AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ದಿನದಂದು ಬಿಹಾರ್ ಬೆಟಾಲಿಯನ್​ನ ಹುತಾತ್ಮ ಯೋಧರಿಗೆ ಗೌರವ?

ಉಭಯ ದೇಶಗಳ ನಡುವಿನ ಒಪ್ಪಂದಕ್ಕೆ ಅನುಗುಣವಾಗಿ ಚೀನಾದ ಪಡೆಗಳು ಪೆಟ್ರೋಲಿಂಗ್ ಪಾಯಿಂಟ್ 14 ರ ಸಮೀಪವಿರುವ ಸ್ಥಳದಿಂದ ಹಿಂದೆ ಸರಿಯಲು ನಿರಾಕರಿಸಿದಾಗ ಭಾರತೀಯ ಸೈನಿಕರು ಪೂರ್ಣ ಪ್ರಮಾಣದಲ್ಲಿ ಪ್ರತೀಕಾರ ತೀರಿಸಿಕೊಂಡರು. ಏಳು ಗಂಟೆಗಳ ಘರ್ಷಣೆಯಲ್ಲಿ ಚೀನಾದ ಸೈನಿಕರನ್ನು ಹೊರಹಾಕುವಲ್ಲಿ ಯಶಸ್ವಿಯಾದರು.

ಗಣರಾಜ್ಯೋತ್ಸವ ದಿನದಂದು ಬಿಹಾರ್ ಬೆಟಾಲಿಯನ್​ನ ಹುತಾತ್ಮ ಯೋಧರಿಗೆ ಗೌರವ?
ಕರ್ನಲ್ ಬಿ.ಸಂತೋಷ್ ಬಾಬು
sandhya thejappa
| Updated By: ಸಾಧು ಶ್ರೀನಾಥ್​|

Updated on: Jan 12, 2021 | 12:40 PM

Share

ದೆಹಲಿ: ಕಳೆದ ವರ್ಷ ಜೂನ್ 15 ರಂದು ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯ ಭೂಪ್ರದೇಶವನ್ನು ವಶಪಡಿಸಿಕೊಳ್ಳಲು ಜೀವದ ಹಂಗು ತೊರೆದು, ಚೀನಾ ಸೈನ್ಯದ ಆಕ್ರಮಣವನ್ನು ತಡೆದು ಹುತಾತ್ಮರಾದ ಆಂಧ್ರದ ಕರ್ನಲ್ ಬಿ. ಸಂತೋಷ್ ಬಾಬು ಸೇರಿದಂತೆ ಐದು ಭಾರತೀಯ ಸೈನಿಕರನ್ನು ಜನವರಿ 26ರ ಗಣರಾಜ್ಯೋತ್ಸವ ದಿನದಂದು  ಮರಣೋತ್ತರ  ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಉಭಯ ದೇಶಗಳ ನಡುವಿನ ಒಪ್ಪಂದಕ್ಕೆ ಅನುಗುಣವಾಗಿ ಚೀನಾದ ಪಡೆಗಳು ಪೆಟ್ರೋಲಿಂಗ್ ಪಾಯಿಂಟ್ 14 ರ ಸಮೀಪವಿರುವ ಸ್ಥಳದಿಂದ ಹಿಂದೆ ಸರಿಯಲು ನಿರಾಕರಿಸಿದಾಗ ಭಾರತೀಯ ಸೈನಿಕರು ಪೂರ್ಣ ಪ್ರಮಾಣದಲ್ಲಿ ಪ್ರತೀಕಾರ ತೀರಿಸಿಕೊಂಡರು. ಏಳು ಗಂಟೆಗಳ ಘರ್ಷಣೆಯಲ್ಲಿ ಚೀನಾದ ಸೈನಿಕರನ್ನು ಹೊರಹಾಕುವಲ್ಲಿ ಯಶಸ್ವಿಯಾದರು. ಇವರ ದಿಟ್ಟತನಕ್ಕೆ ಗಣರಾಜ್ಯೋತ್ಸವ ದಿನದಂದು ಗೌರವ ಸಮರ್ಪಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ 20 ಭಾರತೀಯ ಸೈನಿಕರಲ್ಲಿ 16 ಬಿಹಾರ ರೆಜಿಮೆಂಟಿನ ಕಮಾಂಡಿಂಗ್ ಆಫೀಸರ್ ಕರ್ನಲ್ ಬಿ ಸಂತೋಷ್ ಬಾಬು ಒಬ್ಬರು. ಸಂಘರ್ಷದಲ್ಲಿ ಚೀನಾ ಸೈನಿಕರ ಸಾವಿನ ಸಂಖ್ಯೆಯ ಬಗ್ಗೆ ಪಿಎಲ್‌ಎ (people liberation army) ಬಹಿರಂಗಪಡಿಸದಿದ್ದರೂ ಗುಪ್ತಚರ ವರದಿಯ ಪ್ರಕಾರ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಸೇರಿದಂತೆ 50 ಕ್ಕೂ ಹೆಚ್ಚು ಚೀನಾದ ಸೈನಿಕರು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಜನವರಿ 26 ರ ಟ್ರಾಕ್ಟರ್ ಮೆರವಣಿಗೆಯನ್ನು ತಡೆಯಲು ಸುಪ್ರೀಂ ಕೋರ್ಟ್​ಗೆ ಕೇಂದ್ರ ಮನವಿ

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!