AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LJP ಬಂಡೆದ್ದ ಸಂಸದರ ಉಚ್ಛಾಟನೆ; ಚಿರಾಗ್ ಪಾಸ್ವಾನ್​ನ್ನು ಎಲ್​ಜೆಪಿ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ ಪಶುಪತಿ ಪಾರಸ್

Bihar Politics: ಚಿಕ್ಕಪ್ಪ ಪಶುಪತಿ ಪಾರಸ್ ಅವರನ್ನು ಉಚ್ಛಾಟಿಸಿದ ನಂತರ ಪ್ರತಿಕ್ರಿಯಿಸಿದ ಪಾಸ್ವಾನ್, ತಮ್ಮ  ಸಂಘಟನೆಯನ್ನು ತಾಯಿಗೆ ಹೋಲಿಸಿ ಅವರನ್ನು "ದ್ರೋಹ" ಮಾಡಬಾರದು ಎಂದಿದ್ದಾರೆ.

LJP ಬಂಡೆದ್ದ ಸಂಸದರ ಉಚ್ಛಾಟನೆ; ಚಿರಾಗ್ ಪಾಸ್ವಾನ್​ನ್ನು ಎಲ್​ಜೆಪಿ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ ಪಶುಪತಿ ಪಾರಸ್
ಚಿರಾಗ್ ಪಾಸ್ವಾನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 15, 2021 | 6:30 PM

ಪಟ್ನಾ: ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಚಿರಾಗ್ ಪಾಸ್ವಾನ್ ಅವರನ್ನು ತೆಗೆದು ಹಾಕಿದ್ದೇವೆ ಎಂದು ಪಶುಪತಿ ಪಾರಸ್ ಹೇಳಿದ್ದಾರೆ. ಆದಾಗ್ಯೂ, ಎಲ್​ಜೆಪಿ ರಾಷ್ಟ್ರೀಯ ಕಾರ್ಯನಿರ್ವಾಹಕ ಸಭೆ ನಡೆಸಿ ಐದು ಬಂಡಾಯ ಸಂಸದರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿರುವುದಾಗಿ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಪಕ್ಷದ ಐವರು ಸಂಸದರು ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ವಿರುದ್ಧ ದಂಗೆ ಎದ್ದ ಒಂದು ದಿನದ ನಂತರ ಈ ರಾಜಕೀಯ ಬೆಳವಣಿಗೆ ಸಂಭವಿಸಿದೆ.  ಪಶುಪತಿ ಕುಮಾರ್ ಪಾರಸ್ (ಹಾಜಿಪುರ), ಚೌಧರಿ ಮೆಹಬೂಬ್ ಅಲಿ ಖೈಸರ್ (ಖಾಗರಿಯಾ), ಚಂದನ್ ಕುಮಾರ್ (ನವಾಡಾ), ವೀಣಾ ದೇವಿ (ವೈಶಾಲಿ) ಮತ್ತು ರಾಜಕುಮಾರ ರಾಜ್ (ಸಮಸ್ತಿಪುರ) ಈ ಐವರು ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾನುವಾರ ಸಂಜೆ ಭೇಟಿ ಮಾಡಿದ್ದರು. ಸೋಮವಾರ ಮತ್ತೆ ಭೇಟಿ ಮಾಡಿದ  ಅವರು ಪಾರಸ್  ಅವರನ್ನು ಎಲ್​ಜೆಪಿ  ಸಂಸದೀಯ ಪಕ್ಷದ ನಾಯಕರಾಗಿ ಮತ್ತು ಕೈಸರ್ ಅವರನ್ನು ಉಪ ನಾಯಕರಾಗಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಸೋಮವಾರ ತಡರಾತ್ರಿ ಲೋಕಸಭಾ ಸಚಿವಾಲಯವು ಪಾರಸ್ ಅವರನ್ನು ಲೋಕಸಭೆಯಲ್ಲಿ ಎಲ್​​ಜೆಪಿ ನಾಯಕ ಎಂದು ದೃಢೀಕರಿಸುವ ಸುತ್ತೋಲೆ ಹೊರಡಿಸಿತು.

ಚಿಕ್ಕಪ್ಪ ಪಶುಪತಿ ಪಾರಸ್ ಅವರನ್ನು ಉಚ್ಛಾಟಿಸಿದ ನಂತರ ಪ್ರತಿಕ್ರಿಯಿಸಿದ ಪಾಸ್ವಾನ್, ತಮ್ಮ  ಸಂಘಟನೆಯನ್ನು ತಾಯಿಗೆ ಹೋಲಿಸಿ ಅವರನ್ನು “ದ್ರೋಹ” ಮಾಡಬಾರದು ಎಂದಿದ್ದಾರೆ. ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಮತ್ತು ಅವರ ಕುಟುಂಬವು ಸ್ಥಾಪಿಸಿದ ಪಕ್ಷವನ್ನು ಒಟ್ಟಿಗೆ ಇಟ್ಟುಕೊಳ್ಳಲು ಪ್ರಯತ್ನಿಸಿದ್ದೇನೆ ಆದರೆ ವಿಫಲವಾಗಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಜನರು ಸರ್ವೋಚ್ಚರು, ಪಕ್ಷದಲ್ಲಿ ನಂಬಿಕೆ ಇಟ್ಟುಕೊಂಡವರಿಗೆ ಪಾಸ್ವಾನ್ ಧನ್ಯವಾದ ಅರ್ಪಿಸಿದರು.

ಪಾಸ್ವಾನ್ ಅವರು ಮಾರ್ಚ್ ತಿಂಗಳಲ್ಲಿ ತಮ್ಮ ತಂದೆಯ ಕಿರಿಯ ಸಹೋದರ ಪಾರಸ್ ಗೆ ಬರೆದ ಪತ್ರವೊಂದನ್ನು ಹಂಚಿಕೊಂಡರು. ಅದರಲ್ಲಿ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಹಲವಾರು ವಿಷಯಗಳ ಬಗ್ಗೆ ಚಿಕ್ಕಪ್ಪನ ಅಸಮಾಧಾನವನ್ನು ಎತ್ತಿ ತೋರಿಸಿದ್ದರು.

ಕಳೆದ ವರ್ಷ ಅಕ್ಟೋಬರ್-ನವೆಂಬರ್​ನಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯ ಕೆಲವು ತಿಂಗಳ ನಂತರ, ಚಿರಾಗ್ ಪಾಸ್ವಾನ್ ಜೆಡಿಯು ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಲ್ಲಿ  ಕೋಪಗೊಂಡು ಎನ್‌ಡಿಎಯಿಂದ ಹೊರನಡೆದರು. ಅವರು ಬಿಜೆಪಿಯೊಂದಿಗೆ ಕೆಲಸ ಮಾಡಲು ಬಯಸಿದ್ದರು. ಆದಾಗ್ಯೂ, ಎಲ್ ಜೆಪಿ ಚುನಾವಣೆಯಲ್ಲಿ ಕಳಪೆ ಸಾಧನೆ ತೋರಿತು. ಪಕ್ಷದ ಏಕೈಕ ಶಾಸಕ ಅಂತಿಮವಾಗಿ ಜೆಡಿಯುಗೆ ಪಕ್ಷಾಂತರವಾಗಿದ್ದರು.

ಇದನ್ನೂ ಓದಿChirag Paswan ಕಾಂಗ್ರೆಸ್, ಆರ್​ಜೆಡಿ ಪಕ್ಷಗಳಿಗೆ ಸೇರಲು ಎಲ್​ಜೆಪಿಯ ಮುಖ್ಯಸ್ಥ ಚಿರಾಗ್ ಪಾಸ್ವಾನ್​ಗೆ ಆಹ್ವಾನ

ಇದನ್ನೂ ಓದಿ: Chirag Paswan ಚಿರಾಗ್ ಪಾಸ್ವಾನ್ ವಿರುದ್ಧ ಬಂಡೆದ್ದ ಎಲ್​ಜೆಪಿ ಸಂಸದರು; ಬಂಡಾಯದ ತಂಡಕ್ಕೆ ಪಶುಪತಿ ಪಾರಸ್ ನೇತೃತ್ವ

ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು