AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Election 2025 Results: ಇಂದು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಗೆಲುವಿನ ಬಿ‘ಹಾರ’ ಎನ್​ಡಿಎಗಾ, ಮಹಾಘಟಬಂಧನಕ್ಕಾ?

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ದಾಖಲೆಯ ಮತದಾನ ಆಗಿದ್ದೇ ಆಗಿದ್ದು, ಫಲಿತಾಂಶದ ಬಗ್ಗೆಯೂ ಸಾಕಷ್ಟು ಕುತೂಹಲ ಮೂಡಿದೆ. ಇದರ ಬೆನ್ನಲ್ಲೇ ಆರ್​​ಜೆಡಿ ಮತ್ತು ಜೆಡಿಯು ನಾಯಕರ ಮಧ್ಯೆ ಪೋಸ್ಟರ್ ಸಮರ ಶುರುವಾಗಿದ್ದು, ಪರಸ್ಪರ ವ್ಯಂಗ್ಯ ಮಾಡುವ ಮೂಲಕ ಕಾಲೆಳೆಯುತ್ತಿದ್ದಾರೆ. ಮತ ಎಣಿಕೆ ಇಂದು ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಹುತೇಕ ಚಿತ್ರಣ ಸಿಗುವ ನಿರೀಕ್ಷೆ ಇದೆ.

Bihar Election 2025 Results: ಇಂದು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಗೆಲುವಿನ ಬಿ‘ಹಾರ’ ಎನ್​ಡಿಎಗಾ, ಮಹಾಘಟಬಂಧನಕ್ಕಾ?
ಇಂದು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ (ಸಾಂದರ್ಭಿಕ ಚಿತ್ರ)
Ganapathi Sharma
| Edited By: |

Updated on: Nov 14, 2025 | 6:47 AM

Share

ಪಟ್ನಾ, ನವೆಂಬರ್ 14: 38 ಜಿಲ್ಲೆಗಳು, 243 ಕ್ಷೇತ್ರಗಳು, 2,600ಕ್ಕೂ ಹೆಚ್ಚು ಅಭ್ಯರ್ಥಿಗಳು. ಬಿಹಾರ ವಿಧಾನಸಭೆ ಚುನಾವಣೆಯ (Bihar Assembly Election) ಮತ ಎಣಿಕೆ ಇಂದು ನಡೆಯುತ್ತಿದ್ದು, ದೇಶದ ದಿಕ್ಸೂಚಿ ಎಂದೇ ಕರೆಯಲ್ಪಡುವ ಬಿಹಾರ ಗೆಲುವಿನ ಹಾರ ಯಾರಿಗೆ ಎನ್ನುವ ಕುತೂಹಲ ರಾಷ್ಟ್ರ ರಾಜಕಾರಣದಲ್ಲಿ ಸೃಷ್ಟಿಯಾಗಿದೆ. ಮತ್ತೆ ನಿತೀಶ್ ಆಡಳಿತ ಮುಂದುವರೆಯುತ್ತಾ? ಇಲ್ಲ ಮತದಾರ ಈ ಬಾರಿ ಬದಲಾವಣೆಯನ್ನು ಬಯಲಿಸಿದ್ದಾನಾ ಎಂಬ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ.

ಬಿಹಾರದ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿದೆ. ಈ ಬಾರಿಯಂತೂ ಬಿಹಾರದ ಜನ ದಾಖಲೆಯ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ. ಇದರಲ್ಲಿ ಮಹಿಳಾ ಮತದಾರರದ್ದು ಮೇಲುಗೈ. ಹೀಗಾಗಿ ಫಲಿತಾಂಶ ಕುತೂಹಲ ಕೆರಳುವಂತೆ ಮಾಡಿದೆ. ಎನ್​ಡಿಎ ಗೆದ್ದು ನಿತೀಶ್ ಮತ್ತೆ ಅಧಿಕಾರದ ಗದ್ದುಗೆ ಏರುವ ತವಕದಲ್ಲಿದ್ದರೆ, ಮಹಾಘಟಬಂಧನದ ಯುವ ನಾಯಕ ತೇಜಸ್ವಿ ಯಾದವ್, ಗೆಲುವಿನ ಭಾಗ್ಯಕ್ಕೆ ಎದುರು ನೋಡುತ್ತಿದ್ದಾರೆ.

ಎನ್​ಡಿಎಗೆ ಗೆಲುವು ಎಂದಿರುವ ಎಕ್ಸಿಟ್​ಪೋಲ್​ಗಳು

ಮತದಾನೋತ್ತರ ಸಮೀಕ್ಷೆಗಳು ಎನ್​ಡಿಎ ಸರ್ಕಾರ ರಚನೆ ಆಗುವ ಬಗ್ಗೆ ಭವಿಷ್ಯ ನುಡಿದಿವೆ. ಹೀಗಾಗಿಯೇ ಜೆಡಿಯು ಸೇರಿ ಬಿಜೆಪಿ ಮಿತ್ರಪಕ್ಷಗಳಲ್ಲಿ ಸಂಭ್ರಮ ಈಗಾಗಲೇ ಮನೆ ಮಾಡಿದೆ.

ಜೆಡಿಯು, ಆರ್​ಜೆಡಿ ಮಧ್ಯೆ ಪೋಸ್ಟರ್ ಸಮರ

ಏತನ್ಮಧ್ಯೆ, ಪಾಟ್ನಾದ ಜೆಡಿಯು ಕಚೇರಿಯ ಹೊರಗೆ ‘ಟೈಗರ್ ಅಭಿ ಜಿಂದಾ ಹೇ’, ಅಂದರೆ ಹುಲಿ ಇನ್ನೂ ಜೀವಂತವಾಗಿದೆ ಎನ್ನುವ ಪೋಸ್ಟರ್​ಗಳು ರಾರಾಜಿಸುತ್ತಿವೆ. ಭರ್ಜರಿ ಗೆಲುವಿನ ವಿಶ್ವಾಸದಲ್ಲಿರುವ ಜೆಡಿಯು ಕಾರ್ಯಕರ್ತರು, ಸಂಭ್ರಮಾಚರಣೆಯ ತಯಾರಿಯಲ್ಲಿದ್ದಾರೆ. ಇದಕ್ಕೆ RJDಯ ಬೆಂಬಲಿತ ಸಮಾಜವಾದಿ ಪಕ್ಷ ಕೌಂಟರ್ ಕೊಟ್ಟಿದೆ. ‘ಅಲ್ವಿದಾ ಚಾಚಾ’ ಅಂದರೆ ಬಾಯ್ ಬಾಯ್ ಚಿಕ್ಕಪ್ಪ ಎನ್ನುವ ಮೂಲಕ ನಿತೀಶ್ ಕುಮಾರ್ ಕಾಲೆಳೆದಿದೆ.

ಇನ್ನು ಜೆಡಿಯುನ ಬಾಹುಬಲಿ ಎಂದೇ ಕರೆಸಿಕೊಳ್ಳುವವರು ಅನಂತ್ ಕುಮಾರ್ ಸಿಂಗ್. ಇಚರು 20ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದಾರೆ. ಆದರೂ ಜೈಲಿನಿಂದ್ಲೇ ಪಟ್ನಾದ ಮೊಕಾಮಾ ವಿಧಾನಸಭಾ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದಾರೆ. ಇವರ ಬೆಂಬಲಿಗರಂತೂ ಈಗಾಗಲೇ ಸಂಭ್ರಮಾಚರಣೆಗೆ ತಯಾರಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; ಆರ್​ಜೆಡಿ ಎಂಎಲ್​ಸಿ ಸುನಿಲ್ ಸಿಂಗ್ ವಿವಾದ

ಮತ್ತೊಂದೆಡೆ, ಮತದಾನೋತ್ತರ ಸಮೀಕ್ಷೆ ಸುಳ್ಳಾಗುತ್ತದೆ, ನಾವೇ ಗೆಲ್ಲುತ್ತೇವೆ ಎಂದು ಮಹಾಘಟಬಂಧನ ನಾಯಕರು ಹೇಳುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಗೆ ನವೆಂಬರ್ 6 ಮತ್ತು ನವೆಂಬರ್ 11, ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ