Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಜಾತಿ ಸಮೀಕ್ಷೆ: ಸುಪ್ರೀಂಕೋರ್ಟ್​ನಲ್ಲಿ ಇಂದು ವಿಚಾರಣೆ

ಬಿಹಾರ ಜಾತಿ ಸಮೀಕ್ಷೆ(Caste Survey) ಕುರಿತ ವಿಚಾರಣೆ ಶುಕ್ರವಾರ (ಅಕ್ಟೋಬರ್ 6) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಲು ಯಾವುದೇ ನಿಷೇಧವನ್ನು ವಿಧಿಸಿರಲಿಲ್ಲ. ವಿವರವಾದ ವಿಚಾರಣೆಯ ನಂತರವೇ ತಡೆಯಾಜ್ಞೆ ನೀಡಲಾಗುವುದು ಎಂದು ನ್ಯಾಯಾಲಯ ಹೇಳಿದೆ. ಆದರೆ, ಇದೆಲ್ಲದರ ನಡುವೆ ಬಿಹಾರ ಸರ್ಕಾರ ಸಮೀಕ್ಷೆಯ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಸಮೀಕ್ಷೆಯ ಅಂಕಿಅಂಶಗಳು ಹೊರಬಂದಾಗಿನಿಂದ ಸಾಕಷ್ಟು ಗದ್ದಲಗಳು ನಡೆದಿವೆ.

ಬಿಹಾರ ಜಾತಿ ಸಮೀಕ್ಷೆ: ಸುಪ್ರೀಂಕೋರ್ಟ್​ನಲ್ಲಿ ಇಂದು ವಿಚಾರಣೆ
ಸುಪ್ರೀಂಕೋರ್ಟ್​
Follow us
ನಯನಾ ರಾಜೀವ್
|

Updated on: Oct 06, 2023 | 8:37 AM

ಬಿಹಾರ ಜಾತಿ ಸಮೀಕ್ಷೆ(Caste Survey) ಕುರಿತ ವಿಚಾರಣೆ ಶುಕ್ರವಾರ (ಅಕ್ಟೋಬರ್ 6) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಲು ಯಾವುದೇ ನಿಷೇಧವನ್ನು ವಿಧಿಸಿರಲಿಲ್ಲ. ವಿವರವಾದ ವಿಚಾರಣೆಯ ನಂತರವೇ ತಡೆಯಾಜ್ಞೆ ನೀಡಲಾಗುವುದು ಎಂದು ನ್ಯಾಯಾಲಯ ಹೇಳಿದೆ. ಆದರೆ, ಇದೆಲ್ಲದರ ನಡುವೆ ಬಿಹಾರ ಸರ್ಕಾರ ಸಮೀಕ್ಷೆಯ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಸಮೀಕ್ಷೆಯ ಅಂಕಿಅಂಶಗಳು ಹೊರಬಂದಾಗಿನಿಂದ ಸಾಕಷ್ಟು ಗದ್ದಲಗಳು ನಡೆದಿವೆ.

ಜಾತಿ ಸಮೀಕ್ಷೆಯ ಅಂಕಿಅಂಶಗಳನ್ನು ಬಿಹಾರ ಸರ್ಕಾರ ಸೋಮವಾರ (ಅಕ್ಟೋಬರ್ 2) ಬಿಡುಗಡೆ ಮಾಡಿದೆ. ಬಿಹಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿವೇಕ್ ಕುಮಾರ್ ಸಿಂಗ್ ಮಾತನಾಡಿ, ಬಿಹಾರದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆಯು 27.13 ಪ್ರತಿಶತದಷ್ಟಿದ್ದರೆ, ಅತ್ಯಂತ ಹಿಂದುಳಿದ ವರ್ಗಗಳ ಸಂಖ್ಯೆ 36.01 ಪ್ರತಿಶತದಷ್ಟಿದೆ.

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಒಬಿಸಿ ಪಾಲು ಶೇ.63ರಷ್ಟಿದೆ ಎಂದರು. ಬಿಹಾರದ ಒಟ್ಟು ಜನಸಂಖ್ಯೆಯು 13.07 ಕೋಟಿಗಿಂತ ಸ್ವಲ್ಪ ಹೆಚ್ಚು, ಅದರಲ್ಲಿ ಸಾಮಾನ್ಯ ವರ್ಗದ ಜನಸಂಖ್ಯೆಯು ಶೇಕಡಾ 15.52 ರಷ್ಟಿದೆ ಎಂದು ಹೇಳಿದ್ದಾರೆ.

ಜಾತಿ ಸಮೀಕ್ಷೆಯ ಮೂಲಕ, ರಾಜ್ಯದ ಜನಸಂಖ್ಯೆಯಲ್ಲಿ ಹಿಂದೂ ಧರ್ಮದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಬಿಹಾರದಲ್ಲಿ ಹಿಂದೂಗಳ ಜನಸಂಖ್ಯೆಯು ಶೇಕಡಾ 81.99 ರಷ್ಟಿದ್ದರೆ, ಮುಸ್ಲಿಮರು ಎರಡನೇ ಸ್ಥಾನದಲ್ಲಿದ್ದಾರೆ, ಅವರ ಸಂಖ್ಯೆ ಶೇಕಡಾ 17.70 ರಷ್ಟಿದೆ.

ಮತ್ತಷ್ಟು ಓದಿ:ಬಿಹಾರ್ ಬೆನ್ನಲ್ಲೇ ಕರ್ನಾಟಕದಲ್ಲೂ ಗರಿಗೆದರಿದ ಜಾತಿ ಗಣತಿ ವರದಿ ಸಲ್ಲಿಕೆ ಕಾರ್ಯ ಚಟುವಟಿಕೆಗಳು

ಪರಿಶಿಷ್ಟ ಜಾತಿಗಳು ಅಂದರೆ ದಲಿತರ ಸಂಖ್ಯೆ ರಾಜ್ಯದ ಒಟ್ಟು ಜನಸಂಖ್ಯೆಯ 19.65 ಪ್ರತಿಶತ ಮತ್ತು ಸುಮಾರು 22 ಲಕ್ಷ (1.68 ಪ್ರತಿಶತ) ಜನರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆ. ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದ ಬಳಿಕ ಈಗ ಬೇರೆ ರಾಜ್ಯಗಳಲ್ಲೂ ಜಾತಿ ಸಮೀಕ್ಷೆ ನಡೆಸಬೇಕು ಎಂಬ ಬೇಡಿಕೆ ವ್ಯಕ್ತವಾಗುತ್ತಿದೆ.

ಈ ಹಿಂದೆ ಬಿಹಾರ ಸರ್ಕಾರ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿತ್ತು. ನಂತರ ಅದನ್ನು ಬಿಡುಗಡೆ ಮಾಡುವಂತೆ ಕೇಳಿದಾಗ ‘ಯೂತ್ ಫಾರ್ ಈಕ್ವಾಲಿಟಿ’ ಮತ್ತು ‘ಏಕ್ ಸೋಚ್ ಏಕ್ ಪ್ರಯಾಸ್’ ಎಂಬ ಎನ್‌ಜಿಒಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದವು. ಜಾತಿ ಸಮೀಕ್ಷೆ ಬಿಡುಗಡೆ ಮಾಡಬಾರದು ಎಂದು ಹೇಳಲಾಗಿತ್ತು. ಈ ಹಿಂದೆಯೂ ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು, ಆದರೆ ಆಗ ನ್ಯಾಯಾಲಯ ಯಾವುದೇ ಆದೇಶ ನೀಡಿರಲಿಲ್ಲ.

ಜಾತಿ ಸಮೀಕ್ಷೆಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ವಿರೋಧಿಸಿದೆ. ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಈ ಸಮೀಕ್ಷಾ ವರದಿ ಬಿಡುಗಡೆಯಾಗಿದೆ . ಬಿಹಾರದಲ್ಲಿ OBC ಜನಸಂಖ್ಯೆಯು 60 ಪ್ರತಿಶತಕ್ಕಿಂತ ಹೆಚ್ಚು. ಇಂತಹ ಪರಿಸ್ಥಿತಿಯಲ್ಲಿ ದೇಶದಲ್ಲಿ ಒಬಿಸಿ ರಾಜಕಾರಣವೂ ಶುರುವಾಗಿದೆ. ಜಾತಿ ಸಮೀಕ್ಷೆ ನಡೆಸಬೇಕು ಎಂಬ ಆಗ್ರಹ ಪ್ರತಿಪಕ್ಷಗಳಿಂದಲೂ ನಿರಂತರವಾಗಿ ಕೇಳಿ ಬರುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ