AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಹಾರ ಮತ್ತು ಜಾರ್ಖಂಡ್ ಸಹೋದರರು’: ಭೋಜ್‌ಪುರಿ ಮತ್ತು ಮಗಾಹಿ ಭಾಷೆಗಳ ಕುರಿತು ಸೊರೆನ್ ಹೇಳಿಕೆಗೆ ನಿತೀಶ್ ಕುಮಾರ್ ಪ್ರತಿಕ್ರಿಯೆ

"ಇಂತಹ ವಿಷಯಗಳನ್ನು ಎಂದಿಗೂ ಯೋಚಿಸಬಾರದು". ಬಿಹಾರ ಮತ್ತು ಜಾರ್ಖಂಡ್ ಸಹೋದರರು, ನಾವು ಒಂದೇ ಕುಟುಂಬಕ್ಕೆ ಸೇರಿದವರು. ಜನರು ಪರಸ್ಪರರ ಬಗ್ಗೆ ಟೀಕೆ ಮಾಡುವ ಅಗತ್ಯವಿಲ್ಲ. ಅವರು ಒಬ್ಬರಿಗೊಬ್ಬರು ಮಾತ್ರ ಪ್ರೀತಿಯನ್ನು ಹೊಂದಿದ್ದಾರೆ ಎಂದಿದ್ದಾರೆ ನಿತೀಶ್ ಕುಮಾರ್.

‘ಬಿಹಾರ ಮತ್ತು ಜಾರ್ಖಂಡ್ ಸಹೋದರರು': ಭೋಜ್‌ಪುರಿ ಮತ್ತು ಮಗಾಹಿ ಭಾಷೆಗಳ ಕುರಿತು ಸೊರೆನ್ ಹೇಳಿಕೆಗೆ ನಿತೀಶ್ ಕುಮಾರ್ ಪ್ರತಿಕ್ರಿಯೆ
ನಿತೀಶ್ ಕುಮಾರ್
TV9 Web
| Edited By: |

Updated on: Sep 20, 2021 | 5:02 PM

Share

ದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಭೋಜ್‌ಪುರಿ ಮತ್ತು ಮಗಾಹಿ ಭಾಷೆಗಳ ಕುರಿತು ಮಾಡಿದ ಹೇಳಿಕೆಗಳು ದೊಡ್ಡ ವಿವಾದವನ್ನು ಹುಟ್ಟುಹಾಕಿದ ಕೆಲವು ದಿನಗಳ ನಂತರ ಬಿಹಾರದ ಮುಖ್ಯಮಂತ್ರಿ  ನಿತೀಶ್ ಕುಮಾರ್ (Nitish Kumar)  ಸೋಮವಾರ ಪ್ರತಿಕ್ರಿಯಿಸಿದ್ದಾರೆ. ಎರಡು ನೆರೆಯ ರಾಜ್ಯಗಳು ಸಹೋದರರು ಎರಡೂ ಕಡೆಯ ಜನರು ಪರಸ್ಪರ ಪ್ರೀತಿಸುತ್ತಾರೆ ಎಂದು ಹೇಳಿದರು.

“2000ದಲ್ಲಿ ಬಿಹಾರವನ್ನು ಎರಡಾಗಿ ವಿಭಜಿಸಲಾಗಿದೆ” ಎಂದು ನಿತೀಶ್ ಕುಮಾರ್ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಜನತಾ ದಳ (ಯುನೈಟೆಡ್) ನಾಯಕ ಬಿಹಾರದ ದಕ್ಷಿಣ ಭಾಗದಿಂದ ಆ ವರ್ಷದ ನವೆಂಬರ್‌ನಲ್ಲಿ ಜಾರ್ಖಂಡ್ ರಚನೆಯನ್ನು ಉಲ್ಲೇಖಿಸಿ ಈ ಮಾತು ಹೇಳಿದ್ದಾರೆ. “ಎರಡೂ ರಾಜ್ಯಗಳ ಜನರು ಪರಸ್ಪರ ಪ್ರೀತಿಸುತ್ತಾರೆ. ಜನರು ರಾಜಕೀಯವಾಗಿ ಏನು ಹೇಳುತ್ತಾರೆಂದು ನನಗೆ ಗೊತ್ತಿಲ್ಲ. ಜಾರ್ಖಂಡ್ ನಮ್ಮಿಂದ ಬೇರ್ಪಟ್ಟಿದ್ದರೂ, ನಮಗೆ ಅವರ ಮೇಲೆ ಮಾತ್ರ ಪ್ರೀತಿ ಇದೆ.

“ಇಂತಹ ವಿಷಯಗಳನ್ನು ಎಂದಿಗೂ ಯೋಚಿಸಬಾರದು”. ಬಿಹಾರ ಮತ್ತು ಜಾರ್ಖಂಡ್ ಸಹೋದರರು, ನಾವು ಒಂದೇ ಕುಟುಂಬಕ್ಕೆ ಸೇರಿದವರು. ಜನರು ಪರಸ್ಪರರ ಬಗ್ಗೆ ಟೀಕೆ ಮಾಡುವ ಅಗತ್ಯವಿಲ್ಲ. ಅವರು ಒಬ್ಬರಿಗೊಬ್ಬರು ಮಾತ್ರ ಪ್ರೀತಿಯನ್ನು ಹೊಂದಿದ್ದಾರೆ ಎಂದಿದ್ದಾರೆ ನಿತೀಶ್ ಕುಮಾರ್.

ಇತ್ತೀಚಿನ ಸಂದರ್ಶನವೊಂದರಲ್ಲಿ ಸೊರೆನ್ ಭೋಜ್‌ಪುರಿ ಮತ್ತು ಮಗಾಹಿಗಳನ್ನು “ಬಿಹಾರದಿಂದ ಆಮದು ಮಾಡಿಕೊಳ್ಳಲಾಗಿದೆ” ಎಂದು ಹೇಳಿದ್ದರು. ಜಾರ್ಖಂಡ್‌ಗೆ ಪ್ರತ್ಯೇಕ ರಾಜ್ಯವನ್ನು ಕೋರಿ ಚಳುವಳಿಯ ಸಮಯದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಜನರು “ಭೋಜ್‌ಪುರಿಯಲ್ಲಿ ಕೆಟ್ಟದಾಗಿ ಬಯ್ಯುತ್ತಿದ್ದರು” ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಳಿದ್ದರು.

ಬಿಹಾರದಲ್ಲಿ ಎರಡು ಭಾಷೆಗಳನ್ನು ವ್ಯಾಪಕವಾಗಿ ಮಾತನಾಡಲಾಗುತ್ತದೆಯಾದರೂ, ಇವುಗಳನ್ನು ಅದರ ದಕ್ಷಿಣದ ಪ್ರಾಂತ್ಯದಲ್ಲಿಯೂ ಬಳಸಲಾಗುತ್ತದೆ.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡಿರುವ ಮತ್ತು ಜಾರ್ಖಂಡ್ ನಲ್ಲಿ  ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೊರೆನ್ ಅವರನ್ನು ಟೀಕಿಸಿತ್ತು. ಅವರು ಘರ್ಷಣೆಯನ್ನು ಸೃಷ್ಟಿಸಲು ಮತ್ತು ಭಾಷೆಯ ಆಧಾರದ ಮೇಲೆ ಜನರನ್ನು ಧ್ರುವೀಕರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಆಡಳಿತಾರೂಢ ಜೆಎಂಎಂ, ಸಿಎಂ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:ಪಂಜಾಬ್​ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಅಭಿನಂದನೆ; ಜನರ ಒಳಿತು ನಮ್ಮ ಆದ್ಯತೆಯಾಗಲಿ ಎಂದ ಮೋದಿ

ಇದನ್ನೂ ಓದಿ: Video: ರಷ್ಯಾದ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿಗೆ 8 ಜನ ಸಾವು; ಕಿಟಕಿಯಿಂದ ಜಿಗಿದು ಓಡಿದ ವಿದ್ಯಾರ್ಥಿಗಳು

(Bihar and Jharkhand are brothers Bihar CM Nitish Kumar responds to Hemant Soren’s remarks on Bhojpuri and Magahi languages)

ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ