AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು

ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಬಿಹಾರ ಪೊಲೀಸರು ನಡೆಸಿರುವ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ.

Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು
ಲಾಠಿ ಚಾರ್ಜ್​Image Credit source: News 9
ನಯನಾ ರಾಜೀವ್
|

Updated on:Jul 13, 2023 | 3:25 PM

Share

ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಬಿಹಾರ ಪೊಲೀಸರು ನಡೆಸಿರುವ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ. ಬಿಜೆಪಿಯ ಜೆಹಾನಾಬಾದ್‌ನ ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್‌ ಸಿಂಗ್‌ ಮೇಲೆ ನಡೆದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ರಾಜ್ಯಸಭಾ ಸಂಸದ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದಾರೆ.

ಲಾಠಿ ಏಟು ತಿಂದ ಬಳಿಕ ರಸ್ತೆಯಲ್ಲಿ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದಾರೆ. ರಸ್ತೆಗೆ ಬಿದ್ದ ನಂತರವೂ ಪೊಲೀಸರು ಲಾಠಿ ಚಾರ್ಜ್ ಮುಂದುವರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಾರಾ ನರ್ಸಿಂಗ್ ಹೋಮ್‌ಗೆ ಕಳುಹಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಮತ್ತಷ್ಟು ಓದಿ: Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಲಾಠಿಚಾರ್ಜ್ ಸಂದರ್ಭದಲ್ಲಿ ಸಂಸದರಿಗೂ ಥಳಿಸಲಾಯಿತು , ಬಿಹಾರ ಪೊಲೀಸರು ಬಿಜೆಪಿ ಸಂಸದ ಜನಾರ್ದನ್ ಸಿಂಗ್ ಸಿಗ್ರಿವಾಲ್ ಮತ್ತು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರ ಮೇಲೂ ಲಾಠಿಚಾರ್ಜ್ ಮಾಡಿದರು.

ಜನಾರ್ದನ್ ಸಿಂಗ್ ಸಿಗ್ರಿವಾಲ್ ಗಂಭೀರ ಗಾಯಗೊಂಡಿದ್ದಾರೆ. ಸಿಗ್ರಿವಾಲ್ ತಲೆಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ, ಮಾಜಿ ಉಪ ಮುಖ್ಯಮಂತ್ರಿ ರೇಣುದೇವಿ ಮತ್ತು ಜೀವೇಶ್ ಮಿಶ್ರಾ ಅವರನ್ನು ಮಾರ್ಚ್‌ನಲ್ಲಿ ಪೊಲೀಸರು ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:18 pm, Thu, 13 July 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ