AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಸಿಲಿಗುರಿಗೆ ತೆರಳಿತ್ತಿದ್ದ ಬಸ್​ ಪಲ್ಟಿ ಇಬ್ಬರು ಸಾವು, ಹಲವು ಮಂದಿಗೆ ಗಾಯ

ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಬಿಹಾರ: ಸಿಲಿಗುರಿಗೆ ತೆರಳಿತ್ತಿದ್ದ ಬಸ್​ ಪಲ್ಟಿ ಇಬ್ಬರು ಸಾವು, ಹಲವು ಮಂದಿಗೆ ಗಾಯ
ಅಪಘಾತImage Credit source: India TV
ನಯನಾ ರಾಜೀವ್
|

Updated on: Feb 12, 2024 | 11:08 AM

Share

ಬಸ್​ವೊಂದು ಪಲ್ಟಿಯಾಗಿದ್ದು ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್​ನಲ್ಲಿ ನಡೆದಿದೆ. ಶಿವಂ ಡಿಲಕ್ಸ್​ ಹೆಸರಿನ ಬಸ್​ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದಲ್ಲಿ ಸುಮಾರು 48ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದಾರೆ. ರಾಂಚಿಯಿಂದ ಸಿಲಿಗುರಿಗೆ ತೆರಳುತ್ತಿದ್ದ ಕಬೀರ್​ ಮಠದ ಬಳಿ ಪಲ್ಟಿಯಾಗಿತ್ತು. ಕತಿಹಾರ್ ಡಿಎಸ್​ಪಿ ಇಬ್ಬರ ಸಾವನ್ನು ಖಚಿತಪಡಿಸಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರೆದಿದೆ.

ಅಪಘಾತಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಸಿಲಿಗುರಿಗೆ ಹೋಗುತ್ತಿದ್ದ ಪ್ರಯಾಣಿಕರ ಪ್ರಕಾರ ಚಾಲಕ ನಿದ್ರೆಗೆ ಜಾರಿದ್ದ ಎಂದಿದ್ದಾರೆ. ಕೊಡೆರ್ಮಾದಲ್ಲಿ ರಾತ್ರಿ ಊಟ ಮಾಡಿದ ಬಳಿಕ ಬಸ್​ ಮುಂದೆ ಸಾಗಿದ್ದರಿಂದ ಬೆಳಗಿನ ಜಾವ 3.30ರ ಸುಮಾರಿಗೆ ಬಸ್​ ಪಲ್ಟಿಯಾಗಿದೆ ಎಂದು ಪ್ರಯಾಣಿಕ ರಾಹುಲ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಪಘಾತ ಪ್ರಕರಣಗಳಿಂದ ಹೆಚ್ಚು ಸುದ್ದಿಯಾದ ಚಾಮರಾಜನಗರ! ಒಂದೇ ತಿಂಗಳಲ್ಲಿ 19 ಅಪಘಾತ; 26 ಮಂದಿ ಸಾವು

ಅಪಘಾತದ ಬಳಿಕ ಅನೇಕರು ಬಸ್​ನಲ್ಲಿ ಸಿಲುಕಿದ್ದಾರೆ, ಪೊಲೀಸರು ಅವರನ್ನು ಹೊರತೆಗೆಯಲು ಪ್ರಯತ್ನಿಸಿದರು ಬಳಿಕ ಕ್ರೇನ್ ಸಹಾಯದಿಂದ ರಕ್ಷಿಸಿದ್ದಾರೆ. ಇಬ್ಬರು ಮಹಿಳಾ ಪ್ರಯಾಣಿಕರನ್ನು ಬಸ್​ನಿಂದ ಹೊರಗೆ ತೆಗೆಯಲಾಗಿದೆ.

ಘಟನಾ ಸ್ಥಳದ ವಿಡಿಯೋ

ಈ ಘಟನೆ ಬಗ್ಗೆ ಕತಿಹಾರ್ ಉಪ ವಿಭಾಗದ ಪೊಲೀಸ್​ ಅಧಿಕಾರಿ ಶಶಿ ಶೇಖರ್ ಮಾತನಾಡಿ, ರಾಂಚಿಯಿಂದ ಸಿಲಿಗುರಿಗೆ ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ, ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ