AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್, ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ

ಬಿಹಾರದಲ್ಲಿ ಅವರ ಜೆಡಿಯು ಎನ್‌ಡಿಎ ಜೊತೆಗಿನ ಸಂಬಂಧವನ್ನು ಮುರಿದುಕೊಂಡು ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಮಹಾಘಟಬಂಧನ್ ಸರ್ಕಾರವನ್ನು ರಚಿಸಿದ ನಂತರ ಇದು ನಿತೀಶ್ ಕುಮಾರ್ ಅವರ ಮೊದಲ ಭೇಟಿಯಾಗಿದೆ.

ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್, ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ
ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 05, 2022 | 9:34 PM

Share

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಸೋಮವಾರ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿ ಮಾಡಿದ್ದು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು 2024 ರ ಸಾರ್ವತ್ರಿಕ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿರುವಾಗ ಪ್ರತಿಪಕ್ಷಗಳ ಏಕತೆಯನ್ನು ಕಾಪಾಡಿಕೊಳ್ಳುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ಈ ಭೇಟಿಯಲ್ಲಿ ನಿತೀಶ್ ಕುಮಾರ್ ತಾವು ಪ್ರಧಾನಿ ಆಕಾಂಕ್ಷಿಯಲ್ಲ ಎಂಬುದನ್ನು ಪುನರುಚ್ಛರಿಸಿದ್ದಾರೆ. ಬಿಹಾರದಲ್ಲಿ ಅವರ ಜೆಡಿಯು ಎನ್‌ಡಿಎ ಜೊತೆಗಿನ ಸಂಬಂಧವನ್ನು ಮುರಿದುಕೊಂಡು ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಮಹಾಘಟಬಂಧನ್ ಸರ್ಕಾರವನ್ನು ರಚಿಸಿದ ನಂತರ ಇದು ನಿತೀಶ್ ಕುಮಾರ್ ಅವರ ಮೊದಲ ಭೇಟಿಯಾಗಿದೆ. ಬಿಹಾರ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲವನ್ನು ನೀಡಿದ್ದಕ್ಕಾಗಿ ಕುಮಾರ್, ರಾಹುಲ್ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಈ ಭೇಟಿಯಲ್ಲಿ ಇಬ್ಬರೂ ನಾಯಕರು ಸಮಾನ ಮನಸ್ಕ ಪಕ್ಷಗಳನ್ನು ಒಟ್ಟುಗೂಡಿಸುವ ಸಾಧ್ಯತೆಯ ಬಗ್ಗೆ ಮತ್ತು 2024 ರ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚೆಗಳನ್ನು ಮುಂದುವರಿಸುವ ಉದ್ದೇಶದ ಬಗ್ಗೆ ಮಾತನಾಡಿದರು ಎಂದು ವರದಿಯಾಗಿದೆ.

ಪ್ರತಿಪಕ್ಷಗಳು ಒಗ್ಗೂಡಿದರೆ ಉತ್ತಮ ವಾತಾವರಣ ನಿರ್ಮಾಣವಾಗಲಿದೆ. ನನಗೆ ಪ್ರಧಾನಿಯಾಗುವ ಯಾವುದೇ ಆಸೆ ಮತ್ತು ಆಕಾಂಕ್ಷೆ ಇಲ್ಲ ಎಂದು ಕುಮಾರ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ. ಕುಮಾರ್ ದೆಹಲಿ ಪ್ರವಾಸದ ವೇಳೆ ಎನ್‌ಸಿಪಿ ಮುಖ್ಯಸ್ಥ ಸರದ್ ಪವಾರ್, ಎಎಪಿಯ ಅರವಿಂದ ಕೇಜ್ರಿವಾಲ್ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಕುಮಾರ್ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಎಡಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2024 ರಲ್ಲಿ ಕುಮಾರ್ ಅವರು ಪ್ರಧಾನಿ ಅಭ್ಯರ್ಥಿಯಾಗಬಹುದು ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿ ಅವರ ಪ್ರಯತ್ನಗಳು ಕಂಡುಬರುತ್ತವೆ ಎಂಬ ಸುದ್ದಿಗಳ ನಡುವೆ ಈ ಭೇಟಿ ನಡೆದಿದೆ.

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಅವರ ಪ್ರಯತ್ನಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷ ಕುಮಾರ್ ಅವರನ್ನು ಶ್ಲಾಘಿಸಿದೆ.  ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥ ಮತ್ತು ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಘರ್ಹಿ ಇತ್ತೀಚೆಗಷ್ಟೇ ನಿತೀಶ್ ಕುಮಾರ್ ನಮ್ಮೊಂದಿಗೆ ಮೈತ್ರಿ ಮಾಡಿಕೊಂಡರು, ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಉತ್ಸಾಹವನ್ನು ಕಾಂಗ್ರೆಸ್ ಅವರೊಂದಿಗೆ ಹಂಚಿಕೊಳ್ಳುತ್ತದೆ ಎಂದಿದ್ದರು.

Published On - 9:29 pm, Mon, 5 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ