ಬಿಹಾರ: ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಓಡಿ ಹೋದ ಮಹಿಳೆ

ಮದುವೆ(Marriage)ಯಾಗಿ ಕೇವಲ ತಿಂಗಳಿಗೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ. ಮದುವೆಯಾಗಿ 45ದಿನಕ್ಕೆ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಳು. ಈ ಘಟನೆಯು ಇತ್ತೀಚೆಗೆ ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಹತ್ಯೆಯನ್ನು ನೆನಪಿಸುತ್ತದೆ. ಅಲ್ಲಿ ಕೂಡ ಸೋನಮ್ ತನ್ನ ಪ್ರಿಯಕರ ರಾಜ್ ಕುಶ್ವಾಹನ ಜತೆ ಸೇರಿ ಹನಿಮೂನ್​​ಗೆ ಹೋದಾಗ ಗಂಡನನ್ನು ಹತ್ಯೆ ಮಾಡಿಸಿದ್ದಳು.

ಬಿಹಾರ: ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಓಡಿ ಹೋದ ಮಹಿಳೆ
ಆರೋಪಿ ಗುಂಜಾ
Image Credit source: NDTV

Updated on: Jul 03, 2025 | 12:07 PM

ಔರಂಗಾಬಾದ್, ಜುಲೈ 03: ಮದುವೆ(Marriage)ಯಾಗಿ ಕೇವಲ ತಿಂಗಳಿಗೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ. ಮದುವೆಯಾಗಿ 45ದಿನಕ್ಕೆ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಳು. ಈ ಘಟನೆಯು ಇತ್ತೀಚೆಗೆ ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಹತ್ಯೆಯನ್ನು ನೆನಪಿಸುತ್ತದೆ. ಅಲ್ಲಿ ಕೂಡ ಸೋನಮ್ ತನ್ನ ಪ್ರಿಯಕರ ರಾಜ್ ಕುಶ್ವಾಹನ ಜತೆ ಸೇರಿ ಹನಿಮೂನ್​​ಗೆ ಹೋದಾಗ ಗಂಡನನ್ನು ಹತ್ಯೆ ಮಾಡಿಸಿದ್ದಳು.

ಔರಂಗಾಬಾದ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಮೃತ ಪ್ರಿಯಾಂಶು ಅಲಿಯಾಸ್ ಛೋಟು ಅವರ ಪತ್ನಿ ಗುಂಜಾ ಸಿಂಗ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 24ರ ರಾತ್ರಿ ನಬಿನಗರ ಪೊಲೀಸ್ ಠಾಣೆ ಪ್ರದೇಶದ ಲೆಂಬೋಕಾಪ್ ಬಳಿ ಘಟನೆ ನಡೆದಿತ್ತು. ಪ್ರಿಯಾಂಶುವನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಕುರಿತು ಎಸ್​ಪಿ ಅಂಬರೀಶ್ ರಾಹುಲ್ ಮಾಹಿತಿ ನೀಡಿದ್ದಾರೆ.

ಈ ಕೊಲೆಗೆ ಸೂತ್ರಧಾರಿ ಪ್ರಿಯಾಂಶು ಅವರ ಪತ್ನಿ ಗುಂಜಾ ಸಿಂಗ್. ಆಕೆಗೆ ತನ್ನ ತಂದೆಯ ಅಕ್ಕನ ಗಂಡ ಅಂದರೆ ಮಾವ ಜೀವನ್​ಸಿಂಗ್ ಜತೆ ಅಕ್ರಮ ಸಂಬಂಧವಿತ್ತು. ಮದುವೆಯ ನಂತರ ಪ್ರಿಯಾಂಶು ಅವರ ಸಂಬಂಧಕ್ಕೆ ಅಡ್ಡಿಯಾಗಿದ್ದ, ಹೀಗಾಗಿ ಇಬ್ಬರೂ ಶೂಟರ್​ಗಳನ್ನು ನೇಮಿಸಿಕೊಂಡು ಕೊಲ್ಲಲು ಸಂಚು ರೂಪಿಸಿದ್ದರು.

ಮತ್ತಷ್ಟು ಓದಿ: ಮೇಘಾಲಯದ ಹನಿಮೂನ್​ನಲ್ಲಿ ಕೊಲೆ; ನಾನೇ ಗಂಡ ರಾಜ ರಘುವಂಶಿಯನ್ನು ಕೊಂದಿದ್ದೆಂದು ಒಪ್ಪಿಕೊಂಡ ಸೋನಂ

ಜೂನ್ 24ರಂದು ಪ್ರಿಯಾಂಶು ರಾತ್ರಿ ಗ್ರಾಮವಾದ ಬರ್ವಾನ್​​ಗೆ ಬೈಕ್​ನಲ್ಲಿ ಹಿಂದಿರುಗುತ್ತಿದ್ದಾಗ, ಗುಂಡು ಹಾರಿಸಲಾಗಿದೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದರು.ಎಸ್‌ಐಟಿ ಗುಂಜಾ ಸಿಂಗ್, ಜೈಶಂಕರ್ ಮತ್ತು ಮುಖೇಶ್ ಶರ್ಮಾ ಅವರನ್ನು ಬಂಧಿಸಿದೆ.

ವಿಚಾರಣೆ ಸಮಯದಲ್ಲಿ ತನ್ನ ಗಂಡನ ಕೊಲೆಯಲ್ಲಿ ತನ್ನ ಕೈವಾಡವಿದೆ ಎಂದು ಗುಂಜಾ ಒಪ್ಪಿಕೊಂಡಿದ್ದಾಳೆ.ಪೊಲೀಸರು ಜೀವನ್ ಸಿಂಗ್​​ನನ್ನು ಕೂಡ ಬಂಧಿಸಿದ್ದಾರೆ. ಇತ್ತೀಚೆಗೆ ನಡೆದ ಮತ್ತೊಂದು ಪ್ರಕರಣದಲ್ಲಿ, ಪೂಜಾ ಎಂಬ ಮಹಿಳೆ ತನ್ನ ಪ್ರಿಯಕರ ಕಮಲೇಶ್ ಯಾದವ್ ಜೊತೆ ಸೇರಿ ತನ್ನ ಪತಿ ಬಿಕ್ಕುವನ್ನು ಹತ್ಯೆ ಮಾಡಿದ್ದಳು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:06 pm, Thu, 3 July 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us