AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ದುರ್ಗಾಪೂಜೆ ವೇಳೆ ಕಾಲ್ತುಳಿತದಲ್ಲಿ ಮೂರು ಮಂದಿ ಸಾವು, ಹಲವರಿಗೆ ಗಾಯ

ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದ ದುರ್ಗಾಪೂಜೆ ವೇಳೆ ಕಾಲ್ತುಳಿತದಲ್ಲಿ 3 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದುರ್ಗಾಪೂಜೆ ಆಚರಣೆಯಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒರ್ವ ಬಾಲಕ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಿಹಾರ: ದುರ್ಗಾಪೂಜೆ ವೇಳೆ ಕಾಲ್ತುಳಿತದಲ್ಲಿ ಮೂರು ಮಂದಿ ಸಾವು, ಹಲವರಿಗೆ ಗಾಯ
ಬಿಹಾರ ದೇವಸ್ಥಾನImage Credit source: Business Standard
ನಯನಾ ರಾಜೀವ್
|

Updated on:Oct 24, 2023 | 7:55 AM

Share

ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದ ದುರ್ಗಾಪೂಜೆ ವೇಳೆ ಕಾಲ್ತುಳಿತದಲ್ಲಿ 3 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದುರ್ಗಾಪೂಜೆ ಆಚರಣೆಯಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒರ್ವ ಬಾಲಕ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಸದರ್​ ಆಸ್ಪತ್ರೆಗೆ ದಾಖಲಿಸಲಾಗಿದೆ, ಜನಸಂದಣಿಯನ್ನು ನಿರ್ವಹಿಸಲು ಪೂಜೆ ವೇಳೆ ಯಾವುದೇ ಭದ್ರತಾ ನಿಯೋಜನೆ ಇರಲಿಲ್ಲ, ಇದು ಕಾಲ್ತುಳಿತಕ್ಕೆ ಕಾರಣವಾಯಿತು.

ಗೋಪಾಲ್‌ಗಂಜ್ ಎಸ್‌ಪಿ ಮಾತನಾಡಿ, ರಾತ್ರಿ 8.30 ರ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಬಾಲಕ ನೆಲಕ್ಕೆ ಬಿದ್ದು ತುಳಿತಕ್ಕೊಳಗಾಗಿದ್ದ, ಆತನನ್ನು ರಕ್ಷಿಸಲು ಹೋದ ಇನ್ನೂ ಇಬ್ಬರು ಕೂಡ ಸಾವನ್ನಪ್ಪಿದ್ದಾರೆ.

ಮೃತರನ್ನು ಗುರುತಿಸಲಾಗಿದ್ದು, ಏಳು ಮಂದಿ ಗಾಯಾಳುಗಳನ್ನು ಸದರ್ ಆಸ್ಪತ್ರೆಯಿಂದ ಉತ್ತಮ ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

ಮತ್ತಷ್ಟು ಓದಿ: Odisha Stampede: ಒಡಿಶಾದಲ್ಲಿ ಮಕರ ಮೇಳದಲ್ಲಿ ಕಾಲ್ತುಳಿತ; ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಮೃತರಲ್ಲಿ ಕುಚಯ್‌ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಸಾಮುಸಾ ನಿವಾಸಿ ರವೀಂದ್ರ ಸಾಹ್ ಅವರ 55 ವರ್ಷದ ಪತ್ನಿ ಊರ್ಮಿಳಾ ದೇವಿ, ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ದಿಲಾ ಗ್ರಾಮದ ನಿವಾಸಿ ಭೋಜ್ ಶರ್ಮಾ ಅವರ 60 ವರ್ಷದ ಪತ್ನಿ ಶಾಂತಿ ದೇವಿ ಮತ್ತು 5 ವರ್ಷದ ಆಯುಷ್ ಕುಮಾರ್ ಸೇರಿದ್ದಾರೆ. ಮಂಜಾ ಪೊಲೀಸ್ ಠಾಣೆ ವ್ಯಾಪ್ತಿಯ ಸನಾಹ್ ಮಥಿಯಾ ಗ್ರಾಮದ ನಿವಾಸಿ ದಿಲೀಪ್ ರಾಮ್ ಅವರ ಪುತ್ರ.

ಪೂಜಾ ಸಮಿತಿಗಳ ಮನವಿ ಮೇರೆಗೆ ವಿಜಯದಶಮಿ ದಿನದಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಜಾತ್ರೆ ನಡೆಸಲು ಅನುಮತಿ ನೀಡಲಾಗಿದೆ. ಪ್ರಸ್ತುತ ಪರಿಸ್ಥಿತಿ ಸಾಮಾನ್ಯವಾಗಿದೆ. ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:54 am, Tue, 24 October 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!