AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಸಂಪುಟ ವಿಸ್ತರಣೆ; 7 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

ನವೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ 7 ಹೊಸ ಶಾಸಕರನ್ನು ಸಚಿವರನ್ನಾಗಿ ಸೇರಿಸಿಕೊಳ್ಳುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಂಪುಟವನ್ನು ವಿಸ್ತರಿಸಿದ್ದಾರೆ. 'ಒಬ್ಬ ವ್ಯಕ್ತಿ, ಒಂದು ಹುದ್ದೆ' ನೀತಿಯಿಂದಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಕಂದಾಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಪುಟ ಪುನಾರಚನೆಯು ಸಂಪುಟದಲ್ಲಿ ಹೆಚ್ಚಿನ ಬದಲಾವಣೆಗಳಿಗೆ ಕಾರಣವಾಗಬಹುದು. ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್, ತಮ್ಮ ತಂದೆಯ ನಾಯಕತ್ವವನ್ನು ಬೆಂಬಲಿಸುವಂತೆ ಮತದಾರರ ಬಳಿ ಮನವಿ ಮಾಡಿದ್ದಾರೆ.

ಬಿಹಾರದ ಸಂಪುಟ ವಿಸ್ತರಣೆ; 7 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ
Bihar Ministers
Follow us
ಸುಷ್ಮಾ ಚಕ್ರೆ
|

Updated on: Feb 26, 2025 | 6:11 PM

ನವದೆಹಲಿ: ನವೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರ ಸರ್ಕಾರದ ಸಂಪುಟವನ್ನು ವಿಸ್ತರಿಸಲಾಯಿತು. ಸಂಜಯ್ ಸರೋಗಿ, ಸುನಿಲ್ ಕುಮಾರ್, ಜಿಬೇಶ್ ಮಿಶ್ರಾ, ಮೋತಿಲಾಲ್ ಪ್ರಸಾದ್ ಮತ್ತು ರಾಜು ಕುಮಾರ್ ಸಿಂಗ್ ಸೇರಿದಂತೆ 7 ಹೊಸ ಶಾಸಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಹಾರದ ಕಂದಾಯ ಸಚಿವ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರು ಬಿಜೆಪಿಯ “ಒಬ್ಬ ವ್ಯಕ್ತಿ, ಒಂದು ಹುದ್ದೆ” ನೀತಿಯ ಅನುಸಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಜನವರಿಯಲ್ಲಿ ಬಿಜೆಪಿಯ ಬಿಹಾರ ರಾಜ್ಯ ಅಧ್ಯಕ್ಷರಾಗಿ ನೇಮಕಗೊಂಡ ಜೈಸ್ವಾಲ್, ಹೊಸ ಜವಾಬ್ದಾರಿಗಾಗಿ ಕೇಂದ್ರ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: ನಾಳೆಯಿಂದ ಫೆಬ್ರವರಿ 25ರವರೆಗೆ ಪ್ರಧಾನಿ ಮೋದಿ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ಪ್ರವಾಸ

ಜೈಸ್ವಾಲ್ ರಾಜೀನಾಮೆ ನಿತೀಶ್ ಕುಮಾರ್ ಅವರ ಸಂಪುಟದಲ್ಲಿ ಮತ್ತಷ್ಟು ಪುನರ್ರಚನೆಗೆ ಕಾರಣವಾಗಬಹುದು. ಸಂಪುಟ ವಿಸ್ತರಣೆಗೆ ಪ್ರತಿಕ್ರಿಯೆಯಾಗಿ, ಜೈಸ್ವಾಲ್ ಅಂತಹ ನಿರ್ಧಾರಗಳು ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟದ್ದು ಎಂದು ಹೇಳಿದರು. ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್, ಮುಂಬರುವ ಚುನಾವಣೆಯಲ್ಲಿ ತಮ್ಮ ತಂದೆಯನ್ನು ಬೆಂಬಲಿಸುವಂತೆ ಮತದಾರರನ್ನು ಕೋರಿದರು. ಅವರ ನಾಯಕತ್ವದಲ್ಲಿ ರಾಜ್ಯದ ಅಭಿವೃದ್ಧಿಯನ್ನು ಎತ್ತಿ ತೋರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ