AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಜಾತಿ ಸಮೀಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ: ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ

ಬಿಹಾರದಲ್ಲಿ ನಿತೀಶ್​​ ಕುಮಾರ್ ಅವರ ನೇತೃತ್ವದ ಸರ್ಕಾರ ಮಾಡಿದ ಜಾತಿ ಸಮೀಕ್ಷೆ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ. ಇದನ್ನು ತಡೆಯಲು ಸಾಧ್ಯವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ವಿಚಾರಣೆಯನ್ನು ಮುಂದೂಡಿದೆ.

ಬಿಹಾರದ ಜಾತಿ ಸಮೀಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ: ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 06, 2023 | 4:23 PM

Share

ದೆಹಲಿ, ಅ.6: ಬಿಹಾರದಲ್ಲಿ (Bihar) ನಿತೀಶ್​​ ಕುಮಾರ್ ಅವರ ನೇತೃತ್ವದ ಸರ್ಕಾರ ಈಗಾಗಲೇ ಜಾತಿ ಗಣತಿಯನ್ನು (Caste Survey ) ಮಾಡಿದೆ. ಇನ್ನು ಈ ಸಮೀಕ್ಷೆಗೆ ಅವಕಾಶ ನೀಡಬಾರದು ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್​ ಇದಕ್ಕೆ ವಿಸ್ತೃತ ವಿಚಾರಣೆ ಅಗತ್ಯ ಇದೆ ಎಂದು ಹೇಳಿತ್ತು. ನಂತರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಹಾಕಿದ್ದು, ಇದೀಗ ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ವಿಚಾರಣೆಯನ್ನು ಜನವರಿಗೆ ಮುಂದೂಡಿದೆ. ಜಾತಿ ಸಮೀಕ್ಷೆಯ ಬಗ್ಗೆ ತಡೆ ನೀಡುವ ಆದೇಶವನ್ನು ನ್ಯಾಯಾಲಯವು ನಿರಾಕರಿಸಿದೆ.

ಸರ್ಕಾರದ ಈ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಪೀಠವು, ಯಾವುದೇ ರಾಜ್ಯ ಸರ್ಕಾರವು ನೀತಿ ಅಥವಾ ಕೆಲಸ ಮಾಡುವುದನ್ನು ನಾವು ತಡೆಯಲು  ಸಾಧ್ಯವಿಲ್ಲ. ವಿಚಾರಣೆಯಲ್ಲಿ ಅದನ್ನು ಪರಿಶೀಲಿಸಬಹುದೇ ಹೊರತು, ಅದನ್ನು ತಡೆಯುವ ಹಕ್ಕು ನಮಗಿಲ್ಲ ಎಂದು ಹೇಳಿದೆ. ಇನ್ನು ಹೈಕೋರ್ಟ್ ವಿಸ್ತೃತ ಆದೇಶ ನೀಡಿದ್ದು, ನಾವು ಕೂಡ ವಿಸ್ತೃತ ವಿಚಾರಣೆ ನಡೆಸಬೇಕಿದೆ ಎಂದು ಹೇಳಿದೆ.

ಅರ್ಜಿ ವಿಚಾರಣೆಯ ವೇಳೆ ವಕೀಲರು, ಬಿಹಾರ ಸರ್ಕಾರ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ನ್ಯಾಯಾಧೀಶರು ನಾವು ಅದನ್ನು ತಡೆಹಿಡಿದಿಲ್ಲ, ಎಂದರು. ವಾದ ಮುಂದುವರಿಸಿದ ವಕೀಲರು ಸಮೀಕ್ಷೆಯ ಪ್ರಕ್ರಿಯೆಯೇ ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಮೊದಲನೆಯದಾಗಿ, ಈ ವಿಷಯದ ಬಗ್ಗೆ ನೋಟಿಸ್ ನೀಡಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಬೇಕು ಎಂದು ಕೋರ್ಟ್​ ಹೇಳಿದೆ.

ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ: OBC ಶೇ.63, ಸಾಮಾನ್ಯ ವರ್ಗ ಶೇ.15.52

ಈ ವಿಚಾರಣೆಗೆ ಸಂಬಂಧಿಸಿದಂತೆ ನೋಟಿಸ್​​ ನೀಡಿದ ಸುಪ್ರೀಂ 2024 ಜನವರಿಯಲ್ಲಿ ಇದರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಈ ಸಮೀಕ್ಷೆಗೆ ತಡೆ ನೀಡಬೇಕು ಎಂದು ವಕೀಲರು ಹೇಳಿದರು. ಇದಕ್ಕೆ ಉತ್ತರಿಸಿದ ಸುಪ್ರೀಂ ಖಂಡಿತ ಸಾಧ್ಯವಿಲ್ಲ, ಸರ್ಕಾರದ ಯೋಜನೆಗಳಲ್ಲಿ ನ್ಯಾಯಲಯ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:21 pm, Fri, 6 October 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ