AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಮಾಜಿ ಸಚಿವ, ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೊನಾಗೆ ಬಲಿ

ಮೇವಾಲಾಲ್ ಚೌಧರಿ ಪುಣೆಯ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ವಾರ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದ ಮೇವಾಲಾಲ್ ಚೌಧರಿಗೆ ಸೋಂಕು ಇರುವುದು ದೃಢಪಟ್ಟಿತ್ತು.

ಬಿಹಾರದ ಮಾಜಿ ಸಚಿವ, ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೊನಾಗೆ ಬಲಿ
ಮೇವಾಲಾಲ್ ಚೌಧರಿ
sandhya thejappa
|

Updated on:Apr 19, 2021 | 9:26 AM

Share

ಬಿಹಾರ್: ಬಿಹಾರದ ಮಾಜಿ ಶಿಕ್ಷಣ ಸಚಿವ, ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಮೇವಾಲಾಲ್ ಚೌಧರಿ ಪುಣೆಯ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ವಾರ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದ ಮೇವಾಲಾಲ್ ಚೌಧರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಪುಣೆಯ ಪಾರಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಸುಮಾರು 4 ಗಂಟೆ ಹೊತ್ತಿಗೆ ರಕ್ಕಸ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಬಿಹಾರದ ತಾರಾಪುರ ಕ್ಷೇತ್ರದ ವಿಧಾನಸಭಾ ಶಾಸಕರಾಗಿದ್ದ ಮೇವಾಲಾಲ್ ಚೌಧರಿಯನ್ನು ಭ್ರಷ್ಟಚಾರದ ಆರೋಪದಡಿಯಲ್ಲಿ ಶಿಕ್ಷಣ ಸಚಿವ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು.

ಬಿಹಾರ ಸರ್ಕಾರ ಭಾನುವಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಬಿಹಾರದ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಮೇ 15 ರವರೆಗೆ ಸ್ಥಗಿತಗೊಳ್ಳಲಿವೆ ಎಂದು ರಾಜ್ಯ ಸರ್ಕಾರ ನಿರ್ಧರಿಸಿ ಘೋಷಿಸಿದೆ. ಜೊತೆಗೆ ರಾಜ್ಯದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಒಂದು ತಿಂಗಳ ಬೋನಸ್​ ವೇತನವನ್ನು ನೀಡಲು ಬಿಹಾರ ಸರ್ಕಾರ ನಿರ್ಧರಿಸಿದೆ.

ಬಿಹಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,24,117 ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,749 ಕ್ಕೆ ಏರಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ದೇಶದಲ್ಲಿ 24 ಗಂಟೆಯಲ್ಲಿ 2,61,500 ಹೊಸ ಕೊರೊನಾ ಪ್ರಕರಣಗಳು; ಆತಂಕ ಹುಟ್ಟಿಸಿದ ಸೋಂಕಿನ ವಿಭಿನ್ನ ಲಕ್ಷಣಗಳು

ಕೊವಿಡ್ ರಿಪೋರ್ಟ್ ಇಲ್ಲ ಅಂತ ಚಿಕಿತ್ಸೆಗೆ ನಕಾರ.. ಪತ್ನಿ-ಮಗಳ ಕಣ್ಣು ಮುಂದೆಯೇ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ

(Bihar Former minister Mewalal Choudhary died due to covid)

Published On - 9:13 am, Mon, 19 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ