AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗನ್ ರೆಡ್ಡಿಗೆ ದೊಡ್ಡ ಆಘಾತ; ವೈಎಸ್‌ಆರ್‌ಸಿಪಿಯ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ, ಟಿಡಿಪಿ ಸೇರ್ಪಡೆ ಸಾಧ್ಯತೆ

ವೈಎಸ್‌ಆರ್‌ಸಿಪಿ ಸಂಸದರಾದ ಡಾ. ಬೀಡಾ ಮಸ್ತಾನ್ ರಾವ್ ಜಾಧವ್ ಮತ್ತು ವೆಂಕಟರಮಣ ರಾವ್ ಮೋಪಿದೇವಿ ಇಂದು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಇವರಿಬ್ಬರೂ ತೆಲುಗು ದೇಶಂ ಪಕ್ಷ ಸೇರುವ ವದಂತಿಗಳು ಹಬ್ಬಿವೆ. ಇದರಿಂದ ಜಗನ್ ರೆಡ್ಡಿಗೆ ಭಾರೀ ಹಿನ್ನಡೆಯಾಗಿದೆ.

ಜಗನ್ ರೆಡ್ಡಿಗೆ ದೊಡ್ಡ ಆಘಾತ; ವೈಎಸ್‌ಆರ್‌ಸಿಪಿಯ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ, ಟಿಡಿಪಿ ಸೇರ್ಪಡೆ ಸಾಧ್ಯತೆ
ಜಗನ್ ರೆಡ್ಡಿ
ಸುಷ್ಮಾ ಚಕ್ರೆ
|

Updated on: Aug 29, 2024 | 10:38 PM

Share

ಹೈದರಾಬಾದ್: ಇಬ್ಬರು YSRCP ರಾಜ್ಯಸಭೆ ಸದಸ್ಯರಾದ ಡಾ. ಬೀಡಾ ಮಸ್ತಾನ್ ರಾವ್ ಜಾಧವ್ ಮತ್ತು ವೆಂಕಟರಮಣ ರಾವ್ ಮೋಪಿದೇವಿ ರಾಜ್ಯಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮಸ್ತಾನ್ ರಾವ್ ಅವರ ಅವಧಿ ಜೂನ್ 2028ರಲ್ಲಿ ಕೊನೆಗೊಳ್ಳಲಿದೆ. ಈ ಮೊದಲು ಟಿಡಿಪಿಯಲ್ಲಿದ್ದ ಅವರು ಮತ್ತೆ ಟಿಡಿಪಿಗೆ ಮರಳುವ ಸಾಧ್ಯತೆಯಿದೆ. ಜೂನ್ 2026ರವರೆಗೆ ಅಧಿಕಾರಾವಧಿ ಇದ್ದ ಮೋಪಿದೇವಿ ಅವರು ಕೂಡ ಟಿಡಿಪಿಗೆ ಸೇರಬಹುದು ಎನ್ನಲಾಗಿದೆ.

ಈ ಎರಡು ರಾಜೀನಾಮೆಗಳ ನಂತರ ರಾಜ್ಯಸಭೆಯಲ್ಲಿ YSRCP ಬಲ 11ರಿಂದ 9ಕ್ಕೆ ಇಳಿದಿದೆ. ಪ್ರಮುಖ ಎನ್‌ಡಿಎ ಮಿತ್ರ ಪಕ್ಷವಾದ ಟಿಡಿಪಿಗೆ ಪ್ರಸ್ತುತ ಮೇಲ್ಮನೆಯಲ್ಲಿ ಯಾವುದೇ ಪ್ರಾತಿನಿಧ್ಯವಿಲ್ಲ. ವರದಿಗಳ ಪ್ರಕಾರ, ಮುಂಬರುವ ಉಪಚುನಾವಣೆಯಲ್ಲಿ ಟಿಡಿಪಿ ಮಸ್ತಾನ್ ರಾವ್ ಅವರನ್ನು ಕಣಕ್ಕಿಳಿಸಬಹುದು. ಆದರೂ ಮೋಪಿದೇವಿ ವೆಂಕಟ ರಮಣ ಅವರು ರಾಜ್ಯಸಭೆಗೆ ಮರಳಲು ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಾಂಗ್ಲಾ ರೀತಿ ಪ್ರಧಾನಿ ಮೋದಿ ಮನೆಗೆ ಜನ ನುಗ್ಗುವ ದಿನ ದೂರವಿಲ್ಲ: ಕಾಂಗ್ರೆಸ್ ಶಾಸಕ ಜಿಎಸ್ ಪಾಟೀಲ್

ಈ ಉಪಚುನಾವಣೆಗಳಲ್ಲಿ ಟಿಡಿಪಿ ಗೆದ್ದರೆ, ಆಡಳಿತಾರೂಢ ಎನ್‌ಡಿಎ ರಾಜ್ಯಸಭೆಯಲ್ಲಿ ಇಬ್ಬರು ಹೆಚ್ಚುವರಿ ಸದಸ್ಯರನ್ನು ಗಳಿಸಲಿದೆ. ಮೇಲ್ಮನೆಯಲ್ಲಿ ಬಿಜೆಪಿಯ ಮಿತ್ರಪಕ್ಷಗಳಲ್ಲಿ JD(U), NCP, JD(S), RPI(A), ಶಿವಸೇನೆ, RLD, RLM, NPP, PMK, ತಮಿಳು ಮನಿಲಾ ಕಾಂಗ್ರೆಸ್, ಮತ್ತು UPPL ಸೇರಿವೆ.

ಇದು ಬಿಜೆಪಿಗೆ ಒಳ್ಳೆಯ ಸುದ್ದಿಯಾಗಿದೆ. ಎನ್‌ಡಿಎ ಇತ್ತೀಚೆಗೆ ಮೇಲ್ಮನೆಯಲ್ಲಿ ಬಹುಮತದ ಅಂಕವನ್ನು ಮುಟ್ಟಿದೆ ಮತ್ತು ಇದು ಪ್ರಮುಖ ಶಾಸನದ ಅಂಗೀಕಾರವನ್ನು ಖಚಿತಪಡಿಸಿಕೊಳ್ಳಲು ಅವರಿಗೆ ಸಹಾಯ ಮಾಡುತ್ತದೆ. ಈ ಇಬ್ಬರು ಸಂಸದರು ಟಿಡಿಪಿಗೆ ಬದಲಾದರೆ ಎನ್‌ಡಿಎ ಸಂಖ್ಯಾಬಲ ಮತ್ತಷ್ಟು ಬಲಗೊಳ್ಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ