AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಜಾತಿ ಸಮೀಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ: ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ

ಬಿಹಾರದಲ್ಲಿ ನಿತೀಶ್​​ ಕುಮಾರ್ ಅವರ ನೇತೃತ್ವದ ಸರ್ಕಾರ ಮಾಡಿದ ಜಾತಿ ಸಮೀಕ್ಷೆ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ. ಇದನ್ನು ತಡೆಯಲು ಸಾಧ್ಯವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ವಿಚಾರಣೆಯನ್ನು ಮುಂದೂಡಿದೆ.

ಬಿಹಾರದ ಜಾತಿ ಸಮೀಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ: ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 06, 2023 | 4:23 PM

Share

ದೆಹಲಿ, ಅ.6: ಬಿಹಾರದಲ್ಲಿ (Bihar) ನಿತೀಶ್​​ ಕುಮಾರ್ ಅವರ ನೇತೃತ್ವದ ಸರ್ಕಾರ ಈಗಾಗಲೇ ಜಾತಿ ಗಣತಿಯನ್ನು (Caste Survey ) ಮಾಡಿದೆ. ಇನ್ನು ಈ ಸಮೀಕ್ಷೆಗೆ ಅವಕಾಶ ನೀಡಬಾರದು ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್​ ಇದಕ್ಕೆ ವಿಸ್ತೃತ ವಿಚಾರಣೆ ಅಗತ್ಯ ಇದೆ ಎಂದು ಹೇಳಿತ್ತು. ನಂತರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಹಾಕಿದ್ದು, ಇದೀಗ ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ವಿಚಾರಣೆಯನ್ನು ಜನವರಿಗೆ ಮುಂದೂಡಿದೆ. ಜಾತಿ ಸಮೀಕ್ಷೆಯ ಬಗ್ಗೆ ತಡೆ ನೀಡುವ ಆದೇಶವನ್ನು ನ್ಯಾಯಾಲಯವು ನಿರಾಕರಿಸಿದೆ.

ಸರ್ಕಾರದ ಈ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಪೀಠವು, ಯಾವುದೇ ರಾಜ್ಯ ಸರ್ಕಾರವು ನೀತಿ ಅಥವಾ ಕೆಲಸ ಮಾಡುವುದನ್ನು ನಾವು ತಡೆಯಲು  ಸಾಧ್ಯವಿಲ್ಲ. ವಿಚಾರಣೆಯಲ್ಲಿ ಅದನ್ನು ಪರಿಶೀಲಿಸಬಹುದೇ ಹೊರತು, ಅದನ್ನು ತಡೆಯುವ ಹಕ್ಕು ನಮಗಿಲ್ಲ ಎಂದು ಹೇಳಿದೆ. ಇನ್ನು ಹೈಕೋರ್ಟ್ ವಿಸ್ತೃತ ಆದೇಶ ನೀಡಿದ್ದು, ನಾವು ಕೂಡ ವಿಸ್ತೃತ ವಿಚಾರಣೆ ನಡೆಸಬೇಕಿದೆ ಎಂದು ಹೇಳಿದೆ.

ಅರ್ಜಿ ವಿಚಾರಣೆಯ ವೇಳೆ ವಕೀಲರು, ಬಿಹಾರ ಸರ್ಕಾರ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ನ್ಯಾಯಾಧೀಶರು ನಾವು ಅದನ್ನು ತಡೆಹಿಡಿದಿಲ್ಲ, ಎಂದರು. ವಾದ ಮುಂದುವರಿಸಿದ ವಕೀಲರು ಸಮೀಕ್ಷೆಯ ಪ್ರಕ್ರಿಯೆಯೇ ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಮೊದಲನೆಯದಾಗಿ, ಈ ವಿಷಯದ ಬಗ್ಗೆ ನೋಟಿಸ್ ನೀಡಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಬೇಕು ಎಂದು ಕೋರ್ಟ್​ ಹೇಳಿದೆ.

ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ: OBC ಶೇ.63, ಸಾಮಾನ್ಯ ವರ್ಗ ಶೇ.15.52

ಈ ವಿಚಾರಣೆಗೆ ಸಂಬಂಧಿಸಿದಂತೆ ನೋಟಿಸ್​​ ನೀಡಿದ ಸುಪ್ರೀಂ 2024 ಜನವರಿಯಲ್ಲಿ ಇದರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಈ ಸಮೀಕ್ಷೆಗೆ ತಡೆ ನೀಡಬೇಕು ಎಂದು ವಕೀಲರು ಹೇಳಿದರು. ಇದಕ್ಕೆ ಉತ್ತರಿಸಿದ ಸುಪ್ರೀಂ ಖಂಡಿತ ಸಾಧ್ಯವಿಲ್ಲ, ಸರ್ಕಾರದ ಯೋಜನೆಗಳಲ್ಲಿ ನ್ಯಾಯಲಯ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:21 pm, Fri, 6 October 23

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ