AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್ ಯಾದವ್​ ಮೇಲೆ ಅಪರಿಚಿತರಿಂದ ದಾಳಿ

ಬಿಹಾರದ ಪಾಟಲಿಪುತ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್​ ಯಾದವ್​ ಅವರ ಬೆಂಗಾಲವಲು ವಾಹನದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಹಾರ: ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್ ಯಾದವ್​ ಮೇಲೆ ಅಪರಿಚಿತರಿಂದ ದಾಳಿ
ರಾಮ್​ ಕೃಪಾಲ್​ ಯಾದವ್
ನಯನಾ ರಾಜೀವ್
|

Updated on:Jun 02, 2024 | 9:09 AM

Share

ಲೋಕಸಭೆ ಚುನಾವಣೆ(Lok Sabha Election)ಯ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಶನಿವಾರ ಗುಂಡಿನ ದಾಳಿ ನಡೆದಿದೆ. ಮಾಹಿತಿಯ ಪ್ರಕಾರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಾಟಲಿಪುತ್ರ ಅಭ್ಯರ್ಥಿ ರಾಮ್ ಕೃಪಾಲ್ ಯಾದವ್ ಮೇಲೆ ಹಲ್ಲೆ ನಡೆದಿದೆ. ಗಾಯಗೊಂಡಿರು ಪಕ್ಷದ ಕಾರ್ಯಕರ್ತನನ್ನು ಭೇಟಿ ಮಾಡಲು ಮತ್ತು ಸ್ಥಳೀಯ ಬೂತ್‌ನಲ್ಲಿ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಲು ಅವರು ಪಾಟ್ನಾದ ಮಸೌರ್ಹಿಗೆ ತೆರಳಿದ್ದರು. ಈ ಪ್ರದೇಶದಲ್ಲಿ ಯಾದವ್ ಅವರ ಕಾರಿನ ಮುಂದೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಏಳನೇ ಹಂತದ ಮತದಾನದ ನಂತರ ಸಂಜೆ ತಡವಾಗಿ, ರಾಮಕೃಪಾಲ್ ಯಾದವ್ ಅವರು ಪಾಟ್ನಾದ ತಿನೇರಿ ಬೂತ್‌ನಿಂದ ಹಿಂತಿರುಗುತ್ತಿದ್ದರು. ಇವರೊಂದಿಗೆ ತಿನೇರಿಯ ಕೆಲ ಯುವಕರು ಬಂದಿದ್ದರು. ಮತ್ತಿಯಾ ಗ್ರಾಮದ ಸಮೀಪಕ್ಕೆ ಬರುತ್ತಿದ್ದಂತೆ ಅಪರಿಚಿತ ಯುವಕರು ಗುಂಡು ಹಾರಿಸಿದ್ದಾರೆ. ಈ ವೇಳೆ ತಿನೇರಿಯ ಯುವಕನ ತಲೆಗೆ ಗಾಯವಾಗಿದೆ ಎನ್ನಲಾಗಿದೆ. ಸಂಜೆ 6 ಗಂಟೆ ಸುಮಾರಿಗೆ ನಡೆದ ಈ ಹಿಂಸಾತ್ಮಕ ಘಟನೆಯು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ರಾಮ್ ಕೃಪಾಲ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ತಿಳಿಸಿದ್ದಾರೆ.

ಮತ್ತಷ್ಟು ಓದಿ: LS Exit Poll Results 2024 Highlights: ಲೋಕಸಭೆ ಚುನಾವಣೆ ಎಕ್ಸಿಟ್​ ಪೋಲ್ ಹೈಲೈಟ್ಸ್

ಬಿಹಾರದ ಎಂಟು ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯು ಶನಿವಾರ ನಡೆದ ಏಳನೇ ಮತ್ತು ಅಂತಿಮ ಹಂತದಲ್ಲಿ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಶೇ. 50.56 ರಷ್ಟು ಮತದಾನವಾಗಿದೆ.

ಪಾಟ್ನಾ ಸಾಹಿಬ್, ಪಟ್ಲಿಪುತ್ರ, ಅರ್ರಾ, ಕರಕಟ್, ಜೆಹಾನಾಬಾದ್, ಬಕ್ಸರ್, ನಳಂದಾ ಮತ್ತು ಜೆಹಾನಾಬಾದ್‌ನಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಿತು. ಪಾಟಲಿಪುತ್ರದಲ್ಲಿ ಶೇ.56.91, ಬಕ್ಸರ್ (53.70%), ಕರಕತ್ (53.44%), ಜೆಹಾನಾಬಾದ್ (51.20%), ಸಸಾರಾಮ್ (51%), ಅರ್ರಾ (48.50%), ನಳಂದಾ (46.50%) ಮತ್ತು ಪಾಟ್ನಾ ಸಾಹಿಬ್ (45%) ಮತದಾನವಾಗಿದೆ.

ಯಾದವ್ ಅವರು ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಆರ್‌ಜೆಡಿಯ ಮಿಸಾ ಭಾರತಿ ವಿರುದ್ಧ ಸ್ಪರ್ಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:08 am, Sun, 2 June 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!