AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ಸಿಬ್ಬಂದಿ ಕೊಲೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಹರಿಹಾಯ್ದ ನಿತೀಶ್​ ಕುಮಾರ್

ನೀವು ಮಹಾನ್​ ವ್ಯಕ್ತಿಗಳು. ಆದರೂ ನಿಮ್ಮನ್ನು ನೇರವಾಗಿ ಕೇಳುತ್ತೇನೆ. ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ? ಎಂದು ವ್ಯಂಗ್ಯವಾಡಿದ್ದಾರೆ.

ಇಂಡಿಗೋ ಸಿಬ್ಬಂದಿ ಕೊಲೆಯ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾಧ್ಯಮದವರ ಮೇಲೆ ಹರಿಹಾಯ್ದ ನಿತೀಶ್​ ಕುಮಾರ್
ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​
Skanda
| Edited By: |

Updated on: Jan 15, 2021 | 10:40 PM

Share

ಪಾಟ್ನಾ: ಬಿಹಾರದಲ್ಲಿ ಕಳೆದ ಮಂಗಳವಾರ ನಡೆದ ಇಂಡಿಗೋ ಏರ್​ಲೈನ್​ ಸಿಬ್ಬಂದಿ ಹತ್ಯೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಕಿಡಿಕಾರಿದ್ದಾರೆ. ಮಾಧ್ಯಮದವರ ಪ್ರಶ್ನೆಯೇ ಸರಿಯಿಲ್ಲ ಮತ್ತು ಅಸಮಂಜಸವಾದದ್ದು ಎಂಬರ್ಥದಲ್ಲಿ ರೇಗಾಡಿರುವ ನಿತೀಶ್​ ಕುಮಾರ್​ ನಿಮ್ಮ ಬಳಿ ಏನಾದರೂ ಮಾಹಿತಿ ಇದ್ದರೆ, ಹೋಗಿ ಪೊಲೀಸರೊಂದಿಗೆ ಹಂಚಿಕೊಳ್ಳಿ ಎನ್ನುವ ಮೂಲಕ ಮಾಧ್ಯಮ ಪ್ರತಿನಿಧಿಗಳ ಮೇಲೆಯೇ ತಿರುಗಿಬಿದ್ದಿದ್ದಾರೆ.

ನೀವು ಮಹಾನ್​ ವ್ಯಕ್ತಿಗಳು. ಆದರೂ ನಿಮ್ಮನ್ನು ನೇರವಾಗಿ ಕೇಳುತ್ತೇನೆ. ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ? ಎಂದು ವ್ಯಂಗ್ಯವಾಡಿದ್ದಾರೆ. ಮಾಧ್ಯಮದವರು ಕಾನೂನು ಪಾಲನೆಯ ಕುರಿತಾಗಿ ಕೇಳಿದ ಪ್ರಶ್ನೆಗೆ ಆಕ್ರೋಶಗೊಂಡ ನಿತೀಶ್​ ಕುಮಾರ್​ 15 ವರ್ಷಗಳ ಕಾಲ ಗಂಡ-ಹೆಂಡತಿ ಇಬ್ಬರೂ ಅಧಿಕಾರದಲ್ಲಿದ್ದಾಗ ಎಷ್ಟೊಂದು ಅಪರಾಧಗಳಾಗಿದ್ದವು. ಅದನ್ನೇಕೆ ನೀವು ತೋರಿಸಲಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಲಾಲು ಪ್ರಸಾದ್​ ಯಾದವ್​ ಮತ್ತು ರಾಬ್ರಿ ದೇವಿಯನ್ನು ಕುಟುಕಿದ್ದಾರೆ.

ರಾಜ್ಯದಲ್ಲಿ ಏನೇ ಅವಘಡ ಆದರೂ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಜೊತೆಗೆ, ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ, ನಿಮಗೆ ಸಲಹೆ ಕೊಡುವವರಿಗೆ ಸೂಕ್ತ ತರಬೇತಿ ನೀಡುವ ಅವಶ್ಯಕತೆ ಇದೆ ಎಂದು ಮಾಧ್ಯಮದವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಕೊಲೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳೊಂದಿಗೆ ಮೈತ್ರಿಪಕ್ಷ ಬಿಜೆಪಿಯೂ ನಿತೀಶ್​ ಕುಮಾರ್​ ಅವರ ಮೇಲೆ ಒತ್ತಡ ಹೇರುತ್ತಿವೆ.

ಪ್ರಧಾನ ಕಾರ್ಯದರ್ಶಿಯಿಂದ ಜೆಡಿಯು ಅಧ್ಯಕ್ಷ ಸ್ಥಾನದವರೆಗೆ; ನಿತೀಶ್ ಆಪ್ತ ಆರ್​ಸಿಪಿ ಸಿಂಗ್ ರಾಜಕೀಯ ಪಯಣ

Follow Us
Skanda
Skanda
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ