AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಿಂತ ಅವರ ಮಗ 5 ಪಟ್ಟು ಹೆಚ್ಚು ಶ್ರೀಮಂತ !-ಯಾವ ರಾಜ್ಯ? ಆಸ್ತಿ ವಿವರದ ಮಾಹಿತಿ ಇಲ್ಲಿದೆ

ಪ್ರತಿವರ್ಷ ಕೊನೇ ದಿನ  ಸರ್ಕಾರದ ಸಂಪುಟದ ಎಲ್ಲ ಸಚಿವರೂ ತಮ್ಮ ಆಸ್ತಿಯನ್ನು ಘೋಷಣೆ ಮಾಡಬೇಕು. ಅದು ಸರ್ಕಾರಿ ವೆಬ್​ಸೈಟ್​ನಲ್ಲಿ ಉಲ್ಲೇಖವಾಗಬೇಕು ಎಂದು ಈ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿತ್ತು.

ಮುಖ್ಯಮಂತ್ರಿಗಿಂತ ಅವರ ಮಗ 5 ಪಟ್ಟು ಹೆಚ್ಚು ಶ್ರೀಮಂತ !-ಯಾವ ರಾಜ್ಯ? ಆಸ್ತಿ ವಿವರದ ಮಾಹಿತಿ ಇಲ್ಲಿದೆ
ನಿಶಾಂತ್​
TV9 Web
| Edited By: |

Updated on: Jan 02, 2022 | 10:42 AM

Share

ರಾಜಕಾರಣಿಗಳೆಂದೆರೇ ಶ್ರೀಮಂತರು. ಅವರ ಮಕ್ಕಳು ಮತ್ತೂ ಶ್ರೀಮಂತರು..! ಈ ಮಾತು ಅನ್ವಯ ಆಗುವುದು ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಮತ್ತು ಅವರ ಪುತ್ರನಿಗೆ. ಬಿಹಾರ ಸಿಎಂ ನಿತೀಶ್​ ಕುಮಾರ್​ಗಿಂತ ಅವರ ಪುತ್ರ 5 ಪಟ್ಟು ಹೆಚ್ಚು ಶ್ರೀಮಂತರಂತೆ. ನಿತೀಶ್​ ಕುಮಾರ್​ ಬಳಿ ಒಟ್ಟಾರೆ (ಚಿರಾಸ್ತಿ, ಸ್ಥಿರಾಸ್ಥಿ ಎಲ್ಲ ಸೇರಿ ) 75.36 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯಿದ್ದರೆ, ಅವರ ಪುತ್ರ ನಿಶಾಂತ್​ ಬಳಿ, ಈ ಮೊತ್ತದ 5 ಪಟ್ಟು ಜಾಸ್ತಿ ಆಸ್ತಿಯಿದೆ.  ಬಿಹಾರ ಸರ್ಕಾರಿ ವೆಬ್​ಸೈಟ್​​ನಲ್ಲಿ ಡಿ.31ರಂದು ಉಲ್ಲೇಖವಾದ ಆಸ್ತಿ ವಿವರದ ಅನ್ವಯ, ನಿತೀಶ್ ಕುಮಾರ್​  ಬಳಿ, 29,385 ರೂಪಾಯಿ ನಗದು ಇದೆ. ಹಾಗೇ, ಬ್ಯಾಂಕ್​ ಅಕೌಂಟ್​​ನಲ್ಲಿ 42,763 ರೂಪಾಯಿ ಇದೆ. ಆದರೆ ಅವರ ಪುತ್ರನ ಬಳಿ ಕೈಯಲ್ಲಿ 16, 549 ರೂಪಾಯಿ ಇದ್ದು, ಬ್ಯಾಂಕ್​ನಲ್ಲಿ 1.28 ಕೋಟಿ ರೂಪಾಯಿ ಎಫ್​ಡಿ ಇದೆ. 

ನಿತೀಶ್​ ಕುಮಾರ್​ ಬಳಿ 16.51 ಲಕ್ಷ ರೂಪಾಯಿ ಚರಾಸ್ತಿ ಇದ್ದು, 58.85 ಲಕ್ಷ ರೂ.ಮೌಲ್ಯ ಸ್ಥಿರಾಸ್ತಿ ಇದೆ. ಆದರೆ ಅವರ ಪುತ್ರ ಕೋಟಿ ರೂಪಾಯಿಯಲ್ಲಿ ಸಂಪಾದಿಸಿದ್ದಾರೆ. ಪುತ್ರ ನಿಶಾಂತ್​ ಚರಾಸ್ತಿ ಮೌಲ್ಯ 1.63 ಕೋಟಿ ರೂಪಾಯಿ ಹಾಗೂ ಸ್ಥಿರಾಸ್ತಿ ಮೌಲ್ಯ 1.98 ಕೋಟಿ ರೂಪಾಯಿ.  ಸಿಎಂ ನಿತೀಶ್​ ಕುಮಾರ್ ಅವರು ದೆಹಲಿಯ ದ್ವಾರಕಾದ ಸಹಕಾರಿ ಹೌಸಿಂಗ್ ಸೊಸೈಟಿಯಲ್ಲಿ ಮುಖ್ಯಮಂತ್ರಿಯವರು ಒಂದು ವಸತಿ ಫ್ಲಾಟ್ ಹೊಂದಿದ್ದಾರೆ. ಹಾಗೇ, ಇವರ ಪುತ್ರ ನಿಶಾಂತ್​ ಕಲ್ಯಾಣ್ ಬಿಘಾ ಮತ್ತು ಹಕೀಕತ್​ಪುರದಲ್ಲಿ ಕೃಷಿ ಭೂಮಿ ಮತ್ತು ವಸತಿ ಗೃಹಗಳನ್ನು ಹೊಂದಿದ್ದಾರೆ. ಕಂಕರ್​ಬಾಗ್​​ನಲ್ಲೂ ಕೂಡ ಇವರ ಆಸ್ತಿ ಇದೆ. ಕಲ್ಯಾಣ್​ ಬಿಘಾ ನಿತೀಶ್​ ಕುಮಾರ್​ ಅವರ ಪೂರ್ವಜರು ವಾಸವಾಗಿದ್ದ ಹಳ್ಳಿ. ಇಲ್ಲಿ ನಿಶಾಂತ್​, ಕೃಷಿ ಭೂಮಿ ಮತ್ತು ಕೃಷಿ ಯೋಗ್ಯವಲ್ಲದ ಭೂಮಿಗಳನ್ನು ಹೊಂದಿದ್ದಾರೆ. ಇನ್ನು ನಿತೀಶ್​ ಕುಮಾರ್ ಅವರು 1.45 ಲಕ್ಷ ರೂಪಾಯಿ ಮೌಲ್ಯದ 13 ಹಸುಗಳು ಮತ್ತು 9 ಕರುಗಳನ್ನು ಹೊಂದಿದ್ದಾಗಿ ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ.

ಪ್ರತಿವರ್ಷ ಕೊನೇ ದಿನ  ಸರ್ಕಾರದ ಸಂಪುಟದ ಎಲ್ಲ ಸಚಿವರೂ ತಮ್ಮ ಆಸ್ತಿಯನ್ನು ಘೋಷಣೆ ಮಾಡಬೇಕು. ಅದು ಸರ್ಕಾರಿ ವೆಬ್​ಸೈಟ್​ನಲ್ಲಿ ಉಲ್ಲೇಖವಾಗಬೇಕು ಎಂದು ಈ ಹಿಂದೆಯೇ ನಿತೀಶ್ ಕುಮಾರ್​ ಸರ್ಕಾರ ಆದೇಶ ಹೊರಡಿಸಿತ್ತು.  ಹೀಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸೇರಿ ಎಲ್ಲರೂ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ನಮೂದಿಸಲೇಬೇಕಾಗುತ್ತದೆ. ಇನ್ನೂ ಒಂದು ಮುಖ್ಯವಾದ ವಿಷಯವೆಂದರೆ, ನಿತೀಶ್​ ಕುಮಾರ್ ಅವರು ತಮ್ಮ ಸಂಪುಟದ ಎಲ್ಲ ಸಹೋದ್ಯೋಗಿಗಳಿಗಿಂತಲೂ ಬಡವರೇ ಆಗಿದ್ದಾರೆ.

ಇದನ್ನೂ ಓದಿ: ಹೋಮ-ಹವನ ವಿಶೇಷ ಪೂಜೆ ಮೂಲಕ ತಮ್ಮ ನೆಚ್ಚಿನ ಕೋತಿ ಚಿಂಟು 2ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡಿದ ಸಾ.ರಾ.ಮಹೇಶ್

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ