಾಮೆಗಳ ನಂತರ ರಾಜ್ಯಸಭೆಯಲ್ಲಿ YSRCP ಬಲ 11ರಿಂದ 9ಕ್ಕೆ ಇಳಿದಿದೆ. ಪ್ರಮುಖ ಎನ್‌ಡಿಎ ಮಿತ್ರ ಪಕ್ಷವಾದ ಟಿಡಿಪಿಗೆ ಪ್ರಸ್ತುತ ಮೇಲ್ಮನೆಯಲ್ಲಿ ಯಾವುದೇ ಪ್ರಾತಿನಿಧ್ಯವಿಲ್ಲ. ವರದಿಗಳ ಪ್ರಕಾರ, ಮುಂಬರುವ ಉಪಚುನಾವಣೆಯಲ್ಲಿ ಟಿಡಿಪಿ ಮಸ್ತಾನ್ ರಾವ್ ಅವರನ್ನು ಕಣಕ್ಕಿಳಿಸಬಹುದು. ಆದರೂ ಮೋಪಿದೇವಿ ವೆಂಕಟ ರಮಣ ಅವರು ರಾಜ್ಯಸಭೆಗೆ ಮರಳಲು ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಾಂಗ್ಲಾ ರೀತಿ ಪ್ರಧಾನಿ ಮೋದಿ ಮನೆಗೆ ಜನ ನುಗ್ಗುವ ದಿನ ದೂರವಿಲ್ಲ: ಕಾಂಗ್ರೆಸ್ ಶಾಸಕ ಜಿಎಸ್ ಪಾಟೀಲ್

ಈ ಉಪಚುನಾವಣೆಗಳಲ್ಲಿ ಟಿಡಿಪಿ ಗೆದ್ದರೆ, ಆಡಳಿತಾರೂಢ ಎನ್‌ಡಿಎ ರಾಜ್ಯಸಭೆಯಲ್ಲಿ ಇಬ್ಬರು ಹೆಚ್ಚುವರಿ ಸದಸ್ಯರನ್ನು ಗಳಿಸಲಿದೆ. ಮೇಲ್ಮನೆಯಲ್ಲಿ ಬಿಜೆಪಿಯ ಮಿತ್ರಪಕ್ಷಗಳಲ್ಲಿ JD(U), NCP, JD(S), RPI(A), ಶಿವಸೇನೆ, RLD, RLM, NPP, PMK, ತಮಿಳು ಮನಿಲಾ ಕಾಂಗ್ರೆಸ್, ಮತ್ತು UPPL ಸೇರಿವೆ.

ಇದು ಬಿಜೆಪಿಗೆ ಒಳ್ಳೆಯ ಸುದ್ದಿಯಾಗಿದೆ. ಎನ್‌ಡಿಎ ಇತ್ತೀಚೆಗೆ ಮೇಲ್ಮನೆಯಲ್ಲಿ ಬಹುಮತದ ಅಂಕವನ್ನು ಮುಟ್ಟಿದೆ ಮತ್ತು ಇದು ಪ್ರಮುಖ ಶಾಸನದ ಅಂಗೀಕಾರವನ್ನು ಖಚಿತಪಡಿಸಿಕೊಳ್ಳಲು ಅವರಿಗೆ ಸಹಾಯ ಮಾಡುತ್ತದೆ. ಈ ಇಬ್ಬರು ಸಂಸದರು ಟಿಡಿಪಿಗೆ ಬದಲಾದರೆ ಎನ್‌ಡಿಎ ಸಂಖ್ಯಾಬಲ ಮತ್ತಷ್ಟು ಬಲಗೊಳ್ಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ