AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಚರಿತಮಾನಸವನ್ನು ಪೊಟ್ಯಾಶಿಯಂ ಸೈನೈಡ್‌ಗೆ ಹೋಲಿಸಿದ ಬಿಹಾರದ ಶಿಕ್ಷಣ ಸಚಿವ

ರಾಮಚರಿತ ಮಾನಸ ಕುರಿತು ಸಚಿವ ಚಂದ್ರಶೇಖರ್ ನಿರಂತರವಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದನ್ನು ನಿತೀಶ್ ಕುಮಾರ್ ಕೇಳುತ್ತಿಲ್ಲವೇ? ನಿತೀಶ್ ಕುಮಾರ್ ಅವರು ಸನಾತನ ಸಂಸ್ಥೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಚಂದ್ರಶೇಖರ್ ಅವರಿಗೆ ಯಾವುದೇ ಸಮಸ್ಯೆ ಇದ್ದರೆ ಅವರು ಧರ್ಮ ಬದಲಿಸಲಿ ಎಂದು ಬಿಜೆಪಿ ವಕ್ತಾರ ನೀರಜ್ ಕುಮಾರ್ ಸಲಹೆ ನೀಡಿದ್ದಾರೆ.

ರಾಮಚರಿತಮಾನಸವನ್ನು ಪೊಟ್ಯಾಶಿಯಂ ಸೈನೈಡ್‌ಗೆ ಹೋಲಿಸಿದ ಬಿಹಾರದ ಶಿಕ್ಷಣ ಸಚಿವ
ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್
ರಶ್ಮಿ ಕಲ್ಲಕಟ್ಟ
|

Updated on:Sep 15, 2023 | 3:33 PM

Share

ಪಾಟ್ನಾ ಸೆಪ್ಟೆಂಬರ್ 15: ಬಿಹಾರದ (Bihar) ಶಿಕ್ಷಣ ಸಚಿವ ಚಂದ್ರಶೇಖರ್ (Chandra Shekhar) ರಾಮಾಯಣವನ್ನು ಆಧರಿಸಿದ ಹಿಂದೂ ಧಾರ್ಮಿಕ ಪುಸ್ತಕವಾದ ರಾಮಚರಿತಮಾನಸವನ್ನು(Ramcharitmanas) ಪೊಟ್ಯಾಶಿಯಂ ಸೈನೈಡ್‌ಗೆ (Potassium cyanide) ಹೋಲಿಸಿದ್ದಾರೆ. ಹಿಂದಿ ದಿವಸ್‌ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. “ನೀವು ಐವತ್ತೈದು ರೀತಿಯ ಭಕ್ಷ್ಯಗಳನ್ನು ಬಡಿಸಿ, ಅದರಲ್ಲಿ ಪೊಟ್ಯಾಶಿಯಂ ಸೈನೈಡ್ ಅನ್ನು ಬೆರೆಸಿದರೆ, ನೀವು ಅದನ್ನು ತಿನ್ನುತ್ತೀರಾ? ಹಿಂದೂ ಧರ್ಮದ ಧರ್ಮಗ್ರಂಥಗಳ ವಿಷಯವೂ ಅದೇ”ಎಂದು ಚಂದ್ರಶೇಖರ್ ಹೇಳಿದ್ದಾರೆ.

ರಾಮಚರಿತಮಾನಸಕ್ಕೆ ನನ್ನ ಆಕ್ಷೇಪ ದೃಢವಾಗಿದೆ. ಅದು ನನ್ನ ಜೀವನದುದ್ದಕ್ಕೂ ಇರುತ್ತದೆ. ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ಬಿಹಾರ ಸಚಿವರು ಹೇಳಿದ್ದಾರೆ. ಗಟಾರಕ್ಕೆ ಇಳಿಯುವವರ ಜಾತಿಗಳನ್ನು ಬದಲಾಯಿಸದ ಹೊರತು ಈ ದೇಶದಲ್ಲಿ ಮೀಸಲಾತಿ ಮತ್ತು ಜಾತಿ ಗಣತಿಯ ಅವಶ್ಯಕತೆ ಇರುತ್ತದೆ ಎಂದು ಅವರು ಹೇಳಿದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಮಚರಿತ ಮಾನಸ ಕುರಿತು ಸಚಿವ ಚಂದ್ರಶೇಖರ್ ನಿರಂತರವಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದನ್ನು ನಿತೀಶ್ ಕುಮಾರ್ ಕೇಳುತ್ತಿಲ್ಲವೇ? ನಿತೀಶ್ ಕುಮಾರ್ ಅವರು ಸನಾತನ ಸಂಸ್ಥೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಚಂದ್ರಶೇಖರ್ ಅವರಿಗೆ ಯಾವುದೇ ಸಮಸ್ಯೆ ಇದ್ದರೆ ಅವರು ಧರ್ಮ ಬದಲಿಸಲಿ ಎಂದು ಬಿಜೆಪಿ ವಕ್ತಾರ ನೀರಜ್ ಕುಮಾರ್ ಸಲಹೆ ನೀಡಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಕೂಡ ಚಂದ್ರಶೇಖರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಹೇಳಿದ್ದಾರೆ.

ಶಿಕ್ಷಣ ಸಚಿವರನ್ನು ವಜಾಗೊಳಿಸಬೇಕು. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಹೊಸ ತಲೆಮಾರಿಗೆ ವಿಷ ಉಣಿಸುತ್ತಿದ್ದಾರೆ. ಬಿಹಾರದ ಶಿಕ್ಷಣ ಸಚಿವರಿಗೆ ನಾಚಿಕೆಯಾಗಬೇಕು. ರಾಮಚರಿತಮಾನಸ ಪೊಟ್ಯಾಶಿಯಂ ಸೈನೈಡ್ ಎಂದು ಕರೆಯುವ ಮೂಲಕ ಹೊಸ ತಲೆಮಾರಿನ ಮನಸ್ಸಿಗೆ ವಿಷ ಉಣಿಸುತ್ತಿದ್ದಾರೆ ಎಂದು ಪಾಸ್ವಾನ್ ಹೇಳಿದ್ದಾರೆ.

ಇದನ್ನೂ ಓದಿ:  ಇಂಡಿಯಾ ಮೈತ್ರಿಕೂಟ ಸನಾತನ ಧರ್ಮ ಮತ್ತು ಹಿಂದೂ ವಿರೋಧಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಶಿಕ್ಷಣ ಸಚಿವರ ಮಾನಸಿಕ ಸ್ಥಿತಿ ಕೆಟ್ಟಿದೆ. ಅವರು ಸ್ವತಃ ಚಿಕಿತ್ಸೆ ಪಡೆಯಬೇಕು. ನಾವು 2003 ರಲ್ಲಿ ಮಾನಸಿಕ ಆಸ್ಪತ್ರೆಯನ್ನು ತೆರೆದಿದ್ದೇವೆ. ಬಿಹಾರ ಸರ್ಕಾರವು ಅವರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದಿದ್ದರೆ, ಬಿಜೆಪಿಯು ಅವರಿಗೆ ಚಿಕಿತ್ಸೆ ನೀಡಲಿದೆ ಎಂದು ಬಿಹಾರದ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಈ ಹಿಂದೆಯೂ ಚಂದ್ರಶೇಖರ್ ಇದೇ ರೀತಿ ಹೇಳಿಕೆ ನೀಡಿದ್ದರು

ಚಂದ್ರಶೇಖರ್ ರಾಮಚರಿತಮಾನಸ ಕುರಿತು ಹೇಳಿಕೆ ನೀಡಿ ವಿವಾದಕ್ಕೀಡಾಗಿರುವುದು ಇದೇ ಮೊದಲು ಅಲ್ಲ. ರಾಮಚರಿತಮಾನಸ ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ ಎಂದು ಆರ್‌ಜೆಡಿ ಪಕ್ಷದ ಸಚಿವರು ಜನವರಿಯಲ್ಲಿ ಹೇಳಿದ್ದರು. ಒಂದು ರಾಷ್ಟ್ರವು ಪ್ರೀತಿ ಮತ್ತು ವಾತ್ಸಲ್ಯದಿಂದ ಶ್ರೇಷ್ಠವಾಗುತ್ತದೆ. ರಾಮಚರಿತಮಾನಸ್, ಮನುಸ್ಮೃತಿ ಮತ್ತು ಬಂಚ್ ಆಫ್ ಥಾಟ್ಸ್‌ನಂತಹ ಪುಸ್ತಕಗಳು ದ್ವೇಷ ಮತ್ತು ಸಾಮಾಜಿಕ ವಿಭಜನೆಯ ಬೀಜಗಳನ್ನು ಬಿತ್ತಿದವು. ದಲಿತರು, ಹಿಂದುಳಿದವರು ಮತ್ತು ಮಹಿಳೆಯರಿಗೆ ಶಿಕ್ಷಣದ ವಿರುದ್ಧ ಮಾತನಾಡುವ ರಾಮಚರಿತಮಾನದ ಒಂದು ಭಾಗ ಮತ್ತು ಮನುಸ್ಮೃತಿಯನ್ನು ಜನರು ಸುಟ್ಟುಹಾಕಲು ಇದೇ ಕಾರಣ ಎಂದು ಸಚಿವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Fri, 15 September 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್