ಬಿಹಾರದ ಜಾತಿ ಸಮೀಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ: ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ

ಬಿಹಾರದಲ್ಲಿ ನಿತೀಶ್​​ ಕುಮಾರ್ ಅವರ ನೇತೃತ್ವದ ಸರ್ಕಾರ ಮಾಡಿದ ಜಾತಿ ಸಮೀಕ್ಷೆ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ. ಇದನ್ನು ತಡೆಯಲು ಸಾಧ್ಯವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ವಿಚಾರಣೆಯನ್ನು ಮುಂದೂಡಿದೆ.

ಬಿಹಾರದ ಜಾತಿ ಸಮೀಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ: ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 06, 2023 | 4:23 PM

ದೆಹಲಿ, ಅ.6: ಬಿಹಾರದಲ್ಲಿ (Bihar) ನಿತೀಶ್​​ ಕುಮಾರ್ ಅವರ ನೇತೃತ್ವದ ಸರ್ಕಾರ ಈಗಾಗಲೇ ಜಾತಿ ಗಣತಿಯನ್ನು (Caste Survey ) ಮಾಡಿದೆ. ಇನ್ನು ಈ ಸಮೀಕ್ಷೆಗೆ ಅವಕಾಶ ನೀಡಬಾರದು ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್​ ಇದಕ್ಕೆ ವಿಸ್ತೃತ ವಿಚಾರಣೆ ಅಗತ್ಯ ಇದೆ ಎಂದು ಹೇಳಿತ್ತು. ನಂತರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಹಾಕಿದ್ದು, ಇದೀಗ ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ವಿಚಾರಣೆಯನ್ನು ಜನವರಿಗೆ ಮುಂದೂಡಿದೆ. ಜಾತಿ ಸಮೀಕ್ಷೆಯ ಬಗ್ಗೆ ತಡೆ ನೀಡುವ ಆದೇಶವನ್ನು ನ್ಯಾಯಾಲಯವು ನಿರಾಕರಿಸಿದೆ.

ಸರ್ಕಾರದ ಈ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಪೀಠವು, ಯಾವುದೇ ರಾಜ್ಯ ಸರ್ಕಾರವು ನೀತಿ ಅಥವಾ ಕೆಲಸ ಮಾಡುವುದನ್ನು ನಾವು ತಡೆಯಲು  ಸಾಧ್ಯವಿಲ್ಲ. ವಿಚಾರಣೆಯಲ್ಲಿ ಅದನ್ನು ಪರಿಶೀಲಿಸಬಹುದೇ ಹೊರತು, ಅದನ್ನು ತಡೆಯುವ ಹಕ್ಕು ನಮಗಿಲ್ಲ ಎಂದು ಹೇಳಿದೆ. ಇನ್ನು ಹೈಕೋರ್ಟ್ ವಿಸ್ತೃತ ಆದೇಶ ನೀಡಿದ್ದು, ನಾವು ಕೂಡ ವಿಸ್ತೃತ ವಿಚಾರಣೆ ನಡೆಸಬೇಕಿದೆ ಎಂದು ಹೇಳಿದೆ.

ಅರ್ಜಿ ವಿಚಾರಣೆಯ ವೇಳೆ ವಕೀಲರು, ಬಿಹಾರ ಸರ್ಕಾರ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ನ್ಯಾಯಾಧೀಶರು ನಾವು ಅದನ್ನು ತಡೆಹಿಡಿದಿಲ್ಲ, ಎಂದರು. ವಾದ ಮುಂದುವರಿಸಿದ ವಕೀಲರು ಸಮೀಕ್ಷೆಯ ಪ್ರಕ್ರಿಯೆಯೇ ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಮೊದಲನೆಯದಾಗಿ, ಈ ವಿಷಯದ ಬಗ್ಗೆ ನೋಟಿಸ್ ನೀಡಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಬೇಕು ಎಂದು ಕೋರ್ಟ್​ ಹೇಳಿದೆ.

ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ: OBC ಶೇ.63, ಸಾಮಾನ್ಯ ವರ್ಗ ಶೇ.15.52

ಈ ವಿಚಾರಣೆಗೆ ಸಂಬಂಧಿಸಿದಂತೆ ನೋಟಿಸ್​​ ನೀಡಿದ ಸುಪ್ರೀಂ 2024 ಜನವರಿಯಲ್ಲಿ ಇದರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಈ ಸಮೀಕ್ಷೆಗೆ ತಡೆ ನೀಡಬೇಕು ಎಂದು ವಕೀಲರು ಹೇಳಿದರು. ಇದಕ್ಕೆ ಉತ್ತರಿಸಿದ ಸುಪ್ರೀಂ ಖಂಡಿತ ಸಾಧ್ಯವಿಲ್ಲ, ಸರ್ಕಾರದ ಯೋಜನೆಗಳಲ್ಲಿ ನ್ಯಾಯಲಯ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:21 pm, Fri, 6 October 23

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ