AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್; ವಿಪಕ್ಷಗಳನ್ನು ಒಗ್ಗೂಡಿಸುವುದೇ ಅಜೆಂಡಾ

ಸಭೆಯ ನಂತರ, ಹಿಂದಿಯಲ್ಲಿ ಟ್ವೀಟ್ ಮಾಡಿದ ಖರ್ಗೆ ಈಗ ದೇಶ ಒಂದಾಗಲಿದೆ, ಪ್ರಜಾಪ್ರಭುತ್ವದ ಶಕ್ತಿಯೇ ನಮ್ಮ ಸಂದೇಶ. ರಾಹುಲ್ ಗಾಂಧಿ ಮತ್ತು ನಾವು ಬಿಹಾರದ ಮುಖ್ಯಮಂತ್ರಿಯೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಎಂದಿದ್ದಾರೆ.

ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್; ವಿಪಕ್ಷಗಳನ್ನು ಒಗ್ಗೂಡಿಸುವುದೇ ಅಜೆಂಡಾ
ಖರ್ಗೆ, ರಾಹುಲ್ ಗಾಂಧಿ ಜತೆ ನಿತೀಶ್ ಕುಮಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 22, 2023 | 7:47 PM

Share

ದೆಹಲಿ: 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನ ಸಂವಾದಕರಾಗಿ ಕಾರ್ಯನಿರ್ವಹಿಸಲು ಮುಂದಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Bihar CM Nitish Kumar) ಅವರು ಇಂದು (ಸೋಮವಾರ)ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಯಾದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೊಂದಿಗಿನ ಸಭೆಯು ವಿರೋಧ ಪಕ್ಷದ ಸಭೆಗೆ ದಿನಾಂಕವನ್ನು ನಿಗದಿಪಡಿಸಲು ಉದ್ದೇಶಿಸಲಾಗಿತ್ತು, ಇದನ್ನು ಕರ್ನಾಟಕ ವಿಧಾನಸಭಾ ಚುನಾವಣೆಯ ಮೊದಲು ಯೋಜಿಸಲಾಗಿತ್ತು. ಪ್ರತಿಪಕ್ಷಗಳ ಏಕತೆ ಮತ್ತು ನೂತನ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ನಾಯಕರು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಸಭೆಯ ನಂತರ, ಹಿಂದಿಯಲ್ಲಿ ಟ್ವೀಟ್ ಮಾಡಿದ ಖರ್ಗೆ ಈಗ ದೇಶ ಒಂದಾಗಲಿದೆ, ಪ್ರಜಾಪ್ರಭುತ್ವದ ಶಕ್ತಿಯೇ ನಮ್ಮ ಸಂದೇಶ. ರಾಹುಲ್ ಗಾಂಧಿ ಮತ್ತು ನಾವು ಬಿಹಾರದ ಮುಖ್ಯಮಂತ್ರಿಯೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ. ನಿತೀಶ್ ಕುಮಾರ್ ಅವರು ಇಂದು ದೇಶಕ್ಕೆ ಹೊಸ ದಿಕ್ಕನ್ನು ನೀಡುವ ಪ್ರಕ್ರಿಯೆಯನ್ನು ಮುಂದಕ್ಕೆ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.

ದೆಹಲಿಯ 10, ರಾಜಾಜಿ ಮಾರ್ಗ್ ನಿವಾಸದಲ್ಲಿ ಖರ್ಗೆ ಅವರನ್ನು ಕುಮಾರ್ ಭೇಟಿಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಮತ್ತು ಜೆಡಿಯು ಮುಖ್ಯಸ್ಥ ಲಾಲನ್ ಸಿಂಗ್ ಅವರು ಸಭೆಗೆ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ. ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸಹ ಈ ಸಭೆಗೆ ಹಾಜರಾಗಲು ಉದ್ದೇಶಿಸಿದ್ದರು.ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಅವಪು ಕೊನೆಯ ಕ್ಷಣದಲ್ಲಿ ಹೊರಗುಳಿಯಬೇಕಾಯಿತು.

ಪ್ರತಿಪಕ್ಷಗಳ ಒಗ್ಗಟ್ಟಿನ ಅಗತ್ಯವನ್ನು ಒಪ್ಪಿಕೊಳ್ಳಲು ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಂತಹ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ಕರೆತರುವಲ್ಲಿ ಕುಮಾರ್ ಇದುವರೆಗೆ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:  ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದೆ: ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಖರ್ಗೆ

ನಿನ್ನೆ, ನಿತೀಶ್ ಕುಮಾರ್ ಅವರು ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಕೆಲಸ ಮಾಡುವ ಅಧಿಕಾರಶಾಹಿಗಳ ನಿಯಂತ್ರಣದ ಬಗ್ಗೆ ಕೇಂದ್ರದೊಂದಿಗೆ ನಡೆಯುತ್ತಿರುವ ಜಟಾಪಟಿಯಲ್ಲಿ ದೆಹಲಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲವನ್ನು ನೀಡಿದರು. ಕಳೆದ ವಾರ ಕುಮಾರ್ ಅವರು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ