AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಶಾಲೆಯಲ್ಲಿ 3 ವರ್ಷದ ಮಗುವಿನ ಮೇಲೆ ಪಿಸ್ತೂಲ್​ನಿಂದ ಗುಂಡು ಹಾರಿಸಿದ 5 ವರ್ಷದ ಬಾಲಕ

ನರ್ಸರಿ ಶಾಲೆಯ ಬಾಲಕನೊಬ್ಬ 3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗುಂಡು ಹಾರಿಸಿದ ಮಗುವಿಗೆ ಕೇವಲ ಐದು ವರ್ಷ ವಯಸ್ಸು. ಮಗುವಿನ ಬ್ಯಾಗ್​ನೊಳಗೆ ಪಿಸ್ತೂಲ್​ ಹೇಗೆ ಬಂದಿದೆ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ.

Shocking News: ಶಾಲೆಯಲ್ಲಿ 3 ವರ್ಷದ ಮಗುವಿನ ಮೇಲೆ ಪಿಸ್ತೂಲ್​ನಿಂದ ಗುಂಡು ಹಾರಿಸಿದ 5 ವರ್ಷದ ಬಾಲಕ
ಗುಂಡಿನ ದಾಳಿImage Credit source: NDTV
ನಯನಾ ರಾಜೀವ್
|

Updated on: Jul 31, 2024 | 2:29 PM

Share

ಬಿಹಾರದ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕ 3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್​ನ ಲಾಲ್​ಪಟ್ಟಿಯಲ್ಲಿರುವ ಸೇಂಟ್​ ಜಾನ್ಸ್​ ಬೋರ್ಡಿಂಗ್ ಸ್ಕೂಲ್​ನಲ್ಲಿ ನಡೆದಿದೆ. ಗುಂಡು ಮಗುವಿನ ಎಡಗೈಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸಿಫ್ ಎಂದು ಗುರುತಿಸಲಾಗಿದೆ.

ಈತ ಐದು ವರ್ಷದ ಬಾಲಕನಾಗಿದ್ದು, ಶಾಲೆಗೆ ಬಂದ ಕೂಡಲೇ ಪ್ರಾರ್ಥನೆ ಸಲ್ಲಿಸುವ ಮುನ್ನ ತನ್ನ ಬ್ಯಾಗ್​ನಿಂದ ಬಂದೂಕು ತೆಗೆದು ಗುಂಡು ಹಾರಿಸಿದ್ದಾನೆ. ಆಸಿಫ್​ನನ್ನು ನಗರದ ತ್ರಿವೇಣಿಗಂಜ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಆರೋಪಿಯಾಗಿರುವ ಬಾಲಕ ಅಲ್ಲಿಂದ ಓಡಿಹೋಗಿದ್ದಾನೆ, ಶಾಲೆಯ ಆಡಳಿತ ಮಂಡಳಿಯ ಪ್ರಕಾರ, ಘಟನೆ ನಂತರ ಎರಡೂ ಮಕ್ಕಳ ಕುಟುಂಬದವರನ್ನು ಶಾಲೆಗೆ ಕರೆಸಲಾಯಿತು.

ಇದೇ ವೇಳೆ ವಿದ್ಯಾರ್ಥಿ ಏಕಲವ್ಯ ಕೂಡ ಶಾಲೆಯ ಪ್ರಾಂಶುಪಾಲರ ಚೇಂಬರ್​ನಲ್ಲಿದ್ದು, ಆತನ ತಂದೆ ಮುಕೇಶ್​ ಯಾದವ್ ಕೂಡ ಅಲ್ಲಿದ್ದರು. ಘಟನೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಮುಕೇಶ್​ ಯಾದವ್ ಆಯುಧ ಸಮೇತ ತನ್ನ ಮಗುವಿನೊಂದಿಗೆ ಓಡಿ ಹೋಗಿದ್ದಾರೆ. ಆ ವೇಳೆ ಗಾಯಗೊಂಡ ಮಗುವಿನ ಕುಟುಂಬಸ್ಥರು ಆತನಿಂದ ಪಿಸ್ತೂಲ್ ಕಸಿದುಕೊಂಡಿದ್ದಾರೆ.

ಘಟನೆಯ ನಂತರ ಕೋಪದಗೊಂಡ ಕುಟುಂಬಸ್ಥರು ಶಾಲೆಯನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ತ್ರಿವೇಣಿಗಂಜ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸದ್ಯ ಬಾಲಕ ಹಾಗೂ ಆತನ ಕುಟುಂಬದವರು ತಲೆಮರೆಸಿಕೊಂಡಿದ್ದಾರೆ.

ಮತ್ತಷ್ಟು ಓದಿ: ಬಿಹಾರದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಪತ್ರಕರ್ತರ ಹತ್ಯೆ; ಮರಕ್ಕೆ ನೇಣು ಬಿಗಿದ ಶವ ಪತ್ತೆ

ಪೊಲೀಸರು ತನಿಖೆ ಆರಂಭಿಸಿದ್ದು, ಇಷ್ಟೊಂದು ದೊಡ್ಡ ನಿರ್ಲಕ್ಷ್ಯ ಹೇಗಾಯಿತು ಎಂದು ಶಾಲಾ ಆಡಳಿತ ಮಂಡಳಿಯನ್ನು ಪ್ರಶ್ನಿಸಲಾಗುತ್ತಿದೆ. ಶಾಲೆಗಳಲ್ಲಿ ಭದ್ರತೆ ಹಾಗೂ ವಿದ್ಯಾರ್ಥಿಗಳ ಬ್ಯಾಗ್ ತಪಾಸಣೆಗೆ ಒತ್ತು ನೀಡಲಾಗುತ್ತಿದೆ. ಈ ಘಟನೆ ಬಳಿಕ ಪೋಷಕರು ಮತ್ತು ಮಕ್ಕಳಲ್ಲಿ ಆತಂಕ ಶುರುವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ