AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ: ಪ್ರಧಾನಿ ಮೋದಿ

ಪ್ರತಿಪಕ್ಷಗಳು ಜಾತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಬಿಹಾರ ಸರ್ಕಾರವು ಬಿಡುಗಡೆ ಮಾಡಿರುವ ಜಾತಿ ಗಣತಿಯ ವರದಿ ರಾಜಕೀಯ ವಿವಾದವನ್ನು ಸೃಷ್ಟಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಯಾವುದೇ ಪಕ್ಷ ಅಥವಾ ಹೆಸರನ್ನು ಉಲ್ಲೇಖಿಸದೆ ವಾಗ್ದಾಳಿ ನಡೆಸಿದ್ದಾರೆ. ಆಗಲೂ ಅವರು ಬಡವರ ಭಾವನೆಗಳೊಂದಿಗೆ ಆಟವಾಡುತ್ತಿದ್ದರು, ಇಂದಿಗೂ ಅದೇ ಆಟವನ್ನು ಮುಂದುವರೆಸಿದ್ದಾರೆ. ಜಾತಿಯ ಹೆಸರಿನಲ್ಲಿ ದೇಶ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಜಾತಿ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: Mint
ನಯನಾ ರಾಜೀವ್
|

Updated on: Oct 03, 2023 | 10:14 AM

Share

ಪ್ರತಿಪಕ್ಷಗಳು ಜಾತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಆರೋಪಿಸಿದ್ದಾರೆ. ಬಿಹಾರ ಸರ್ಕಾರವು ಬಿಡುಗಡೆ ಮಾಡಿರುವ ಜಾತಿ ಗಣತಿಯ ವರದಿ ರಾಜಕೀಯ ವಿವಾದವನ್ನು ಸೃಷ್ಟಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಯಾವುದೇ ಪಕ್ಷ ಅಥವಾ ಹೆಸರನ್ನು ಉಲ್ಲೇಖಿಸದೆ ವಾಗ್ದಾಳಿ ನಡೆಸಿದ್ದಾರೆ. ಆಗಲೂ ಅವರು ಬಡವರ ಭಾವನೆಗಳೊಂದಿಗೆ ಆಟವಾಡುತ್ತಿದ್ದರು, ಇಂದಿಗೂ ಅದೇ ಆಟವನ್ನು ಮುಂದುವರೆಸಿದ್ದಾರೆ. ಜಾತಿಯ ಹೆಸರಿನಲ್ಲಿ ದೇಶ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಸಮಾಜವನ್ನು ಜಾತಿಯ ಆಧಾರದ ಮೇಲೆ ವಿಭಜಿಸುವ ಪ್ರಯತ್ನವನ್ನು ಪಾಪ ಎಂದು ಮೋದಿಯವರು ಬಣ್ಣಿಸಿದ್ದಾರೆ. ಕೆಲವರು ದೇಶದ ಪ್ರಗತಿ ಹಾಗೂ ಅಭಿವೃದ್ಧಿಯನ್ನು ದ್ವೇಷಿಸುತ್ತಾರೆ, ಅವರು ಕೇವಲ ತಮ್ಮ ಭವಿಷ್ಯವನ್ನು ಮಾತ್ರ ನೋಡುತ್ತಿದ್ದಾರೆ. ಚಿಂತನೆ ಇಲ್ಲದವರು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ.

ಪ್ರತಿಪಕ್ಷಗಳಿಗೆ ಯಾವುದೇ ಮುಂದಾಲೋಚನೆ, ದೇಶದ ಬಗ್ಗೆ ಚಿಂತನೆಯಾಗಲೀ, ಮಾರ್ಗಸೂಚಿಯಾಗಲೀ ಇಲ್ಲ. ಬಿಜೆಪಿ ನೇತೃತ್ವದಡಿಯಲ್ಲಿ ದೇಶದ ಪ್ರಗತಿಯನ್ನು ಅವರು ಇಷ್ಟಪಡುವುದಿಲ್ಲ, ಜಾಗತಿಕ ವೇದಿಕೆಯಲ್ಲಿ ದೇಶವನ್ನು ಹೊಗಳುವುದು ಅವರಿಗೆ ಇಷ್ಟವಿಲ್ಲ, ಇಡೀ ವಿಶ್ವವೇ ಭಾರತದ ಕೀರ್ತಿಯನ್ನು ಹಾಡಿ ಹೊಗಳುತ್ತಿದೆ ಎಂದು ಹೇಳಿದರು. ಇನ್ನೊಂದೆಡೆ, ದೇಶದಲ್ಲಿ ಕಾಂಗ್ರೆಸ್​ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿವಾರು ಜನಗಣತಿ ನಡೆಸುವುದಾಗಿ ಕಾಂಗ್ರೆಸ್​ ಭರವಸೆ ನೀಡಿದೆ.

ಮತ್ತಷ್ಟು ಓದಿ: ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ: OBC ಶೇ.63, ಸಾಮಾನ್ಯ ವರ್ಗ ಶೇ.15.52

ಬಿಹಾರ ಜಾತಿ ಜನಗಣತಿ:ಜಾತಿ ಆಧಾರಿತ ಸಮೀಕ್ಷೆ ನಡೆಸುತ್ತಿದ್ದ ಬಿಹಾರ ಸರ್ಕಾರ ಅಂತಿಮ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಸಮೀಕ್ಷೆಯ ಪ್ರಕಾರ, ಒಟ್ಟು 13,07,25,310 ಜನಸಂಖ್ಯೆ ಇದ್ದು, ಇತರ ಹಿಂದುಳಿದ ವರ್ಗ (OBC) ಮತ್ತು ಅತ್ಯಂತ ಹಿಂದುಳಿದ ವರ್ಗಗಳ (EBC) ವರ್ಗದಲ್ಲಿ 63 ಪ್ರತಿಶತದಷ್ಟು ಜನರನ್ನು ಹೊಂದಿದೆ.

ಒಟ್ಟು ಜನಸಂಖ್ಯೆಯಲ್ಲಿ 6,41,31,992 ಪುರುಷರು, 6,11,38,460 ಮಹಿಳೆಯರು, 2,836 ತೃತೀಯ ಲಿಂಗಿಗಳಿದ್ದಾರೆ. ಇದರಲ್ಲಿ 19ರಷ್ಟು ಜನರನ್ನು ಪರಿಶಿಷ್ಟ ಜಾತಿ, 1.68% ಪರಿಶಿಷ್ಟ ಪಂಗಡ, 27.12% ಒಬಿಸಿ, 15.52% ಮೀಸಲಾತಿ ವ್ಯಾಪ್ತಿಗೆ ಸೇರದ ಜನರು ಇದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ