AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಜೆಡಿ ಮಕ್ಕಳಿಗೆ ಪಿಸ್ತೂಲು ನೀಡಿದರೆ ನಾವು ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದ್ದೇವೆ; ಪ್ರಧಾನಿ ಮೋದಿ ವಾಗ್ದಾಳಿ

ಆರ್​ಜೆಡಿ ಬಿಹಾರದ ಮಕ್ಕಳು ಸುಲಿಗೆಕೋರರಾಗಬೇಕೆಂದು ಬಯಸುತ್ತದೆ. ಆದರೆ ಎನ್‌ಡಿಎ ಅವರ ಉತ್ತಮ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದೆ. ಎನ್‌ಡಿಎ ಮಕ್ಕಳಿಗೆ ಶಿಕ್ಷಣ, ತಂತ್ರಜ್ಞಾನ ಮತ್ತು ಅವಕಾಶಗಳನ್ನು ನೀಡುತ್ತಿದೆ. ಆರ್‌ಜೆಡಿ ಬಿಹಾರ ರಾಜ್ಯದ ಯುವಕರನ್ನು ಗೂಂಡಾಗಳನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಬಿಹಾರದ ಸೀತಾಮರ್ಹಿಯಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ಆರ್​ಜೆಡಿ ಮಕ್ಕಳಿಗೆ ಪಿಸ್ತೂಲು ನೀಡಿದರೆ ನಾವು ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದ್ದೇವೆ; ಪ್ರಧಾನಿ ಮೋದಿ ವಾಗ್ದಾಳಿ
Modi In Bihar
ಸುಷ್ಮಾ ಚಕ್ರೆ
|

Updated on: Nov 08, 2025 | 3:23 PM

Share

ಪಾಟ್ನಾ, ನವೆಂಬರ್ 8: ಆರ್​ಜೆಡಿ (RJD) ಮಕ್ಕಳ ಮನಸ್ಸನ್ನು ವಿಷಪೂರಿತಗೊಳಿಸುತ್ತಿದೆ. ಅವರು ಬಿಹಾರದ ಯುವಕರನ್ನು ಗೂಂಡಾಗಳನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಎನ್‌ಡಿಎ (NDA) ಯುವ ಪೀಳಿಗೆಗೆ ಕಂಪ್ಯೂಟರ್‌ಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒದಗಿಸುತ್ತಿದ್ದರೆ, ಆರ್‌ಜೆಡಿ ಅವರಿಗೆ ಪಿಸ್ತೂಲ್ ನೀಡುವ ಬಗ್ಗೆ ಮಾತನಾಡುತ್ತಿದೆ ಎಂದು ವರದಿಯಾಗಿದೆ ಎಂದು ಪ್ರಧಾನಿ ಮೋದಿ (PM Narendra Modi) ಆಕ್ರೋಶ ಹೊರಹಾಕಿದ್ದಾರೆ.

“ಬಿಹಾರದ ಮಕ್ಕಳಿಗಾಗಿ ಆರ್‌ಜೆಡಿ ಏನು ಮಾಡಲು ಬಯಸುತ್ತದೆ ಎಂಬುದು ಅವರ ಚುನಾವಣಾ ಪ್ರಚಾರದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ‘ಜಂಗಲ್ ರಾಜ್’ ಜನರ ಘೋಷಣೆಗಳನ್ನು ಕೇಳಿ. ಆರ್‌ಜೆಡಿ ತನ್ನ ವೇದಿಕೆಗಳಲ್ಲಿ ಮುಗ್ಧ ಮಕ್ಕಳು ಸುಲಿಗೆಕೋರರಾಗಲು ಬಯಸುತ್ತೇವೆ ಎಂದು ಹೇಳುತ್ತಿದೆ. ಬಿಹಾರದ ಮಗು ದರೋಡೆಕೋರ ಆಗಬೇಕೇ ಅಥವಾ ವೈದ್ಯನಾಗಬೇಕೇ?” ಎಂದು ಪ್ರಧಾನಿ ಮೋದಿ ಆರ್‌ಜೆಡಿಯ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Video: ವಾರಾಣಸಿಯಲ್ಲಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

“ಬಿಹಾರದ ಮಕ್ಕಳು ಈಗ ಸ್ಟಾರ್ಟ್ಅಪ್​ಗಳ ಕನಸು ಕಾಣಬೇಕೇ ಹೊರತು “ಹ್ಯಾಂಡ್ಸ್ ಅಪ್” ನಾಯಕರ ಕನಸಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸ್ಟಾರ್ಟ್ಅಪ್​ಗಳ ಕನಸು ಕಾಣುವ ಮಕ್ಕಳು ನಮಗೆ ಬೇಕು. ನಾವು ನಮ್ಮ ಮಕ್ಕಳಿಗೆ ಪುಸ್ತಕಗಳು, ಕಂಪ್ಯೂಟರ್​ಗಳು ಮತ್ತು ಲ್ಯಾಪ್ಟಾಪ್​ಗಳನ್ನು ನೀಡುತ್ತಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ