ಪೆಗಾಸಸ್ ವಿವಾದ ಬಗ್ಗೆ ತನಿಖೆಗೆ ಒತ್ತಾಯಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

Nitish Kumar: ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿ ಮೈತ್ರಿಕೂಟದಲ್ಲಿದ್ದು, ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಆಗ್ರಹಿಸಿದ ಬಿಜೆಪಿಯ ಮೊದಲ ಮಿತ್ರಪಕ್ಷವಾಗಿದೆ.

ಪೆಗಾಸಸ್ ವಿವಾದ ಬಗ್ಗೆ ತನಿಖೆಗೆ ಒತ್ತಾಯಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​
Follow us
| Updated By: ರಶ್ಮಿ ಕಲ್ಲಕಟ್ಟ

Updated on: Aug 02, 2021 | 6:01 PM

ಪಟನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಪೆಗಾಸಸ್ ಸ್ಪೈವೇರ್ ವಿವಾದದ ತನಿಖೆಗೆ ಸೋಮವಾರ ಕರೆ ನೀಡಿದ್ದಾರೆ. ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿ ಮೈತ್ರಿಕೂಟದಲ್ಲಿದ್ದು, ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಆಗ್ರಹಿಸಿದ ಬಿಜೆಪಿಯ ಮೊದಲ ಮಿತ್ರಪಕ್ಷವಾಗಿದೆ. “ತನಿಖೆ ನಡೆಸಬೇಕು, ನಿಜ. ನಾವು ಹಲವು ದಿನಗಳಿಂದ ಟೆಲಿಫೋನ್ ಟ್ಯಾಪಿಂಗ್ ಬಗ್ಗೆ ಕೇಳುತ್ತಿದ್ದೆವು, ”ಎಂದು ಕುಮಾರ್ ಹೇಳಿರುವುದಾಗಿ ಎಎನ್ ಐ ಎಂದು ಸುದ್ದಿ ಸಂಸ್ಥೆ ಹೇಳಿದೆ.

ಬಿಜೆಪಿ ಸಹಕಾರದಿಂದ ಬಿಹಾರದಲ್ಲಿ ಸರ್ಕಾರದ ನೇತೃತ್ವ ವಹಿಸಿರುವ ಜೆಡಿಯು ಮುಖ್ಯಸ್ಥರು, ವಿಪಕ್ಷ ನಾಯಕರು “ಹಲವು ದಿನಗಳಿಂದ (ಮಾತುಕತೆಗೆ) ಒತ್ತಾಯಿಸುತ್ತಿರುವುದರಿಂದ ಆ ವಿಷಯವನ್ನು ಸಂಸತ್ತಿನಲ್ಲಿಯೂ ಚರ್ಚಿಸಬೇಕು” ಎಂದು ಹೇಳಿದರು.

ಸಂಸತ್ತಿನಲ್ಲಿ, ಪ್ರತಿಪಕ್ಷಗಳು ಒಗ್ಗಟ್ಟಾಗಿ ಆರೋಪದ ವಿರುದ್ಧ ಪ್ರತಿಭಟನೆ ನಡೆಸಲು ಮತ್ತು ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ನಿರಂತರವಾಗಿ ಒತ್ತಾಯಿಸುತ್ತಿವೆ. ಆದಾಗ್ಯೂ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೆಗಾಸಸ್ ಸ್ಪೈವೇರ್ ಅನ್ನು ಸಾರ್ವಜನಿಕ ವ್ಯಕ್ತಿಗಳ ಮೇಲೆ ಕಣ್ಣಿಡಲು ಬಳಸಲಾಗುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದೆ. ಇದು ವರದಿಯನ್ನು “ಸಂವೇದನಾಶೀಲ” ಮತ್ತು “ಭಾರತೀಯ ಪ್ರಜಾಪ್ರಭುತ್ವ ಮತ್ತು ಅದರ ಸುಸ್ಥಾಪಿತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಯತ್ನ” ಎಂದೂ ಕರೆದಿದೆ.

ಕಳೆದ ವಾರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈ ವಿವಾದವು “ಸಮಸ್ಯೆಯಲ್ಲ” ಎಂದು ಹೇಳಿದ್ದು ಸರ್ಕಾರವು ಜನ-ಸಂಬಂಧಿತ ವಿಷಯಗಳ ಕುರಿತು ಚರ್ಚೆಗೆ ಸಿದ್ಧವಾಗಿದೆ ಎಂದಿದ್ದಾರೆ

ಏತನ್ಮಧ್ಯೆ, ಈ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಆದೇಶಿಸಬೇಕು ಅಥವಾ ಈ ಬಗ್ಗೆ ತನಿಖೆ ನಡೆಸಲು ಹಾಲಿ ನ್ಯಾಯಾಧೀಶರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್‌ಗೆ ವಿನಂತಿಸಬೇಕು ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಮಸೂದೆಗೆ ಅಂಗೀಕಾರ ನೀಡುತ್ತಿರುವುದೋ ಅಥವಾ ಪಾಪ್ಡಿ ಚಾಟ್ ಮಾಡುತ್ತಿರುವುದೋ?: ಕೇಂದ್ರ ಸರ್ಕಾರ ವಿರುದ್ಧ ಡೆರಿಕ್ ಒಬ್ರೇನ್ ತರಾಟೆ

ಇದನ್ನೂ ಓದಿ: ಪೆಗಾಸಸ್‌ ಬಳಸಿ ಇಬ್ಬರು ಪತ್ರಕರ್ತರ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ: ಫ್ರಾನ್ಸ್‌ನ ಸೈಬರ್‌ ಸೆಕ್ಯುರಿಟಿ ಏಜೆನ್ಸಿ

(Bihar Chief Minister Nitish Kumar called for a probe in the Pegasus spyware controversy )

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು