AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indiatogether ಎಂದು ಟ್ವೀಟ್​ ಮಾಡಿದ ಸೆಲೆಬ್ರಿಟಿಗಳ ವಿರುದ್ಧ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ

ಸೆಲೆಬ್ರಿಟಿಗಳು ಮಾಡಿದ ಬಹುತೇಕ ಎಲ್ಲಾ ಟ್ವೀಟ್​ಗಳು ಒಂದೇ ರೀತಿ ಇದ್ದವು. ಅಲ್ಲದೆ, ಎಲ್ಲವನ್ನೂ ಒಂದೇ ಸಮಯದಲ್ಲಿ ಪೋಸ್ಟ್​ ಮಾಡಲಾಗಿತ್ತು. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ ಎಂಬುದು ಮಹಾರಾಷ್ಟ್ರ ಸರ್ಕಾರದ ಆರೋಪ.

Indiatogether ಎಂದು ಟ್ವೀಟ್​ ಮಾಡಿದ ಸೆಲೆಬ್ರಿಟಿಗಳ ವಿರುದ್ಧ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ
ಅಕ್ಷಯ್​ ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Feb 08, 2021 | 10:07 PM

Share

ಮುಂಬೈ: ರೈತರ ಪ್ರತಿಭಟನೆ ವಿಚಾರದಲ್ಲಿ ಟ್ವೀಟ್​ ಮಾಡಿದ ಮಾಜಿ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​, ನಟ ಅಕ್ಷಯ್​ ಕುಮಾರ್​, ಸುನಿಲ್​ ಶೆಟ್ಟಿ, ಗಾಯಕಿ ಲತಾ ಮಂಗೇಶ್ಕರ್​ ಈಗ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಇವರು ಮಾಡಿದ ಟ್ವೀಟ್​ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಇವರಿಗೆ ಯಾರಾದರೂ ಟ್ವೀಟ್​ ಮಾಡುವಂತೆ ಒತ್ತಾಯ ಮಾಡಿದ್ದಾರಾ ಅಥವಾ ಈ ಟ್ವೀಟ್​ ಮಾಡುವುದರ ಹಿಂದೆ ಯಾವುದಾದರೂ ದುರುದ್ದೇಶ ಇದೆಯೇ ಎಂಬುದರ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.

ರೈತರ ಪ್ರತಿಭಟನೆ ವಿಚಾರದಲ್ಲಿ ವಿದೇಶದವರು ಕೆಲವರು ಟ್ವೀಟ್​ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಖಂಡಿಸಿದ್ದರು. ಈ ವಿಚಾರದ ಬಗ್ಗೆ ಚರ್ಚೆ ಜೋರಾಗುತ್ತಿದ್ದಂತೆ, Indiatogether ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಕ್ರಿಕೆಟಿಗರು, ಬಾಲಿವುಡ್​ ಮಂದಿ, ಗಾಯಕರು ಟ್ವೀಟ್​ ಮಾಡಲು ಆರಂಭಿಸಿದ್ದರು. ಈ ಮೂಲಕ ಮೋದಿ ಸರ್ಕಾರ ನಿರ್ಧಾರವನ್ನು ಬೆಂಬಲಿಸಿದ್ದರು.

ಇಲ್ಲಿ ಗಮನಿಸಬೇಕಾದ ವಿಚಾರ ಎಂದರೆ, ಸೆಲೆಬ್ರಿಟಿಗಳು ಮಾಡಿದ ಬಹುತೇಕ ಎಲ್ಲಾ ಟ್ವೀಟ್​ಗಳು ಒಂದೇ ರೀತಿ ಇದ್ದವು. ಅಲ್ಲದೆ, ಎಲ್ಲವನ್ನೂ ಒಂದೇ ಸಮಯದಲ್ಲಿ ಪೋಸ್ಟ್​ ಮಾಡಲಾಗಿತ್ತು. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ ಎಂಬುದು ಮಹಾರಾಷ್ಟ್ರ ಸರ್ಕಾರದ ಆರೋಪ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್​ ನಾಯಕ ಸಚಿನ್​ ಸಾವಂತ್​, ಬಿಜೆಪಿ ಇವರಿಗೆ ಬೆದರಿಕೆ ಒಡ್ಡುತ್ತಿದ್ದರಿ ಭದ್ರತೆ ಒದಗಿಸಬೇಕು. ನಾನು ಗೃಹ ಸಚಿವ ಅನಿಲ್ ದೇಶ್​​ಮುಖ್ ಅವರೊಂದಿಗೆ ಮಾತನಾಡಿದ್ದೇನೆ. ಈ ವಿಚಾರದ ಗಂಭೀರತೆ ಅವರಿಗೆ ಅರ್ಥವಾಗಿದೆ. ಈ ಬಗ್ಗೆ ತನಿಖೆ ನಡೆಸಲು ಗುಪ್ತಚರ ಇಲಾಖೆಗೆ ಆದೇಶ ನೀಡಿದ್ದಾರೆ ಎಂದರು.

India Together ಹ್ಯಾಷ್​ಟ್ಯಾಗ್​ನೊಂದಿಗೆ ದೇಶ ಮೊದಲು ಎಂದ ಸಚಿನ್, ಕರಣ್, ಅಕ್ಷಯ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ