AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಚುನಾವಣೆ: ಸಮಾನ ಕ್ಷೇತ್ರಗಳಲ್ಲಿ ಬಿಜೆಪಿ – ಜೆಡಿಯು ಸ್ಪರ್ಧೆ

ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಸೀಟುಗಳ ಹಂಚಿಕೆ ಅಂತಿಮವಾಗಿದೆ. ಬಿಜೆಪಿ ಹಾಗೂ ಜೆಡಿಯು ಎರಡೂ ಪಕ್ಷಗಳು ಸಮಾನ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದ್ದು, 41 ಕ್ಷೇತ್ರಗಳನ್ನು ಮೈತ್ರಿಯ ಉಳಿದ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ. ಯಾವ ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧೆ ಎಂಬ ಮಾಹಿತಿ ಇಲ್ಲಿದೆ.

ಬಿಹಾರ ಚುನಾವಣೆ: ಸಮಾನ ಕ್ಷೇತ್ರಗಳಲ್ಲಿ ಬಿಜೆಪಿ - ಜೆಡಿಯು ಸ್ಪರ್ಧೆ
ಬಿಹಾರ ಚುನಾವಣೆ: NDA ಸೀಟು ಹಂಚಿಕೆ
ಪ್ರಸನ್ನ ಹೆಗಡೆ
| Edited By: |

Updated on:Oct 14, 2025 | 5:27 PM

Share

ಬಿಹಾರ, ಅಕ್ಟೋಬರ್​ 12: 2025ರ ಬಿಹಾರ ವಿಧಾನ ಸಭಾ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಅಂತಿಮವಾಗಿದ್ದು, ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳಲ್ಲಿ ಸಮಾನವಾಗಿ ಸ್ಪರ್ಧಿಸಲಿವೆ. ಒಟ್ಟು 243 ಕ್ಷೇತ್ರಗಳ ಪೈಕಿ 202 ಕ್ಷೇತ್ರಗಳು ಪ್ರಮುಖ 2 ಪಕ್ಷಗಳ ಪಾಲಾಗಿದ್ದು, ಉಳಿದ ಕ್ಷೇತ್ರಗಳನ್ನ ಎಲ್‌ಜೆಪಿ , ಹೆಚ್‌ಎಎಂ, ಆರ್‌ಎಲ್ಎಂಗೆ ಹಂಚಿಕೆ ಮಾಡಲಾಗಿದೆ.

ಯಾವ ಪಕ್ಷಕ್ಕೆ ಎಷ್ಟು ಸೀಟು?

  • ಜೆಡಿಯು (JDU): 101
  • ಭಾರತೀಯ ಜನತಾ ಪಕ್ಷ (BJP): 101
  • ಎಲ್‌ಜೆಪಿ (ಆರ್‌ವಿ): 29
  • ರಾಷ್ಟ್ರೀಯ ಲೋಕ ಮೋರ್ಚಾ (RLM): 6
  • ಹೆಚ್​ಎಎಮ್​(ಎಸ್): 6

ಬಿಹಾರ ಬಿಜೆಪಿಯಿಂದ ಮಾಹಿತಿ

ಚುನಾವಣೆಗೆ ಸೀಟು ಹಂಚಿಕೆ ಬೆನ್ನಲ್ಲೇ ಮಹಾಘಟಬಂದನ್​ ಕಾಲು ಎಳೆದಿರೋ ಬಿಹಾರ ಬಿಜೆಪಿ, ಎನ್​ಡಿಎಯದ್ದು ಏಕಮತ, ಆದರೆ ಮಹಾಘಟಬಂದನ್​ದು ಭಿನ್ನಮತ ಎಂದು ವ್ಯಂಗ್ಯವಾಡಿದೆ. ಎನ್‌ಡಿಎ ಮೈತ್ರಿಕೂಟದಲ್ಲಿನ ಎಲ್ಲ ಪಕ್ಷಗಳ ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿದೆ. ಎಲ್ಲ ಪಕ್ಷಗಳು ಒಟ್ಟಿಗೆ ಏಕತೆಯೊಂದಿಗೆ ಚುನಾವಣಾಕ್ಷೇತ್ರಕ್ಕೆ ಇಳಿದಿದ್ದೇವೆ. ಆದರೆ ಮಹಾಘಟಬಂದನ್​ನ ಪಕ್ಷಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಿವೆ. ನಾಮಪತ್ರ ಸಲ್ಲಿಸುವ ಮುಂಚೆ ಇವರಲ್ಲಿ ಮಾತುಕತೆ ನಡೆಯಬಹುದೇ ಎಂದು ಜನ ಕೇಳುತ್ತಿದ್ದಾರೆ ಎಂದು ಬಿಹಾರ ಬಿಜೆಪಿ ಹೇಳಿದೆ.

ಬಿಹಾರ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತ ನವೆಂಬರ್ 6ರಂದು ಮತ್ತು ಎರಡನೇ ಹಂತ ನವೆಂಬರ್ 11ರಂದು ನಡೆಯಲಿದೆ. ಮತ ಎಣಿಕೆ ನವೆಂಬರ್ 14ರಂದು ನಡೆಯಲಿದೆ. ವಿರೋಧ ಪಕ್ಷಗಳ ಮೈತ್ರಿಕೂಟ ಮಹಾಘಟಬಂದನ್​​ ಅಥವಾ ಇಂಡಿಯಾ ಬ್ಲಾಕ್ (ಆರ್‌ಜಿಡಿ, ಕಾಂಗ್ರೆಸ್ ಮತ್ತು ಇತರ ಕೆಲವು ಪಕ್ಷಗಳು) ಇನ್ನು ತಮ್ಮ ಸೀಟು ಹಂಚಿಕೆ ಬಗ್ಗೆ ಪ್ರಕಟಿಸಿಲ್ಲ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:16 pm, Sun, 12 October 25

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?