AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಗಾಸಸ್ ವಿವಾದ ಬಗ್ಗೆ ತನಿಖೆಗೆ ಒತ್ತಾಯಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

Nitish Kumar: ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿ ಮೈತ್ರಿಕೂಟದಲ್ಲಿದ್ದು, ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಆಗ್ರಹಿಸಿದ ಬಿಜೆಪಿಯ ಮೊದಲ ಮಿತ್ರಪಕ್ಷವಾಗಿದೆ.

ಪೆಗಾಸಸ್ ವಿವಾದ ಬಗ್ಗೆ ತನಿಖೆಗೆ ಒತ್ತಾಯಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​
TV9 Web
| Edited By: |

Updated on: Aug 02, 2021 | 6:01 PM

Share

ಪಟನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಪೆಗಾಸಸ್ ಸ್ಪೈವೇರ್ ವಿವಾದದ ತನಿಖೆಗೆ ಸೋಮವಾರ ಕರೆ ನೀಡಿದ್ದಾರೆ. ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿ ಮೈತ್ರಿಕೂಟದಲ್ಲಿದ್ದು, ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಆಗ್ರಹಿಸಿದ ಬಿಜೆಪಿಯ ಮೊದಲ ಮಿತ್ರಪಕ್ಷವಾಗಿದೆ. “ತನಿಖೆ ನಡೆಸಬೇಕು, ನಿಜ. ನಾವು ಹಲವು ದಿನಗಳಿಂದ ಟೆಲಿಫೋನ್ ಟ್ಯಾಪಿಂಗ್ ಬಗ್ಗೆ ಕೇಳುತ್ತಿದ್ದೆವು, ”ಎಂದು ಕುಮಾರ್ ಹೇಳಿರುವುದಾಗಿ ಎಎನ್ ಐ ಎಂದು ಸುದ್ದಿ ಸಂಸ್ಥೆ ಹೇಳಿದೆ.

ಬಿಜೆಪಿ ಸಹಕಾರದಿಂದ ಬಿಹಾರದಲ್ಲಿ ಸರ್ಕಾರದ ನೇತೃತ್ವ ವಹಿಸಿರುವ ಜೆಡಿಯು ಮುಖ್ಯಸ್ಥರು, ವಿಪಕ್ಷ ನಾಯಕರು “ಹಲವು ದಿನಗಳಿಂದ (ಮಾತುಕತೆಗೆ) ಒತ್ತಾಯಿಸುತ್ತಿರುವುದರಿಂದ ಆ ವಿಷಯವನ್ನು ಸಂಸತ್ತಿನಲ್ಲಿಯೂ ಚರ್ಚಿಸಬೇಕು” ಎಂದು ಹೇಳಿದರು.

ಸಂಸತ್ತಿನಲ್ಲಿ, ಪ್ರತಿಪಕ್ಷಗಳು ಒಗ್ಗಟ್ಟಾಗಿ ಆರೋಪದ ವಿರುದ್ಧ ಪ್ರತಿಭಟನೆ ನಡೆಸಲು ಮತ್ತು ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ನಿರಂತರವಾಗಿ ಒತ್ತಾಯಿಸುತ್ತಿವೆ. ಆದಾಗ್ಯೂ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೆಗಾಸಸ್ ಸ್ಪೈವೇರ್ ಅನ್ನು ಸಾರ್ವಜನಿಕ ವ್ಯಕ್ತಿಗಳ ಮೇಲೆ ಕಣ್ಣಿಡಲು ಬಳಸಲಾಗುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದೆ. ಇದು ವರದಿಯನ್ನು “ಸಂವೇದನಾಶೀಲ” ಮತ್ತು “ಭಾರತೀಯ ಪ್ರಜಾಪ್ರಭುತ್ವ ಮತ್ತು ಅದರ ಸುಸ್ಥಾಪಿತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಯತ್ನ” ಎಂದೂ ಕರೆದಿದೆ.

ಕಳೆದ ವಾರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈ ವಿವಾದವು “ಸಮಸ್ಯೆಯಲ್ಲ” ಎಂದು ಹೇಳಿದ್ದು ಸರ್ಕಾರವು ಜನ-ಸಂಬಂಧಿತ ವಿಷಯಗಳ ಕುರಿತು ಚರ್ಚೆಗೆ ಸಿದ್ಧವಾಗಿದೆ ಎಂದಿದ್ದಾರೆ

ಏತನ್ಮಧ್ಯೆ, ಈ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಆದೇಶಿಸಬೇಕು ಅಥವಾ ಈ ಬಗ್ಗೆ ತನಿಖೆ ನಡೆಸಲು ಹಾಲಿ ನ್ಯಾಯಾಧೀಶರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್‌ಗೆ ವಿನಂತಿಸಬೇಕು ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಮಸೂದೆಗೆ ಅಂಗೀಕಾರ ನೀಡುತ್ತಿರುವುದೋ ಅಥವಾ ಪಾಪ್ಡಿ ಚಾಟ್ ಮಾಡುತ್ತಿರುವುದೋ?: ಕೇಂದ್ರ ಸರ್ಕಾರ ವಿರುದ್ಧ ಡೆರಿಕ್ ಒಬ್ರೇನ್ ತರಾಟೆ

ಇದನ್ನೂ ಓದಿ: ಪೆಗಾಸಸ್‌ ಬಳಸಿ ಇಬ್ಬರು ಪತ್ರಕರ್ತರ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆ: ಫ್ರಾನ್ಸ್‌ನ ಸೈಬರ್‌ ಸೆಕ್ಯುರಿಟಿ ಏಜೆನ್ಸಿ

(Bihar Chief Minister Nitish Kumar called for a probe in the Pegasus spyware controversy )

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ