AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈರಸ್ ಮಿಸ್ತ್ರಿ ವಜಾ ಪ್ರಕರಣ; ಟಾಟಾ ಸನ್ಸ್​ ಸಂಸ್ಥೆಗೆ ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ಗೆಲುವು

‘ಇದು ಗೆಲುವು ಅಥವಾ ಸೋಲಿನ ಪ್ರಶ್ನೆಯಲ್ಲ. ನನ್ನ ಬದ್ಧತೆ ಬಗ್ಗೆ ನಮ್ಮ ಟಾಟಾ ಸಂಸ್ಥೆಯು ಅನುಸರಿಸುತ್ತಿರುವ ನೈತಿಕ ನಿಯಮಗಳನ್ನು ಕೆಲವರು ಪ್ರಶ್ನಿಸಿದ್ದರು. ಸುಪ್ರೀಂಕೋರ್ಟ್​ ತನ್ನ ತೀರ್ಪಿನ ಮೂಲಕ ಈ ಪ್ರಶ್ನೆಗಳಿಗೆ ಉತ್ತರ ನೀಡಿದೆ.’ : ರತನ್ ಟಾಟಾ

ಸೈರಸ್ ಮಿಸ್ತ್ರಿ ವಜಾ ಪ್ರಕರಣ; ಟಾಟಾ ಸನ್ಸ್​ ಸಂಸ್ಥೆಗೆ ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ಗೆಲುವು
ರತನ್ ಟಾಟಾ (ಸಂಗ್ರಹ ಚಿತ್ರ)
guruganesh bhat
|

Updated on:Mar 26, 2021 | 6:03 PM

Share

ದೆಹಲಿ: ಟಾಟಾ ಕಂಪನಿ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಟಾ ಸನ್ಸ್ ಕಂಪನಿಗೆ ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ಗೆಲುವು ದೊರೆತಿದೆ. ಟಾಟಾ ಸಂಸ್ಥೆಯ ಕಾರ್ಯನಿರ್ವಾಹಕ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾಗೊಳಿಸಿದ ಟಾಟಾ ಸನ್ಸ್ ಕಂಪನಿಯ ನಿರ್ಧಾರದಲ್ಲಿ ತಪ್ಪಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸಂವಿಧಾನದ ವಿಧಿ 75ರ ಅಡಿ ಮಾತುಕತೆ ಮೂಲಕ ಟಾಟಾ ಸನ್ಸ್ ಕಂಪನಿ ಹಾಗೂ ಸೈರಸ್ ಮಿಸ್ತ್ರಿ ನಡುವಿನ ವಿವಾದ ಬಗೆಹರಿಸಿಕೊಳ್ಳಿ ಎಂದು ಆದೇಶಿಸಿರುವ ಕೋರ್ಟ್​, ಈ ಹಂತದಲ್ಲಿ ವಿವಾದ ಬಗೆಹರಿಸಲು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದೆ.

2016ರಲ್ಲಿ ಟಾಟಾ ಸನ್ಸ್ ಕಂಪನಿಯ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ವಜಾಗೊಳಿಸಿದ್ದನ್ನು ವಿರೋಧಿಸಿ ಕಂಪನಿ ಕಾಯ್ದೆಗಳಿಗೆ ಸಂಬಂಧಿಸಿದ ನ್ಯಾಯ ಮಂಡಳಿಗೆ ಸೈರಸ್ ಮಿಸ್ತ್ರಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ವಿಚಾರಣೆ ನಡೆಸಿದ ಎನ್​ಸಿಎಲ್​ಎಟಿಯ 2019ರಲ್ಲಿ ಸೈರಸ್ ಮಿಸ್ತ್ರಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಮರು ನೇಮಕಗೊಳಿಸುವಂತೆ ಆದೇಶ ನೀಡಿತ್ತು. ಆದರೆ ಇದೀಗ 2019ರ ಡಿಸೆಂಬರ್​ನಲ್ಲಿ NCLAT ನೀಡಿದ್ದ ಆದೇಶವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.

ಇಂದಿನ ತೀರ್ಪಿನ ಕುರಿತು ಪ್ರತಿಕ್ರಿಯಿಸಿ ಟಾಟಾ ಸಂಸ್ಥೆಯ ವರಿಷ್ಠ ರತನ್ ಟಾಟಾ ಟ್ವೀಟ್ ಮಾಡಿದ್ದಾರೆ. ‘ಇದು ಗೆಲುವು ಅಥವಾ ಸೋಲಿನ ಪ್ರಶ್ನೆಯಲ್ಲ. ನನ್ನ ಬದ್ಧತೆ ಬಗ್ಗೆ ನಮ್ಮ ಟಾಟಾ ಸಂಸ್ಥೆಯು ಅನುಸರಿಸುತ್ತಿರುವ ನೈತಿಕ ನಿಯಮಗಳನ್ನು ಕೆಲವರು ಪ್ರಶ್ನಿಸಿದ್ದರು. ಸುಪ್ರೀಂಕೋರ್ಟ್​ ತನ್ನ ತೀರ್ಪಿನ ಮೂಲಕ ಈ ಪ್ರಶ್ನೆಗಳಿಗೆ ಉತ್ತರ ನೀಡಿದೆ. ಇಂದಿನ ತೀರ್ಪಿನಿಂದ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನನ್ನ ನಂಬಿಕೆ ಬಲಗೊಂಡಿದೆ’ ಎಂದು ರತನ್ ಟಾಟಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Govt Stake Sale In Tata Communications: ಟಾಟಾ ಕಮ್ಯುನಿಕೇಷನ್ಸ್​ನಲ್ಲಿನ ಎಲ್ಲ ಷೇರನ್ನು ಮಾರಲಿದೆ ಕೇಂದ್ರ ಸರ್ಕಾರ

Published On - 5:03 pm, Fri, 26 March 21

Follow Us
guruganesh bhat
guruganesh bhat
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ