AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್ ಯಾದವ್​ ಮೇಲೆ ಅಪರಿಚಿತರಿಂದ ದಾಳಿ

ಬಿಹಾರದ ಪಾಟಲಿಪುತ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್​ ಯಾದವ್​ ಅವರ ಬೆಂಗಾಲವಲು ವಾಹನದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಹಾರ: ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್ ಯಾದವ್​ ಮೇಲೆ ಅಪರಿಚಿತರಿಂದ ದಾಳಿ
ರಾಮ್​ ಕೃಪಾಲ್​ ಯಾದವ್
ನಯನಾ ರಾಜೀವ್
|

Updated on:Jun 02, 2024 | 9:09 AM

Share

ಲೋಕಸಭೆ ಚುನಾವಣೆ(Lok Sabha Election)ಯ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಶನಿವಾರ ಗುಂಡಿನ ದಾಳಿ ನಡೆದಿದೆ. ಮಾಹಿತಿಯ ಪ್ರಕಾರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಾಟಲಿಪುತ್ರ ಅಭ್ಯರ್ಥಿ ರಾಮ್ ಕೃಪಾಲ್ ಯಾದವ್ ಮೇಲೆ ಹಲ್ಲೆ ನಡೆದಿದೆ. ಗಾಯಗೊಂಡಿರು ಪಕ್ಷದ ಕಾರ್ಯಕರ್ತನನ್ನು ಭೇಟಿ ಮಾಡಲು ಮತ್ತು ಸ್ಥಳೀಯ ಬೂತ್‌ನಲ್ಲಿ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಲು ಅವರು ಪಾಟ್ನಾದ ಮಸೌರ್ಹಿಗೆ ತೆರಳಿದ್ದರು. ಈ ಪ್ರದೇಶದಲ್ಲಿ ಯಾದವ್ ಅವರ ಕಾರಿನ ಮುಂದೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಏಳನೇ ಹಂತದ ಮತದಾನದ ನಂತರ ಸಂಜೆ ತಡವಾಗಿ, ರಾಮಕೃಪಾಲ್ ಯಾದವ್ ಅವರು ಪಾಟ್ನಾದ ತಿನೇರಿ ಬೂತ್‌ನಿಂದ ಹಿಂತಿರುಗುತ್ತಿದ್ದರು. ಇವರೊಂದಿಗೆ ತಿನೇರಿಯ ಕೆಲ ಯುವಕರು ಬಂದಿದ್ದರು. ಮತ್ತಿಯಾ ಗ್ರಾಮದ ಸಮೀಪಕ್ಕೆ ಬರುತ್ತಿದ್ದಂತೆ ಅಪರಿಚಿತ ಯುವಕರು ಗುಂಡು ಹಾರಿಸಿದ್ದಾರೆ. ಈ ವೇಳೆ ತಿನೇರಿಯ ಯುವಕನ ತಲೆಗೆ ಗಾಯವಾಗಿದೆ ಎನ್ನಲಾಗಿದೆ. ಸಂಜೆ 6 ಗಂಟೆ ಸುಮಾರಿಗೆ ನಡೆದ ಈ ಹಿಂಸಾತ್ಮಕ ಘಟನೆಯು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ರಾಮ್ ಕೃಪಾಲ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ತಿಳಿಸಿದ್ದಾರೆ.

ಮತ್ತಷ್ಟು ಓದಿ: LS Exit Poll Results 2024 Highlights: ಲೋಕಸಭೆ ಚುನಾವಣೆ ಎಕ್ಸಿಟ್​ ಪೋಲ್ ಹೈಲೈಟ್ಸ್

ಬಿಹಾರದ ಎಂಟು ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯು ಶನಿವಾರ ನಡೆದ ಏಳನೇ ಮತ್ತು ಅಂತಿಮ ಹಂತದಲ್ಲಿ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಶೇ. 50.56 ರಷ್ಟು ಮತದಾನವಾಗಿದೆ.

ಪಾಟ್ನಾ ಸಾಹಿಬ್, ಪಟ್ಲಿಪುತ್ರ, ಅರ್ರಾ, ಕರಕಟ್, ಜೆಹಾನಾಬಾದ್, ಬಕ್ಸರ್, ನಳಂದಾ ಮತ್ತು ಜೆಹಾನಾಬಾದ್‌ನಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಿತು. ಪಾಟಲಿಪುತ್ರದಲ್ಲಿ ಶೇ.56.91, ಬಕ್ಸರ್ (53.70%), ಕರಕತ್ (53.44%), ಜೆಹಾನಾಬಾದ್ (51.20%), ಸಸಾರಾಮ್ (51%), ಅರ್ರಾ (48.50%), ನಳಂದಾ (46.50%) ಮತ್ತು ಪಾಟ್ನಾ ಸಾಹಿಬ್ (45%) ಮತದಾನವಾಗಿದೆ.

ಯಾದವ್ ಅವರು ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಆರ್‌ಜೆಡಿಯ ಮಿಸಾ ಭಾರತಿ ವಿರುದ್ಧ ಸ್ಪರ್ಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:08 am, Sun, 2 June 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ