AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indiatogether ಎಂದು ಟ್ವೀಟ್​ ಮಾಡಿದ ಸೆಲೆಬ್ರಿಟಿಗಳ ವಿರುದ್ಧ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ

ಸೆಲೆಬ್ರಿಟಿಗಳು ಮಾಡಿದ ಬಹುತೇಕ ಎಲ್ಲಾ ಟ್ವೀಟ್​ಗಳು ಒಂದೇ ರೀತಿ ಇದ್ದವು. ಅಲ್ಲದೆ, ಎಲ್ಲವನ್ನೂ ಒಂದೇ ಸಮಯದಲ್ಲಿ ಪೋಸ್ಟ್​ ಮಾಡಲಾಗಿತ್ತು. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ ಎಂಬುದು ಮಹಾರಾಷ್ಟ್ರ ಸರ್ಕಾರದ ಆರೋಪ.

Indiatogether ಎಂದು ಟ್ವೀಟ್​ ಮಾಡಿದ ಸೆಲೆಬ್ರಿಟಿಗಳ ವಿರುದ್ಧ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ
ಅಕ್ಷಯ್​ ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Feb 08, 2021 | 10:07 PM

Share

ಮುಂಬೈ: ರೈತರ ಪ್ರತಿಭಟನೆ ವಿಚಾರದಲ್ಲಿ ಟ್ವೀಟ್​ ಮಾಡಿದ ಮಾಜಿ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​, ನಟ ಅಕ್ಷಯ್​ ಕುಮಾರ್​, ಸುನಿಲ್​ ಶೆಟ್ಟಿ, ಗಾಯಕಿ ಲತಾ ಮಂಗೇಶ್ಕರ್​ ಈಗ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಇವರು ಮಾಡಿದ ಟ್ವೀಟ್​ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಇವರಿಗೆ ಯಾರಾದರೂ ಟ್ವೀಟ್​ ಮಾಡುವಂತೆ ಒತ್ತಾಯ ಮಾಡಿದ್ದಾರಾ ಅಥವಾ ಈ ಟ್ವೀಟ್​ ಮಾಡುವುದರ ಹಿಂದೆ ಯಾವುದಾದರೂ ದುರುದ್ದೇಶ ಇದೆಯೇ ಎಂಬುದರ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.

ರೈತರ ಪ್ರತಿಭಟನೆ ವಿಚಾರದಲ್ಲಿ ವಿದೇಶದವರು ಕೆಲವರು ಟ್ವೀಟ್​ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಖಂಡಿಸಿದ್ದರು. ಈ ವಿಚಾರದ ಬಗ್ಗೆ ಚರ್ಚೆ ಜೋರಾಗುತ್ತಿದ್ದಂತೆ, Indiatogether ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಕ್ರಿಕೆಟಿಗರು, ಬಾಲಿವುಡ್​ ಮಂದಿ, ಗಾಯಕರು ಟ್ವೀಟ್​ ಮಾಡಲು ಆರಂಭಿಸಿದ್ದರು. ಈ ಮೂಲಕ ಮೋದಿ ಸರ್ಕಾರ ನಿರ್ಧಾರವನ್ನು ಬೆಂಬಲಿಸಿದ್ದರು.

ಇಲ್ಲಿ ಗಮನಿಸಬೇಕಾದ ವಿಚಾರ ಎಂದರೆ, ಸೆಲೆಬ್ರಿಟಿಗಳು ಮಾಡಿದ ಬಹುತೇಕ ಎಲ್ಲಾ ಟ್ವೀಟ್​ಗಳು ಒಂದೇ ರೀತಿ ಇದ್ದವು. ಅಲ್ಲದೆ, ಎಲ್ಲವನ್ನೂ ಒಂದೇ ಸಮಯದಲ್ಲಿ ಪೋಸ್ಟ್​ ಮಾಡಲಾಗಿತ್ತು. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ ಎಂಬುದು ಮಹಾರಾಷ್ಟ್ರ ಸರ್ಕಾರದ ಆರೋಪ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್​ ನಾಯಕ ಸಚಿನ್​ ಸಾವಂತ್​, ಬಿಜೆಪಿ ಇವರಿಗೆ ಬೆದರಿಕೆ ಒಡ್ಡುತ್ತಿದ್ದರಿ ಭದ್ರತೆ ಒದಗಿಸಬೇಕು. ನಾನು ಗೃಹ ಸಚಿವ ಅನಿಲ್ ದೇಶ್​​ಮುಖ್ ಅವರೊಂದಿಗೆ ಮಾತನಾಡಿದ್ದೇನೆ. ಈ ವಿಚಾರದ ಗಂಭೀರತೆ ಅವರಿಗೆ ಅರ್ಥವಾಗಿದೆ. ಈ ಬಗ್ಗೆ ತನಿಖೆ ನಡೆಸಲು ಗುಪ್ತಚರ ಇಲಾಖೆಗೆ ಆದೇಶ ನೀಡಿದ್ದಾರೆ ಎಂದರು.

India Together ಹ್ಯಾಷ್​ಟ್ಯಾಗ್​ನೊಂದಿಗೆ ದೇಶ ಮೊದಲು ಎಂದ ಸಚಿನ್, ಕರಣ್, ಅಕ್ಷಯ್

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ